Homeಕರೋನಾ ತಲ್ಲಣಕೊರೊನಾ ಎಫೆಕ್ಟ್: ಬೆಂಗಳೂರಿನ 50 ಸಾವಿರ ಅಂಗಡಿಗಳು ಶಾಶ್ವತವಾಗಿ ಬಂದ್

ಕೊರೊನಾ ಎಫೆಕ್ಟ್: ಬೆಂಗಳೂರಿನ 50 ಸಾವಿರ ಅಂಗಡಿಗಳು ಶಾಶ್ವತವಾಗಿ ಬಂದ್

ಮುಂಬರುವ ಹಬ್ಬದ ಋತುವಿನಲ್ಲಿ ಮಾರಾಟಗಳು ಹೆಚ್ಚಾಗದಿದ್ದರೆ ಇನ್ನೂ ಅನೇಕ ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಬೆಂಗಳೂರಿನಲ್ಲಿ ಸುಮಾರು 50,000 ಕ್ಕೂ ಹೆಚ್ಚು ಅಂಗಡಿಗಳು ಶಾಶ್ವತವಾಗಿ ಮುಚ್ಚಲ್ಪಟ್ಟುದೆ ಹಾಗೂ ಮುಂಬರುವ ಹಬ್ಬದ ಋತುವಿನಲ್ಲಿ ಮಾರಾಟಗಳು ಹೆಚ್ಚಾಗದಿದ್ದರೆ ಇನ್ನೂ ಅನೇಕ ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ರೆಡಿಮೇಡ್ ಉಡುಪುಗಳು, ಪಾದರಕ್ಷೆಗಳು, ಲೇಖನ ಸಾಮಗ್ರಿಗಳು, ಮೊಬೈಲ್ ಪರಿಕರಗಳು ಮತ್ತು ಸಣ್ಣ ತಿನಿಸುಗಳನ್ನು ಮಾರಾಟ ಮಾಡುವ ಅಂಗಡಿಗಳು ಮುಚ್ಚಲ್ಪಟ್ಟ ಪಟ್ಟಿಯಲ್ಲಿ ಸೇರಿವೆ.

ಮುಚ್ಚಲ್ಪಟ್ಟ ಅಂಗಡಿಗಳ ಮುಂದೆ ’ಟು-ಲೆಟ್’ ಬೋರ್ಡುಗಳ ನೇತಾಡುತ್ತಿರುವುದು ಬೆಂಗಳೂರಿನಾದ್ಯಂತ ಕಾಣುತ್ತಿರುವ ಸಾಮಾನ್ಯ ದೃಶ್ಯವಾಗಿದೆ.

ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಪ್ರಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಿತಿಯಲ್ಲಿ ಸುಮಾರು 4 ಲಕ್ಷ ಅಂಗಡಿಗಳಿದ್ದು, ಅದರಲ್ಲಿ 12% ರಿಂದ 15% ಮುಚ್ಚಲಾಗಿದೆ, ಅಷ್ಟೇ ಅಲ್ಲದೆ ಇನ್ನೂ 8% -10% ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

ಪ್ರಸ್ತುತ ಮುಚ್ಚಿರುವ ಹೆಚ್ಚಿನ ಅಂಗಡಿಗಳಲ್ಲಿ ಇತರ ರಾಜ್ಯಗಳ ಅಥವಾ ಬೆಂಗಳೂರಿನ ಹೊರಗಿನ ಕನ್ನಡಿಗರು ಬಾಡಿಗೆಗೆ ಪಡೆದದ್ದಾಗಿದೆ.

“ಅವರು ತಮ್ಮ ಮನೆಗಳ ಬಾಡಿಗೆ ಮತ್ತು ಅಂಗಡಿಗಳಿಗೆ ಕೂಡಾ ಬಾಡಿಗೆ ಪಾವತಿಸಬೇಕಾಗಿರುವುದರಿಂದ ಇದು ಎರಡೆರೆಡು ಹೊಡೆತ ಕೊಡುತ್ತದೆ. ಕೊರೊನಾ ಕಾಲದಲ್ಲಿ ವ್ಯಾಪಾರವು 25% ದಷ್ಟೂ ಇಲ್ಲದಾಗ, ಅವುಗಳು ಹೇಗೆ ಉಳಿಸಿಕೊಳ್ಳುತ್ತಾರೆ?” ಎಫ್‌ಕೆಸಿಸಿಐ ಅಧ್ಯಕ್ಷ ಕೆ ಜನಾರ್ಧನ್ ಪ್ರಶ್ನಿಸಿದ್ದಾರೆ.

“ನಾನು ಏಪ್ರಿಲ್‌ನಿಂದ ಬಾಡಿಗೆ ಪಾವತಿಸಿಲ್ಲ. ಲಾಕ್‌ಡೌನ್ ಕಾರಣ ನನ್ನ ಅಂಗಡಿಯನ್ನು ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಚ್ಚಲಾಯಿತು. ನಂತರ ಅದನ್ನು ಮತ್ತೆ ತೆರೆದರೂ ಗ್ರಾಹಕರು ಇಲ್ಲ” ಎಂದು ಸಂಜಯ್‌ನಗರದ ರೆಡಿಮೇಡ್ ಗಾರ್ಮೆಂಟ್ಸ್ ಅಂಗಡಿಯ ಮಾಲೀಕ ವಿಶ್ವಜಿತ್ ಹೇಳಿದ್ದಾರೆ.

ಅವರು ತಿಂಗಳಿಗೆ 12,000 ರೂಗಳನ್ನು ಬಾಡಿಗೆಯಾಗಿ ಪಾವತಿಸುತ್ತಾರೆ ಮತ್ತು ವಿಶ್ವಜಿತ್ ಪಾವತಿಸಿದ 2.5 ಲಕ್ಷ ರೂ. ಮುಂಗಡ ಹಣದಿಂದ ಬಾಡಿಗೆ ಬಾಕಿ ಕಡಿತಗೊಳಿಸುವುದಾಗಿ ಮಾಲೀಕರು ಹೇಳಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಶಾಸಕ ಮತ್ತು ಗರುಡ ಮಾಲ್ ಮಾಲೀಕ ಉದಯ್ ಗರುಡಾಚಾರ್ ಮಾತನಾಡಿ, ಬಾಡಿಗೆದಾರರು ನಾಲ್ಕು ತಿಂಗಳವರೆಗೆ ಯಾವುದೇ ವ್ಯವಹಾರವಿಲ್ಲದ ಕಾರಣ ಬಾಡಿಗೆ ಪಾವತಿಸುವುದು ಕಷ್ಟಕರವಾಗಿದೆ. ಮಾಲ್‌ನಲ್ಲೂ ಕಳೆದ ಎರಡು ತಿಂಗಳಲ್ಲಿ ನಾಲ್ಕು ಅಂಗಡಿಗಳು ಖಾಲಿ ಇವೆ. ಬಾಡಿಗೆದಾರರ ಪರಿಸ್ಥಿತಿಯನ್ನು ತಿಳಿದುಕೊಂಡು, ನಾವು ಬಾಡಿಗೆಗೆ ಒತ್ತಾಯಿಸುತ್ತಿಲ್ಲ. ಗರುಡ ಮಾಲ್‌ನಲ್ಲಿ, ನಾವು ಬಾಡಿಗೆದಾರರಿಂದ ಕೋರ್ ಏರಿಯಾ ನಿರ್ವಹಣೆ ಶುಲ್ಕವನ್ನು ಮಾತ್ರ ಸಂಗ್ರಹಿಸುತ್ತಿದ್ದೇವೆ. ಇದು ನಾವು ಪರಸ್ಪರ ಸಹಕರಿಸುವ ಸಮಯ ಎಂದು ಹೇಳಿದ್ದಾರೆ.

ಕೊರೊನಾ ಪ್ರಾರಂಭವಾಗುವುದಕ್ಕಿಂತ ಕೆಲವೇ ತಿಂಗಳುಗಳ ಮೊದಲು ಪ್ರಾರಂಭವಾದ ವ್ಯವಹಾರಗಳ ಮಾಲೀಕರು ಬಾಡಿಗೆ ಮತ್ತು ಸಾಲದ ಕಂತುಗಳನ್ನು ಪಾವತಿಸಲು ಹೆಣಗಾಡುತ್ತಿದ್ದಾರೆ.

“ನಾನು ಬೇಸರದಲ್ಲೆ ಭವಿಷ್ಯವನ್ನು ನೋಡುತ್ತಿದ್ದೇನೆ. ಏನು ಮಾಡಬೇಕೆಂದು ನನಗೆ ತಿಳಿದಿಲ್ಲ” ಎಂದು ಜನವರಿ ತಿಂಗಳಲ್ಲಿ ಸಂಜಯ್‌ನಗರದ ಬಳಿ ಉಪಾಹಾರ ಗೃಹವನ್ನು ಪ್ರಾರಂಭಿಸಿದ ಅವಿನಾಶ್ ಹೇಳುತ್ತಾರೆ.

ಕೃಪೆ: ಟೈಮ್ಸ್ ಆಫ್‌ ಇಂಡಿಯಾ


ಓದಿ: ಕಿಮ್ಸ್‌ನಲ್ಲಿ ಆಮ್ಲಜನಕ ವಿತರಣೆ ಕೊರತೆ: ಕೊರೊನಾ ರೋಗಿಗಳ ಸ್ಥಳಾಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...