Homeಆರೋಗ್ಯಕೊರೊನಾ ಪರೀಕ್ಷೆ: ತುಮಕೂರಿನಲ್ಲಿ 11 ಪ್ರಕರಣಗಳು ನೆಗೆಟಿವ್, ಸೋಂಕಿತರು ಒಬ್ಬರೂ ಇಲ್ಲ

ಕೊರೊನಾ ಪರೀಕ್ಷೆ: ತುಮಕೂರಿನಲ್ಲಿ 11 ಪ್ರಕರಣಗಳು ನೆಗೆಟಿವ್, ಸೋಂಕಿತರು ಒಬ್ಬರೂ ಇಲ್ಲ

- Advertisement -
- Advertisement -

ತುಮಕೂರು ನಗರದಲ್ಲಿ ಕೊರೊನಾ ಹರಡಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ನಿಟ್ಟುಸಿರು ಬಿಡುವ ಸುದ್ದಿಯೊಂದು ಹೊರಬಿದ್ದಿದ್ದು ಪರೀಕ್ಷೆ ನಡೆಸಿದ 11 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ.

ಚಿಕ್ಕಪೇಟೆಯಲ್ಲಿ ಇಬ್ಬರಿಗೆ ಕೊರೊನಾ ತಗುಲಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ವೈದ್ಯರ ತಂಡ ಅವರಿಬ್ಬರ ರಕ್ತ ಮತ್ತು ಕಫಾ ಮಾದಿರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿತ್ತು. ಪರೀಕ್ಷೆಯ ನಂತರ ಅವರಲ್ಲಿ ಯಾವುದೇ ಸೋಂಕು ಇಲ್ಲವೆಂಬುದು ದೃಢಪಟ್ಟಿದೆ.

ವಿದೇಶದಿಂದ ನಗರಕ್ಕೆ ಆಗಮಿಸಿರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಎಲ್ಲರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ವಹಿಸಿದೆ. ಕೊರೊನಾ ವೈರಸ್ ಹರಡದಂತೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಶಂಕಿತ ವೈರಸ್ ಸೋಂಕಿತರು ಇಲ್ಲವೇ ವೈರಸ್ ಸೋಂಕು ತಗುಲಿರುವವರನ್ನು ನೋಡಿಕೊಳ್ಳಲು ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ ತುಮಕೂರಿನಲ್ಲಿ ಕೊರೊನಾ ವೈರಸ್ ಹರಡದಂತೆ ವ್ಯಾಪಕ ಕ್ರಮ ಕೈಗೊಂಡಿದ್ದೇವೆ. ಜಿಲ್ಲಾಸ್ಪತ್ರೆಯಲ್ಲಿ 14, ಶ್ರೀದೇವಿ, ಸಿದ್ದಾರ್ಥ ಮೆಡಿಕಲ್ ಕಾಲೇಜು ಮತ್ತು ಸಿದ್ದಗಂಗಾ ಆಸ್ಪತ್ರೆಯಲ್ಲಿ ನಿಗಾ ಘಟಕಗಳನ್ನು ಸ್ಥಾಪಿಸಲಾಗಿದೆ. ಕೊರೋನ ಶಂಕಿತ  11 ಮಂದಿಯ ರಕ್ತ ಮತ್ತು ಕಫಾ ಮಾದರಿಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ಕಳಿಸಲಾಗಿತ್ತು. ಎಲ್ಲಾ 11 ಪ್ರಕರಣಗಳು ನೆಗೆಟಿವ್ ಬಂದಿವೆ. ನಗರದಲ್ಲಿ ಸೋಂಕಿತರು ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುನ್ನೆಚ್ಚರಿಕೆ ಕ್ರಮವಾಗಿ ತುಮಕೂರು ನಗರದಲ್ಲಿ ಮಾರ್ಚ್ 21ರಿಂದ ನಿಷೇಧಾಜ್ಞೆ ಜಾರಿಗೊಳಿಸಿದೆ. ನಾಲ್ವರಿಗಿಂತ ಹೆಚ್ಚು ಮಂದಿ ಒಂದೆಡೆ ಸೇರಬಾರದೆಂದು ನಿಷೇಧಿಸಲಾಗಿದೆ. ವಿದೇಶದಿಂದ ಬಂದಿರುವ 90ಕ್ಕೂ ಹೆಚ್ಚು ಜನರ ಮೇಲೆ ತೀವ್ರ ನಿಗಾ ಇಟ್ಟಿದ್ದು, ದಿನಕ್ಕೆ ಮೂರು ಬಾರಿ ದೂರವಾಣಿ ಇಲ್ಲವೇ ಮನೆಗೆ ತೆರಳಿ ವೈದ್ಯರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಲ್ಲಾ 90 ಜನರನ್ನು ಗೃಹಬಂಧನದಲ್ಲಿಡಲಾಗಿದೆ. ಆದರೆ ವಿದೇಶದಿಂದ ಬಂದ ಕೆಲವರು ನಗರದಲ್ಲಿ ಓಡಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದರು.


ಇದನ್ನೂ ಓದಿ: ಕೊರೊನಾ ಕುರಿತು ಸುಳ್ಳು ಸುದ್ದಿ ಹರಡಿದ ಹಿನ್ನೆಲೆ : ಸೈಬರ್ ಕ್ರೈಂಗೆ ಎರಡು ದೂರು ದಾಖಲು


ಕೊರೊನಾ ಕುರಿತು ಸುಳ್ಳು ಸುದ್ದಿ ಹರಡುತ್ತಿರುವವರು ಬಗ್ಗೆ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ಡ್ಯಾಮೇಜ್ ಕಂಟ್ರೋಲ್ ಮಾಡಲು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಹರಡುವುದರ ವಿರುದ್ಧ ಸೈಬರ್‌ ಕ್ರೈಂ ಡಿಪಾರ್ಟ್‌‌ಮೆಂಟ್‌ಗೆ ದೂರು ನೀಡಿದೆ. ತುಮಕೂರು ನಗರದಲ್ಲಿ ಇದುವರೆಗೆ ಯಾವುದೇ ಕೊರೋನಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ. ಆದರೆ ಜನರ ಭೀತಿ ನಿವಾರಣೆಯಾಗಿಲ್ಲ. ಸುಳ್ಳು ಸುದ್ದಿಗಳಿಂದ ನಿತ್ಯವೂ ಜನ ಕನಲಿ ಹೋಗುತ್ತಿದ್ದಾರೆ. ಕರೆ ಮಾಡಿ ಸ್ಪಷ್ಟ ಮಾಹಿತಿ ಪಡೆಯುತ್ತಿರುವುದು ಸಾಮಾನ್ಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...