Homeಮುಖಪುಟಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

ಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

- Advertisement -
- Advertisement -

ದೇಶವು ಕಳೆದ ಒಂದು ವರ್ಷದಿಂದ ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನಿಂದ ಬಳಲುತ್ತಿದೆ. ಒಂದು ವರ್ಷ ಕಳೆದರು ಕೊರೊನಾ ವಿರುದ್ದ ಹೋರಾಟವನ್ನು ಸರಿಯಾಗಿ ನಿರ್ವಹಿಸುವಲ್ಲಿ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಇತ್ತೀಚೆಗೆ ಆಕ್ರಮಿಸಿಕೊಂಡಿರುವ ಕೊರೊನಾ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ಜನಪ್ರಿಯತೆ ಕುಸಿಯುತ್ತಿದೆ. ಅವರ ವರ್ಚಸ್ಸನ್ನು ಉಳಿಸಿಕೊಳ್ಳಲು ಬಿಜೆಪಿ ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ ಪೊಲಿಟಿಕಲ್‌ ಸರ್ಜರಿ ಮಾಡಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಬಿಜೆಪಿ ಚಿಂತಿಸಿದೆ. ಅಲ್ಲದೆ, ರಾಜ್ಯದ ಸಿಎಂ ಯಡಿಯೂರಪ್ಪ ಅವರನ್ನೂ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಬೇರೊಬ್ಬರನ್ನು ಸಿಎಂ ಮಾಡಲು ಮುಂದಾಗಿದ್ದು, ಇದಕ್ಕಾಗಿ ಯಾರು ಸೂಕ್ತ ಎಂದು ಹುಡುಕಾಟ ಆರಂಭಿಸಿದೆ ಎಂದು ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕನ್ನು ಆಕ್ರಮಣ ಹೆಚ್ಚಾಗಿದ್ದು, ರಾಜ್ಯ ಸರ್ಕಾರಗಳು ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಉತ್ತರ ಪ್ರದೇಶದಿಂದ ಕೋವಿಡ್‌ನಿಂದ ಮೃತಪಟ್ಟವರ ಶವಗಳು ಗಂಗಾ ನದಿಯ ತಡದಲ್ಲಿ ತೇಲುತ್ತಿವೆ. ಕರ್ನಾಟಕದಲ್ಲಿ ಆಕ್ಸಿಜನ್‌ ಕೊರತೆಯಿಂದ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ದಿನ ನಿತ್ಯದ ಕೊರೊನಾ ಪ್ರಕರಣಗಳು ದಾಖಲಾಗುವ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಉತ್ತರಾಖಂಡ್‌ನಲ್ಲಿ ಕುಂಭಮೇಳ ನಡೆದ ನಂತರ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಅದರೆ, ರಾಜ್ಯ ಸರ್ಕಾರ ತಪ್ಪು ಮಾಹಿತಿಯನ್ನು ನೀಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಎಲ್ಲಾ ಕಾರಣಗಳಿಂದ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ವರ್ಚಸ್ಸು ಕುಸಿಯುತ್ತಿದೆ. ಇದನ್ನು ತಪ್ಪಿಸಿ, ಮೋದಿಯನ್ನು ಮತ್ತೆ ವೈಭವೀಕರಿಸಲು ಮುಂದಾಗಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪೊಲಿಟಕ್‌ ಸರ್ಜರಿ ನಡೆಸಿ, ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

ಇದಕ್ಕಾಗಿ, ಈಗಾಗಲೇ ಮೋದಿ ಹಾಗೂ ಅಮಿತ್ ಷಾ ಅವರು ಆರ್‌ಎಸ್‌ಎಸ್‌ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ, ಅವರಿಂದ ರಾಜೀನಾಮೆ ಪಡೆದು, ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮೋದಿ-ಶಾ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

ಈ ಪೈಕಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸುವುದು. ಕರ್ನಾಟಕದ ಸಿಎಂ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೊಬ್ಬರನ್ನು ಕೂರಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸಿದೆ.

ಈ ಹಿಂದೆಯೂ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಆರ್‌ಎಸ್‌ಎಸ್‌ ಹಿನ್ನೆಲೆ ಇರುವವರನ್ನು ಸಿಎಂ ಮಾಡಲು ಬಿಜೆಪಿ ಮುಂದಾಗಿತ್ತು. ಅದಕ್ಕಾಗಿ ರಾಜ್ಯ ಸರ್ಕಾರ ಕೆಲಸಗಳಲ್ಲಿ ರಾಜ್ಯಪಾಲರನ್ನು ಮಧ್ಯ ಪ್ರವೇಶಿಸಿ, ಸಭೆಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದ್ದು, ಯಡಿಯೂರಪ್ಪ ಅವರ ಸಿಎಂ ಖುರ್ಚಿ ಮತ್ತೆ ಅಲುಗಾಡುತ್ತಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು, ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವುದಕ್ಕಾಗಿ ಸರ್ಜಿಕಲ್ ಸ್ಟ್ರೈಕ್ ಶುರು ಮಾಡಿದ್ದಾರೆ. ತಮ್ಮ ಜನಪ್ರಿಯತೆಯನ್ನು ಉಳಿಸಿಕೊಳ್ಳಲು ಕೆಲವರ ತಲೆದಂಡವಾಗಲಿದೆ. ಈ ತಲೆದಂಡವನ್ನೇ ಅಸ್ತ್ರವಾಗಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಮತ್ತೆ ಮೋದಿಯವರನ್ನು ಅಟ್ಟಕ್ಕೇರಿಸಲಿದೆ ಎಂದು ರಾಜಕೀಯ ವಿಮರ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೋವಿಡ್ ನಿರ್ವಹಣೆಯ ವಿಫಲತೆ, ಚುನಾವಣಾ ಫಲಿತಾಂಶಗಳಲ್ಲಿ ಹಿನ್ನಡೆ: BJP-RSS ನಲ್ಲಿ ಈಗ ಆಂತರಿಕ ಆಕ್ರೋಶ, ತಳಮಳ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ದೆಹಲಿ ಸರ್ಕಾರದ ಕೆಲಸಗಳಿಗೆ ಉಪರಾಜ್ಯಪಾಲರುಗಳ ಮೂಲಕ ಒಕ್ಕೂಟ ಸರ್ಕಾರ ಹೇಗೆ ತೊಡರುಗಾಲು ಕೊಡುತ್ತ ಬಂದಿದೆ ಎಂಬುದನ್ನು ನಾವೆಲ್ಲಾ ನೋಡುತ್ತಾ ಬಂದಿದ್ದೇವೆ. ಕರ್ನಾಟಕದ ಮು.ಮ. ಯಡ್ಯೂರಪ್ಪನವರ ಕೊರೋನಾ ವೈಫಲ್ಯವೂ ಸಹ ಅವರ ತಲೆದಂಡಕ್ಕೆಂದೇ ಹೆಣೆಯಲಾದ ಅಂತಹುದೇ ಕುತಂತ್ರ ಎಂಬುದು ನನ್ನ ನಂಬಿಕೆ. ಇದೇ ರೀತಿಯಲ್ಲಿ ಪಶ್ಚಿಮ ಬಂಗಾಳದ ಚುನಾವಣೋತ್ತರ ಗಲಭೆಗಳ ವಿಚಾರದಲ್ಲೂ ಕುತಂತ್ರ ಮಾಡಲಾಗಿದೆ ಎಂಬುದು ನನ್ನ ನಂಬಿಕೆ. ಒಟ್ಟಾರೆಯಾಗಿ ತಮಗೆ ಬೇಡದವರನ್ನು, ಅಸಂವೈಧಾನಿಕವಾಗಿಯಾದರೂ ಸರಿಯೇ, ಹೇಗಾದರೂ ತೊಲಗಿಸಿಕೊಳ್ಳುವ ಸರ್ವಾಧಿಕಾರದ ಒಂದು ಸ್ವರೂಪವನ್ನು ಒಕ್ಕೂಟ ಪ್ರದರ್ಶಿಸುತ್ತಿದೆ ಎಂಬುದನ್ನು ಯಾರೂ ಅಲ್ಲಗೆಳೆಯಲಾರರು.

LEAVE A REPLY

Please enter your comment!
Please enter your name here

- Advertisment -

Must Read

ಮಕ್ಕಳನ್ನು ಹೊಂದದೆ ಮೋದಿ, ಯೋಗಿ ನಿರುದ್ಯೋಗ ತಡೆದಿದ್ದಾರೆ ಎಂದ ಬಿಜೆಪಿ ಸಂಸದ!

0
ಯೂಟ್ಯೂಬರ್ ಒಬ್ಬರು ಉತ್ತರ ಪ್ರದೇಶದ ಬಿಜೆಪಿ ಸಂಸದನ ಬಳಿ ನಿರುದ್ಯೋಗ ಸಮಸ್ಯೆಯ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ, ವಿಚಿತ್ರವಾದ ಉತ್ತರ ನೀಡುವ ಮೂಲಕ ನಗೆ ಪಾಟಲಿಗೀಡಾಗಿದ್ದಾರೆ. ಯೂಟ್ಯೂಬರ್ ಜೊತೆ ಮಾತನಾಡಿರುವ ಆಝಂಘರ್ ಲೋಕಸಭಾ ಕ್ಷೇತ್ರದ ಬಿಜೆಪಿ...