Homeಮುಖಪುಟಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

ಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

- Advertisement -
- Advertisement -

ದೇಶವು ಕಳೆದ ಒಂದು ವರ್ಷದಿಂದ ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನಿಂದ ಬಳಲುತ್ತಿದೆ. ಒಂದು ವರ್ಷ ಕಳೆದರು ಕೊರೊನಾ ವಿರುದ್ದ ಹೋರಾಟವನ್ನು ಸರಿಯಾಗಿ ನಿರ್ವಹಿಸುವಲ್ಲಿ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಇತ್ತೀಚೆಗೆ ಆಕ್ರಮಿಸಿಕೊಂಡಿರುವ ಕೊರೊನಾ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ಜನಪ್ರಿಯತೆ ಕುಸಿಯುತ್ತಿದೆ. ಅವರ ವರ್ಚಸ್ಸನ್ನು ಉಳಿಸಿಕೊಳ್ಳಲು ಬಿಜೆಪಿ ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ ಪೊಲಿಟಿಕಲ್‌ ಸರ್ಜರಿ ಮಾಡಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಬಿಜೆಪಿ ಚಿಂತಿಸಿದೆ. ಅಲ್ಲದೆ, ರಾಜ್ಯದ ಸಿಎಂ ಯಡಿಯೂರಪ್ಪ ಅವರನ್ನೂ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಬೇರೊಬ್ಬರನ್ನು ಸಿಎಂ ಮಾಡಲು ಮುಂದಾಗಿದ್ದು, ಇದಕ್ಕಾಗಿ ಯಾರು ಸೂಕ್ತ ಎಂದು ಹುಡುಕಾಟ ಆರಂಭಿಸಿದೆ ಎಂದು ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕನ್ನು ಆಕ್ರಮಣ ಹೆಚ್ಚಾಗಿದ್ದು, ರಾಜ್ಯ ಸರ್ಕಾರಗಳು ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಉತ್ತರ ಪ್ರದೇಶದಿಂದ ಕೋವಿಡ್‌ನಿಂದ ಮೃತಪಟ್ಟವರ ಶವಗಳು ಗಂಗಾ ನದಿಯ ತಡದಲ್ಲಿ ತೇಲುತ್ತಿವೆ. ಕರ್ನಾಟಕದಲ್ಲಿ ಆಕ್ಸಿಜನ್‌ ಕೊರತೆಯಿಂದ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ದಿನ ನಿತ್ಯದ ಕೊರೊನಾ ಪ್ರಕರಣಗಳು ದಾಖಲಾಗುವ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಉತ್ತರಾಖಂಡ್‌ನಲ್ಲಿ ಕುಂಭಮೇಳ ನಡೆದ ನಂತರ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಅದರೆ, ರಾಜ್ಯ ಸರ್ಕಾರ ತಪ್ಪು ಮಾಹಿತಿಯನ್ನು ನೀಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಎಲ್ಲಾ ಕಾರಣಗಳಿಂದ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ವರ್ಚಸ್ಸು ಕುಸಿಯುತ್ತಿದೆ. ಇದನ್ನು ತಪ್ಪಿಸಿ, ಮೋದಿಯನ್ನು ಮತ್ತೆ ವೈಭವೀಕರಿಸಲು ಮುಂದಾಗಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪೊಲಿಟಕ್‌ ಸರ್ಜರಿ ನಡೆಸಿ, ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

ಇದಕ್ಕಾಗಿ, ಈಗಾಗಲೇ ಮೋದಿ ಹಾಗೂ ಅಮಿತ್ ಷಾ ಅವರು ಆರ್‌ಎಸ್‌ಎಸ್‌ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ, ಅವರಿಂದ ರಾಜೀನಾಮೆ ಪಡೆದು, ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮೋದಿ-ಶಾ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

ಈ ಪೈಕಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸುವುದು. ಕರ್ನಾಟಕದ ಸಿಎಂ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೊಬ್ಬರನ್ನು ಕೂರಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸಿದೆ.

ಈ ಹಿಂದೆಯೂ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಆರ್‌ಎಸ್‌ಎಸ್‌ ಹಿನ್ನೆಲೆ ಇರುವವರನ್ನು ಸಿಎಂ ಮಾಡಲು ಬಿಜೆಪಿ ಮುಂದಾಗಿತ್ತು. ಅದಕ್ಕಾಗಿ ರಾಜ್ಯ ಸರ್ಕಾರ ಕೆಲಸಗಳಲ್ಲಿ ರಾಜ್ಯಪಾಲರನ್ನು ಮಧ್ಯ ಪ್ರವೇಶಿಸಿ, ಸಭೆಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದ್ದು, ಯಡಿಯೂರಪ್ಪ ಅವರ ಸಿಎಂ ಖುರ್ಚಿ ಮತ್ತೆ ಅಲುಗಾಡುತ್ತಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು, ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವುದಕ್ಕಾಗಿ ಸರ್ಜಿಕಲ್ ಸ್ಟ್ರೈಕ್ ಶುರು ಮಾಡಿದ್ದಾರೆ. ತಮ್ಮ ಜನಪ್ರಿಯತೆಯನ್ನು ಉಳಿಸಿಕೊಳ್ಳಲು ಕೆಲವರ ತಲೆದಂಡವಾಗಲಿದೆ. ಈ ತಲೆದಂಡವನ್ನೇ ಅಸ್ತ್ರವಾಗಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಮತ್ತೆ ಮೋದಿಯವರನ್ನು ಅಟ್ಟಕ್ಕೇರಿಸಲಿದೆ ಎಂದು ರಾಜಕೀಯ ವಿಮರ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೋವಿಡ್ ನಿರ್ವಹಣೆಯ ವಿಫಲತೆ, ಚುನಾವಣಾ ಫಲಿತಾಂಶಗಳಲ್ಲಿ ಹಿನ್ನಡೆ: BJP-RSS ನಲ್ಲಿ ಈಗ ಆಂತರಿಕ ಆಕ್ರೋಶ, ತಳಮಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿ ಸರ್ಕಾರದ ಕೆಲಸಗಳಿಗೆ ಉಪರಾಜ್ಯಪಾಲರುಗಳ ಮೂಲಕ ಒಕ್ಕೂಟ ಸರ್ಕಾರ ಹೇಗೆ ತೊಡರುಗಾಲು ಕೊಡುತ್ತ ಬಂದಿದೆ ಎಂಬುದನ್ನು ನಾವೆಲ್ಲಾ ನೋಡುತ್ತಾ ಬಂದಿದ್ದೇವೆ. ಕರ್ನಾಟಕದ ಮು.ಮ. ಯಡ್ಯೂರಪ್ಪನವರ ಕೊರೋನಾ ವೈಫಲ್ಯವೂ ಸಹ ಅವರ ತಲೆದಂಡಕ್ಕೆಂದೇ ಹೆಣೆಯಲಾದ ಅಂತಹುದೇ ಕುತಂತ್ರ ಎಂಬುದು ನನ್ನ ನಂಬಿಕೆ. ಇದೇ ರೀತಿಯಲ್ಲಿ ಪಶ್ಚಿಮ ಬಂಗಾಳದ ಚುನಾವಣೋತ್ತರ ಗಲಭೆಗಳ ವಿಚಾರದಲ್ಲೂ ಕುತಂತ್ರ ಮಾಡಲಾಗಿದೆ ಎಂಬುದು ನನ್ನ ನಂಬಿಕೆ. ಒಟ್ಟಾರೆಯಾಗಿ ತಮಗೆ ಬೇಡದವರನ್ನು, ಅಸಂವೈಧಾನಿಕವಾಗಿಯಾದರೂ ಸರಿಯೇ, ಹೇಗಾದರೂ ತೊಲಗಿಸಿಕೊಳ್ಳುವ ಸರ್ವಾಧಿಕಾರದ ಒಂದು ಸ್ವರೂಪವನ್ನು ಒಕ್ಕೂಟ ಪ್ರದರ್ಶಿಸುತ್ತಿದೆ ಎಂಬುದನ್ನು ಯಾರೂ ಅಲ್ಲಗೆಳೆಯಲಾರರು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...