Homeಮುಖಪುಟಕೊರೊನಾ ಎಫೆಕ್ಟ್: ಜೈಲು ಖೈದಿಗಳಿಗೆ ಪೆರೋಲ್‌ ನೀಡಲು ಸುಪ್ರೀಂ ನಿರ್ದೇಶನ

ಕೊರೊನಾ ಎಫೆಕ್ಟ್: ಜೈಲು ಖೈದಿಗಳಿಗೆ ಪೆರೋಲ್‌ ನೀಡಲು ಸುಪ್ರೀಂ ನಿರ್ದೇಶನ

- Advertisement -
- Advertisement -

ಕಡಿಮೆ ಅಪರಾಧಗಲ್ಲಿ ಭಾಗಿಯಾದ ಕೈದಿಗಳಿಗೆ ಪೆರೋಲ್ ನೀಡುವುದನ್ನು ಪರಿಗಣಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

COVID-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಕಾರಾಗೃಹಗಳಲ್ಲಿ ಜನದಟ್ಟಣೆ ತಪ್ಪಿಸಲು ಸುಪ್ರೀಂ ಕೋರ್ಟ್ ಸೋಮವಾರ ಈ ನಿರ್ದೇಶನ ನೀಡಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೈದಿಗಳ ವರ್ಗವನ್ನು ನಿರ್ಧರಿಸಲು ಉನ್ನತ ಮಟ್ಟದ ಸಮಿತಿಗಳನ್ನು ರಚಿಸುತ್ತವೆ. ಅವು ರಾಜ್ಯದ ಕಾನೂನು ಸೇವಾ ಪ್ರಾಧಿಕಾರದೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದೆ.

ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಹೊಂದಿರುವ ಅಪರಾಧಗಳಿಗೆ ಜೈಲು ಶಿಕ್ಷೆಗೆ ಪೆರೋಲ್ ನೀಡಬಹುದು. ನಾಲ್ಕರಿಂದ ಆರು ವಾರಗಳವರೆಗೆ ಪೆರೋಲ್‌ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬಾಬ್ಡೆ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.

“ಆದ್ದರಿಂದ ಪ್ರತಿ ರಾಜ್ಯವು ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅಧ್ಯಕ್ಷರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕೆಂದು ನಾವು ನಿರ್ದೇಶಿಸುತ್ತೇವೆ. ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಕೈದಿಗಳ ವರ್ಗವನ್ನು ನಿರ್ಧರಿಸಿ ಅವರನ್ನು ನಾಲ್ಕರಿಂದ ಆರು ವಾರಗಳವರೆಗೆ ಅಥವಾ ಮಧ್ಯಂತರ ಜಾಮೀನಿನ ಮೇಲೆ ಪೆರೋಲ್ ಮೇಲೆ ಬಿಡುಗಡೆ ಮಾಡಬಹುದು ಎಂದು ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ್‌‌ ರಾವ್‌ ಮತ್ತು ಸೂರ್ಯ ಕಾಂತ್ ರವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ನ್ಯಾಯಾಲಯವು ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿದೆ.

ಕಾರಾಗೃಹಗಳ ದಟ್ಟಣೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಉನ್ನತ ನ್ಯಾಯಾಲಯವು ದೇಶದಲ್ಲಿ ಸುಮಾರು 1,339 ಕಾರಾಗೃಹಗಳಿದ್ದು, 4,66,084 ಖೈದಿಗಳಿದ್ದಾರೆ ಎಂದು ಹೇಳಿದೆ. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಯ ವರದಿಯನ್ನು ಉಲ್ಲೇಖಿಸಿ, ಜೈಲುಗಳ ಸಾಮರ್ಥ್ಯಕ್ಕಿಂತ ಹೆಚ್ಚಿನ ಖೈದಿಗಳನ್ನು ಒಳಗೊಂಡಿದೆ ಎಂದು ದೂರಿದೆ. ಅದರಲ್ಲಿಯೂ ಸಿಕ್ಕಿಂ ಮತ್ತು ಉತ್ತರ ಪ್ರದೇಶದ ಜೈಲುಗಳು ಅತಿಹೆಚ್ಚಿನ ಖೈದಿಗಳನ್ನು ಹೊಂದಿದ್ದಾರೆ ಎಂದಿದೆ.

ಹಲವಾರು ಜೈಲು ಸಿಬ್ಬಂದಿ ಮತ್ತು ಭೇಟಿ ನೀಡುವವರು ನಿಯಮಿತವಾಗಿ ಕಾರಾಗೃಹಗಳಿಗೆ ಪ್ರವೇಶಿಸುತ್ತಾರೆ. ಕಾರಾಗೃಹಗಳಂತಹ ಮುಚ್ಚಿದ ಸ್ಥಳಗಳಲ್ಲಿ ವೈರಸ್‌ಗಳು ವೇಗವಾಗಿ ವೃದ್ಧಿಸಬಹುದು. ಆದ್ದರಿಂದ, COVID-19 ಅನ್ನು ಜೈಲು ಕೈದಿಗಳಿಗೆ ರವಾನಿಸುವ ಹೆಚ್ಚಿನ ಅಪಾಯವಿದೆ. ಹಾಗಾಗಿ ಜೈಲು ಖೈದಿಗಳು ಸಹ ಇತರ ವೈರಲ್ ಕಾಯಿಲೆಗಳಂತೆ, COVID 19 ಗೆ ಒಳಗಾಗುವ ಸಾಧ್ಯತೆ ಹೆಚ್ಚು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಕೃಪೆ: ಲೈವ್‌ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...