Homeಕರೋನಾ ತಲ್ಲಣಕೊರೊನಾ ಎಫೆಕ್ಟ್: ಬೆಂಗಳೂರಿನ 50 ಸಾವಿರ ಅಂಗಡಿಗಳು ಶಾಶ್ವತವಾಗಿ ಬಂದ್

ಕೊರೊನಾ ಎಫೆಕ್ಟ್: ಬೆಂಗಳೂರಿನ 50 ಸಾವಿರ ಅಂಗಡಿಗಳು ಶಾಶ್ವತವಾಗಿ ಬಂದ್

ಮುಂಬರುವ ಹಬ್ಬದ ಋತುವಿನಲ್ಲಿ ಮಾರಾಟಗಳು ಹೆಚ್ಚಾಗದಿದ್ದರೆ ಇನ್ನೂ ಅನೇಕ ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಬೆಂಗಳೂರಿನಲ್ಲಿ ಸುಮಾರು 50,000 ಕ್ಕೂ ಹೆಚ್ಚು ಅಂಗಡಿಗಳು ಶಾಶ್ವತವಾಗಿ ಮುಚ್ಚಲ್ಪಟ್ಟುದೆ ಹಾಗೂ ಮುಂಬರುವ ಹಬ್ಬದ ಋತುವಿನಲ್ಲಿ ಮಾರಾಟಗಳು ಹೆಚ್ಚಾಗದಿದ್ದರೆ ಇನ್ನೂ ಅನೇಕ ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ರೆಡಿಮೇಡ್ ಉಡುಪುಗಳು, ಪಾದರಕ್ಷೆಗಳು, ಲೇಖನ ಸಾಮಗ್ರಿಗಳು, ಮೊಬೈಲ್ ಪರಿಕರಗಳು ಮತ್ತು ಸಣ್ಣ ತಿನಿಸುಗಳನ್ನು ಮಾರಾಟ ಮಾಡುವ ಅಂಗಡಿಗಳು ಮುಚ್ಚಲ್ಪಟ್ಟ ಪಟ್ಟಿಯಲ್ಲಿ ಸೇರಿವೆ.

ಮುಚ್ಚಲ್ಪಟ್ಟ ಅಂಗಡಿಗಳ ಮುಂದೆ ’ಟು-ಲೆಟ್’ ಬೋರ್ಡುಗಳ ನೇತಾಡುತ್ತಿರುವುದು ಬೆಂಗಳೂರಿನಾದ್ಯಂತ ಕಾಣುತ್ತಿರುವ ಸಾಮಾನ್ಯ ದೃಶ್ಯವಾಗಿದೆ.

ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಪ್ರಕಾರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಿತಿಯಲ್ಲಿ ಸುಮಾರು 4 ಲಕ್ಷ ಅಂಗಡಿಗಳಿದ್ದು, ಅದರಲ್ಲಿ 12% ರಿಂದ 15% ಮುಚ್ಚಲಾಗಿದೆ, ಅಷ್ಟೇ ಅಲ್ಲದೆ ಇನ್ನೂ 8% -10% ಅಂಗಡಿಗಳು ಮುಚ್ಚುವ ಹಾದಿಯಲ್ಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

ಪ್ರಸ್ತುತ ಮುಚ್ಚಿರುವ ಹೆಚ್ಚಿನ ಅಂಗಡಿಗಳಲ್ಲಿ ಇತರ ರಾಜ್ಯಗಳ ಅಥವಾ ಬೆಂಗಳೂರಿನ ಹೊರಗಿನ ಕನ್ನಡಿಗರು ಬಾಡಿಗೆಗೆ ಪಡೆದದ್ದಾಗಿದೆ.

“ಅವರು ತಮ್ಮ ಮನೆಗಳ ಬಾಡಿಗೆ ಮತ್ತು ಅಂಗಡಿಗಳಿಗೆ ಕೂಡಾ ಬಾಡಿಗೆ ಪಾವತಿಸಬೇಕಾಗಿರುವುದರಿಂದ ಇದು ಎರಡೆರೆಡು ಹೊಡೆತ ಕೊಡುತ್ತದೆ. ಕೊರೊನಾ ಕಾಲದಲ್ಲಿ ವ್ಯಾಪಾರವು 25% ದಷ್ಟೂ ಇಲ್ಲದಾಗ, ಅವುಗಳು ಹೇಗೆ ಉಳಿಸಿಕೊಳ್ಳುತ್ತಾರೆ?” ಎಫ್‌ಕೆಸಿಸಿಐ ಅಧ್ಯಕ್ಷ ಕೆ ಜನಾರ್ಧನ್ ಪ್ರಶ್ನಿಸಿದ್ದಾರೆ.

“ನಾನು ಏಪ್ರಿಲ್‌ನಿಂದ ಬಾಡಿಗೆ ಪಾವತಿಸಿಲ್ಲ. ಲಾಕ್‌ಡೌನ್ ಕಾರಣ ನನ್ನ ಅಂಗಡಿಯನ್ನು ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮುಚ್ಚಲಾಯಿತು. ನಂತರ ಅದನ್ನು ಮತ್ತೆ ತೆರೆದರೂ ಗ್ರಾಹಕರು ಇಲ್ಲ” ಎಂದು ಸಂಜಯ್‌ನಗರದ ರೆಡಿಮೇಡ್ ಗಾರ್ಮೆಂಟ್ಸ್ ಅಂಗಡಿಯ ಮಾಲೀಕ ವಿಶ್ವಜಿತ್ ಹೇಳಿದ್ದಾರೆ.

ಅವರು ತಿಂಗಳಿಗೆ 12,000 ರೂಗಳನ್ನು ಬಾಡಿಗೆಯಾಗಿ ಪಾವತಿಸುತ್ತಾರೆ ಮತ್ತು ವಿಶ್ವಜಿತ್ ಪಾವತಿಸಿದ 2.5 ಲಕ್ಷ ರೂ. ಮುಂಗಡ ಹಣದಿಂದ ಬಾಡಿಗೆ ಬಾಕಿ ಕಡಿತಗೊಳಿಸುವುದಾಗಿ ಮಾಲೀಕರು ಹೇಳಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಶಾಸಕ ಮತ್ತು ಗರುಡ ಮಾಲ್ ಮಾಲೀಕ ಉದಯ್ ಗರುಡಾಚಾರ್ ಮಾತನಾಡಿ, ಬಾಡಿಗೆದಾರರು ನಾಲ್ಕು ತಿಂಗಳವರೆಗೆ ಯಾವುದೇ ವ್ಯವಹಾರವಿಲ್ಲದ ಕಾರಣ ಬಾಡಿಗೆ ಪಾವತಿಸುವುದು ಕಷ್ಟಕರವಾಗಿದೆ. ಮಾಲ್‌ನಲ್ಲೂ ಕಳೆದ ಎರಡು ತಿಂಗಳಲ್ಲಿ ನಾಲ್ಕು ಅಂಗಡಿಗಳು ಖಾಲಿ ಇವೆ. ಬಾಡಿಗೆದಾರರ ಪರಿಸ್ಥಿತಿಯನ್ನು ತಿಳಿದುಕೊಂಡು, ನಾವು ಬಾಡಿಗೆಗೆ ಒತ್ತಾಯಿಸುತ್ತಿಲ್ಲ. ಗರುಡ ಮಾಲ್‌ನಲ್ಲಿ, ನಾವು ಬಾಡಿಗೆದಾರರಿಂದ ಕೋರ್ ಏರಿಯಾ ನಿರ್ವಹಣೆ ಶುಲ್ಕವನ್ನು ಮಾತ್ರ ಸಂಗ್ರಹಿಸುತ್ತಿದ್ದೇವೆ. ಇದು ನಾವು ಪರಸ್ಪರ ಸಹಕರಿಸುವ ಸಮಯ ಎಂದು ಹೇಳಿದ್ದಾರೆ.

ಕೊರೊನಾ ಪ್ರಾರಂಭವಾಗುವುದಕ್ಕಿಂತ ಕೆಲವೇ ತಿಂಗಳುಗಳ ಮೊದಲು ಪ್ರಾರಂಭವಾದ ವ್ಯವಹಾರಗಳ ಮಾಲೀಕರು ಬಾಡಿಗೆ ಮತ್ತು ಸಾಲದ ಕಂತುಗಳನ್ನು ಪಾವತಿಸಲು ಹೆಣಗಾಡುತ್ತಿದ್ದಾರೆ.

“ನಾನು ಬೇಸರದಲ್ಲೆ ಭವಿಷ್ಯವನ್ನು ನೋಡುತ್ತಿದ್ದೇನೆ. ಏನು ಮಾಡಬೇಕೆಂದು ನನಗೆ ತಿಳಿದಿಲ್ಲ” ಎಂದು ಜನವರಿ ತಿಂಗಳಲ್ಲಿ ಸಂಜಯ್‌ನಗರದ ಬಳಿ ಉಪಾಹಾರ ಗೃಹವನ್ನು ಪ್ರಾರಂಭಿಸಿದ ಅವಿನಾಶ್ ಹೇಳುತ್ತಾರೆ.

ಕೃಪೆ: ಟೈಮ್ಸ್ ಆಫ್‌ ಇಂಡಿಯಾ


ಓದಿ: ಕಿಮ್ಸ್‌ನಲ್ಲಿ ಆಮ್ಲಜನಕ ವಿತರಣೆ ಕೊರತೆ: ಕೊರೊನಾ ರೋಗಿಗಳ ಸ್ಥಳಾಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...