Homeಕರೋನಾ ತಲ್ಲಣಕೊರೊನಾ ಎಫೆಕ್ಟ್: ಬೆಂಗಳೂರಿನ 50 ಸಾವಿರ ಅಂಗಡಿಗಳು ಶಾಶ್ವತವಾಗಿ ಬಂದ್

ಕೊರೊನಾ ಎಫೆಕ್ಟ್: ಬೆಂಗಳೂರಿನ 50 ಸಾವಿರ ಅಂಗಡಿಗಳು ಶಾಶ್ವತವಾಗಿ ಬಂದ್

ಮುಂಬರುವ ಹಬ್ಬದ ಋತುವಿನಲ್ಲಿ ಮಾರಾಟಗಳು ಹೆಚ್ಚಾಗದಿದ್ದರೆ ಇನ್ನೂ ಅನೇಕ ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಬೆಂಗಳೂರಿನಲ್ಲಿ ಸುಮಾರು 50,000 ಕ್ಕೂ ಹೆಚ್ಚು ಅಂಗಡಿಗಳು ಶಾಶ್ವತವಾಗಿ ಮುಚ್ಚಲ್ಪಟ್ಟುದೆ ಹಾಗೂ ಮುಂಬರುವ ಹಬ್ಬದ ಋತುವಿನಲ್ಲಿ ಮಾರಾಟಗಳು ಹೆಚ್ಚಾಗದಿದ್ದರೆ ಇನ್ನೂ ಅನೇಕ ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ರೆಡಿಮೇಡ್ ಉಡುಪುಗಳು, ಪಾದರಕ್ಷೆಗಳು, ಲೇಖನ ಸಾಮಗ್ರಿಗಳು, ಮೊಬೈಲ್ ಪರಿಕರಗಳು ಮತ್ತು ಸಣ್ಣ ತಿನಿಸುಗಳನ್ನು ಮಾರಾಟ ಮಾಡುವ ಅಂಗಡಿಗಳು ಮುಚ್ಚಲ್ಪಟ್ಟ ಪಟ್ಟಿಯಲ್ಲಿ ಸೇರಿವೆ.

ಮುಚ್ಚಲ್ಪಟ್ಟ ಅಂಗಡಿಗಳ ಮುಂದೆ ’ಟು-ಲೆಟ್’ ಬೋರ್ಡುಗಳ ನೇತಾಡುತ್ತಿರುವುದು ಬೆಂಗಳೂರಿನಾದ್ಯಂತ ಕಾಣುತ್ತಿರುವ ಸಾಮಾನ್ಯ ದೃಶ್ಯವಾಗಿದೆ.

ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಪ್ರಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಿತಿಯಲ್ಲಿ ಸುಮಾರು 4 ಲಕ್ಷ ಅಂಗಡಿಗಳಿದ್ದು, ಅದರಲ್ಲಿ 12% ರಿಂದ 15% ಮುಚ್ಚಲಾಗಿದೆ, ಅಷ್ಟೇ ಅಲ್ಲದೆ ಇನ್ನೂ 8% -10% ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

ಪ್ರಸ್ತುತ ಮುಚ್ಚಿರುವ ಹೆಚ್ಚಿನ ಅಂಗಡಿಗಳಲ್ಲಿ ಇತರ ರಾಜ್ಯಗಳ ಅಥವಾ ಬೆಂಗಳೂರಿನ ಹೊರಗಿನ ಕನ್ನಡಿಗರು ಬಾಡಿಗೆಗೆ ಪಡೆದದ್ದಾಗಿದೆ.

“ಅವರು ತಮ್ಮ ಮನೆಗಳ ಬಾಡಿಗೆ ಮತ್ತು ಅಂಗಡಿಗಳಿಗೆ ಕೂಡಾ ಬಾಡಿಗೆ ಪಾವತಿಸಬೇಕಾಗಿರುವುದರಿಂದ ಇದು ಎರಡೆರೆಡು ಹೊಡೆತ ಕೊಡುತ್ತದೆ. ಕೊರೊನಾ ಕಾಲದಲ್ಲಿ ವ್ಯಾಪಾರವು 25% ದಷ್ಟೂ ಇಲ್ಲದಾಗ, ಅವುಗಳು ಹೇಗೆ ಉಳಿಸಿಕೊಳ್ಳುತ್ತಾರೆ?” ಎಫ್‌ಕೆಸಿಸಿಐ ಅಧ್ಯಕ್ಷ ಕೆ ಜನಾರ್ಧನ್ ಪ್ರಶ್ನಿಸಿದ್ದಾರೆ.

“ನಾನು ಏಪ್ರಿಲ್‌ನಿಂದ ಬಾಡಿಗೆ ಪಾವತಿಸಿಲ್ಲ. ಲಾಕ್‌ಡೌನ್ ಕಾರಣ ನನ್ನ ಅಂಗಡಿಯನ್ನು ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಚ್ಚಲಾಯಿತು. ನಂತರ ಅದನ್ನು ಮತ್ತೆ ತೆರೆದರೂ ಗ್ರಾಹಕರು ಇಲ್ಲ” ಎಂದು ಸಂಜಯ್‌ನಗರದ ರೆಡಿಮೇಡ್ ಗಾರ್ಮೆಂಟ್ಸ್ ಅಂಗಡಿಯ ಮಾಲೀಕ ವಿಶ್ವಜಿತ್ ಹೇಳಿದ್ದಾರೆ.

ಅವರು ತಿಂಗಳಿಗೆ 12,000 ರೂಗಳನ್ನು ಬಾಡಿಗೆಯಾಗಿ ಪಾವತಿಸುತ್ತಾರೆ ಮತ್ತು ವಿಶ್ವಜಿತ್ ಪಾವತಿಸಿದ 2.5 ಲಕ್ಷ ರೂ. ಮುಂಗಡ ಹಣದಿಂದ ಬಾಡಿಗೆ ಬಾಕಿ ಕಡಿತಗೊಳಿಸುವುದಾಗಿ ಮಾಲೀಕರು ಹೇಳಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಶಾಸಕ ಮತ್ತು ಗರುಡ ಮಾಲ್ ಮಾಲೀಕ ಉದಯ್ ಗರುಡಾಚಾರ್ ಮಾತನಾಡಿ, ಬಾಡಿಗೆದಾರರು ನಾಲ್ಕು ತಿಂಗಳವರೆಗೆ ಯಾವುದೇ ವ್ಯವಹಾರವಿಲ್ಲದ ಕಾರಣ ಬಾಡಿಗೆ ಪಾವತಿಸುವುದು ಕಷ್ಟಕರವಾಗಿದೆ. ಮಾಲ್‌ನಲ್ಲೂ ಕಳೆದ ಎರಡು ತಿಂಗಳಲ್ಲಿ ನಾಲ್ಕು ಅಂಗಡಿಗಳು ಖಾಲಿ ಇವೆ. ಬಾಡಿಗೆದಾರರ ಪರಿಸ್ಥಿತಿಯನ್ನು ತಿಳಿದುಕೊಂಡು, ನಾವು ಬಾಡಿಗೆಗೆ ಒತ್ತಾಯಿಸುತ್ತಿಲ್ಲ. ಗರುಡ ಮಾಲ್‌ನಲ್ಲಿ, ನಾವು ಬಾಡಿಗೆದಾರರಿಂದ ಕೋರ್ ಏರಿಯಾ ನಿರ್ವಹಣೆ ಶುಲ್ಕವನ್ನು ಮಾತ್ರ ಸಂಗ್ರಹಿಸುತ್ತಿದ್ದೇವೆ. ಇದು ನಾವು ಪರಸ್ಪರ ಸಹಕರಿಸುವ ಸಮಯ ಎಂದು ಹೇಳಿದ್ದಾರೆ.

ಕೊರೊನಾ ಪ್ರಾರಂಭವಾಗುವುದಕ್ಕಿಂತ ಕೆಲವೇ ತಿಂಗಳುಗಳ ಮೊದಲು ಪ್ರಾರಂಭವಾದ ವ್ಯವಹಾರಗಳ ಮಾಲೀಕರು ಬಾಡಿಗೆ ಮತ್ತು ಸಾಲದ ಕಂತುಗಳನ್ನು ಪಾವತಿಸಲು ಹೆಣಗಾಡುತ್ತಿದ್ದಾರೆ.

“ನಾನು ಬೇಸರದಲ್ಲೆ ಭವಿಷ್ಯವನ್ನು ನೋಡುತ್ತಿದ್ದೇನೆ. ಏನು ಮಾಡಬೇಕೆಂದು ನನಗೆ ತಿಳಿದಿಲ್ಲ” ಎಂದು ಜನವರಿ ತಿಂಗಳಲ್ಲಿ ಸಂಜಯ್‌ನಗರದ ಬಳಿ ಉಪಾಹಾರ ಗೃಹವನ್ನು ಪ್ರಾರಂಭಿಸಿದ ಅವಿನಾಶ್ ಹೇಳುತ್ತಾರೆ.

ಕೃಪೆ: ಟೈಮ್ಸ್ ಆಫ್‌ ಇಂಡಿಯಾ


ಓದಿ: ಕಿಮ್ಸ್‌ನಲ್ಲಿ ಆಮ್ಲಜನಕ ವಿತರಣೆ ಕೊರತೆ: ಕೊರೊನಾ ರೋಗಿಗಳ ಸ್ಥಳಾಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...