Homeಮುಖಪುಟಕೊರೊನಾ ಎಫೆಕ್ಟ್: ಜೈಲು ಖೈದಿಗಳಿಗೆ ಪೆರೋಲ್‌ ನೀಡಲು ಸುಪ್ರೀಂ ನಿರ್ದೇಶನ

ಕೊರೊನಾ ಎಫೆಕ್ಟ್: ಜೈಲು ಖೈದಿಗಳಿಗೆ ಪೆರೋಲ್‌ ನೀಡಲು ಸುಪ್ರೀಂ ನಿರ್ದೇಶನ

- Advertisement -
- Advertisement -

ಕಡಿಮೆ ಅಪರಾಧಗಲ್ಲಿ ಭಾಗಿಯಾದ ಕೈದಿಗಳಿಗೆ ಪೆರೋಲ್ ನೀಡುವುದನ್ನು ಪರಿಗಣಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

COVID-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಕಾರಾಗೃಹಗಳಲ್ಲಿ ಜನದಟ್ಟಣೆ ತಪ್ಪಿಸಲು ಸುಪ್ರೀಂ ಕೋರ್ಟ್ ಸೋಮವಾರ ಈ ನಿರ್ದೇಶನ ನೀಡಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕೈದಿಗಳ ವರ್ಗವನ್ನು ನಿರ್ಧರಿಸಲು ಉನ್ನತ ಮಟ್ಟದ ಸಮಿತಿಗಳನ್ನು ರಚಿಸುತ್ತವೆ. ಅವು ರಾಜ್ಯದ ಕಾನೂನು ಸೇವಾ ಪ್ರಾಧಿಕಾರದೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದೆ.

ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಹೊಂದಿರುವ ಅಪರಾಧಗಳಿಗೆ ಜೈಲು ಶಿಕ್ಷೆಗೆ ಪೆರೋಲ್ ನೀಡಬಹುದು. ನಾಲ್ಕರಿಂದ ಆರು ವಾರಗಳವರೆಗೆ ಪೆರೋಲ್‌ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬಾಬ್ಡೆ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.

“ಆದ್ದರಿಂದ ಪ್ರತಿ ರಾಜ್ಯವು ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅಧ್ಯಕ್ಷರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕೆಂದು ನಾವು ನಿರ್ದೇಶಿಸುತ್ತೇವೆ. ರಾಜ್ಯ ಕಾನೂನು ಸೇವಾ ಪ್ರಾಧಿಕಾರವು ಕೈದಿಗಳ ವರ್ಗವನ್ನು ನಿರ್ಧರಿಸಿ ಅವರನ್ನು ನಾಲ್ಕರಿಂದ ಆರು ವಾರಗಳವರೆಗೆ ಅಥವಾ ಮಧ್ಯಂತರ ಜಾಮೀನಿನ ಮೇಲೆ ಪೆರೋಲ್ ಮೇಲೆ ಬಿಡುಗಡೆ ಮಾಡಬಹುದು ಎಂದು ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ್‌‌ ರಾವ್‌ ಮತ್ತು ಸೂರ್ಯ ಕಾಂತ್ ರವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ನ್ಯಾಯಾಲಯವು ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿದೆ.

ಕಾರಾಗೃಹಗಳ ದಟ್ಟಣೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಉನ್ನತ ನ್ಯಾಯಾಲಯವು ದೇಶದಲ್ಲಿ ಸುಮಾರು 1,339 ಕಾರಾಗೃಹಗಳಿದ್ದು, 4,66,084 ಖೈದಿಗಳಿದ್ದಾರೆ ಎಂದು ಹೇಳಿದೆ. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ (ಎನ್‌ಸಿಆರ್‌ಬಿ) ಯ ವರದಿಯನ್ನು ಉಲ್ಲೇಖಿಸಿ, ಜೈಲುಗಳ ಸಾಮರ್ಥ್ಯಕ್ಕಿಂತ ಹೆಚ್ಚಿನ ಖೈದಿಗಳನ್ನು ಒಳಗೊಂಡಿದೆ ಎಂದು ದೂರಿದೆ. ಅದರಲ್ಲಿಯೂ ಸಿಕ್ಕಿಂ ಮತ್ತು ಉತ್ತರ ಪ್ರದೇಶದ ಜೈಲುಗಳು ಅತಿಹೆಚ್ಚಿನ ಖೈದಿಗಳನ್ನು ಹೊಂದಿದ್ದಾರೆ ಎಂದಿದೆ.

ಹಲವಾರು ಜೈಲು ಸಿಬ್ಬಂದಿ ಮತ್ತು ಭೇಟಿ ನೀಡುವವರು ನಿಯಮಿತವಾಗಿ ಕಾರಾಗೃಹಗಳಿಗೆ ಪ್ರವೇಶಿಸುತ್ತಾರೆ. ಕಾರಾಗೃಹಗಳಂತಹ ಮುಚ್ಚಿದ ಸ್ಥಳಗಳಲ್ಲಿ ವೈರಸ್‌ಗಳು ವೇಗವಾಗಿ ವೃದ್ಧಿಸಬಹುದು. ಆದ್ದರಿಂದ, COVID-19 ಅನ್ನು ಜೈಲು ಕೈದಿಗಳಿಗೆ ರವಾನಿಸುವ ಹೆಚ್ಚಿನ ಅಪಾಯವಿದೆ. ಹಾಗಾಗಿ ಜೈಲು ಖೈದಿಗಳು ಸಹ ಇತರ ವೈರಲ್ ಕಾಯಿಲೆಗಳಂತೆ, COVID 19 ಗೆ ಒಳಗಾಗುವ ಸಾಧ್ಯತೆ ಹೆಚ್ಚು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಕೃಪೆ: ಲೈವ್‌ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...