Homeಮುಖಪುಟಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

ಕೊರೊನಾ ವೈಫಲ್ಯ: ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರ ತಲೆದಂಡ?

- Advertisement -
- Advertisement -

ದೇಶವು ಕಳೆದ ಒಂದು ವರ್ಷದಿಂದ ಕೊರೊನಾ ಸೃಷ್ಟಿಸಿರುವ ಬಿಕ್ಕಟ್ಟಿನಿಂದ ಬಳಲುತ್ತಿದೆ. ಒಂದು ವರ್ಷ ಕಳೆದರು ಕೊರೊನಾ ವಿರುದ್ದ ಹೋರಾಟವನ್ನು ಸರಿಯಾಗಿ ನಿರ್ವಹಿಸುವಲ್ಲಿ ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಇತ್ತೀಚೆಗೆ ಆಕ್ರಮಿಸಿಕೊಂಡಿರುವ ಕೊರೊನಾ ಎರಡನೇ ಅಲೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ಜನಪ್ರಿಯತೆ ಕುಸಿಯುತ್ತಿದೆ. ಅವರ ವರ್ಚಸ್ಸನ್ನು ಉಳಿಸಿಕೊಳ್ಳಲು ಬಿಜೆಪಿ ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ ಪೊಲಿಟಿಕಲ್‌ ಸರ್ಜರಿ ಮಾಡಲು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಬಿಜೆಪಿ ಚಿಂತಿಸಿದೆ. ಅಲ್ಲದೆ, ರಾಜ್ಯದ ಸಿಎಂ ಯಡಿಯೂರಪ್ಪ ಅವರನ್ನೂ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ಬೇರೊಬ್ಬರನ್ನು ಸಿಎಂ ಮಾಡಲು ಮುಂದಾಗಿದ್ದು, ಇದಕ್ಕಾಗಿ ಯಾರು ಸೂಕ್ತ ಎಂದು ಹುಡುಕಾಟ ಆರಂಭಿಸಿದೆ ಎಂದು ಚರ್ಚೆಯಾಗುತ್ತಿದೆ.

ಇದನ್ನೂ ಓದಿ: ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕನ್ನು ಆಕ್ರಮಣ ಹೆಚ್ಚಾಗಿದ್ದು, ರಾಜ್ಯ ಸರ್ಕಾರಗಳು ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಉತ್ತರ ಪ್ರದೇಶದಿಂದ ಕೋವಿಡ್‌ನಿಂದ ಮೃತಪಟ್ಟವರ ಶವಗಳು ಗಂಗಾ ನದಿಯ ತಡದಲ್ಲಿ ತೇಲುತ್ತಿವೆ. ಕರ್ನಾಟಕದಲ್ಲಿ ಆಕ್ಸಿಜನ್‌ ಕೊರತೆಯಿಂದ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ದಿನ ನಿತ್ಯದ ಕೊರೊನಾ ಪ್ರಕರಣಗಳು ದಾಖಲಾಗುವ ಪಟ್ಟಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಉತ್ತರಾಖಂಡ್‌ನಲ್ಲಿ ಕುಂಭಮೇಳ ನಡೆದ ನಂತರ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಅದರೆ, ರಾಜ್ಯ ಸರ್ಕಾರ ತಪ್ಪು ಮಾಹಿತಿಯನ್ನು ನೀಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಎಲ್ಲಾ ಕಾರಣಗಳಿಂದ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಮೋದಿಯವರ ವರ್ಚಸ್ಸು ಕುಸಿಯುತ್ತಿದೆ. ಇದನ್ನು ತಪ್ಪಿಸಿ, ಮೋದಿಯನ್ನು ಮತ್ತೆ ವೈಭವೀಕರಿಸಲು ಮುಂದಾಗಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪೊಲಿಟಕ್‌ ಸರ್ಜರಿ ನಡೆಸಿ, ಕೆಲವರ ತಲೆದಂಡಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ.

ಇದಕ್ಕಾಗಿ, ಈಗಾಗಲೇ ಮೋದಿ ಹಾಗೂ ಅಮಿತ್ ಷಾ ಅವರು ಆರ್‌ಎಸ್‌ಎಸ್‌ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. ಕೋವಿಡ್‌ ವೈಫಲ್ಯವನ್ನು ಕೆಲವರ ತಲೆಗೆ ಕಟ್ಟಿ, ಅವರಿಂದ ರಾಜೀನಾಮೆ ಪಡೆದು, ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮೋದಿ-ಶಾ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೊರೊನಾ ಸಾವಿನ ಸುನಾಮಿ ಮತ್ತು ಸರ್ಕಾರದ ವೈಫಲ್ಯವೆಂಬ ವೈರಸ್

ಈ ಪೈಕಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಅವರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಿಸುವುದು. ಕರ್ನಾಟಕದ ಸಿಎಂ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೊಬ್ಬರನ್ನು ಕೂರಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸಿದೆ.

ಈ ಹಿಂದೆಯೂ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಆರ್‌ಎಸ್‌ಎಸ್‌ ಹಿನ್ನೆಲೆ ಇರುವವರನ್ನು ಸಿಎಂ ಮಾಡಲು ಬಿಜೆಪಿ ಮುಂದಾಗಿತ್ತು. ಅದಕ್ಕಾಗಿ ರಾಜ್ಯ ಸರ್ಕಾರ ಕೆಲಸಗಳಲ್ಲಿ ರಾಜ್ಯಪಾಲರನ್ನು ಮಧ್ಯ ಪ್ರವೇಶಿಸಿ, ಸಭೆಗಳನ್ನು ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದ್ದು, ಯಡಿಯೂರಪ್ಪ ಅವರ ಸಿಎಂ ಖುರ್ಚಿ ಮತ್ತೆ ಅಲುಗಾಡುತ್ತಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು, ತಮ್ಮ ವರ್ಚಸ್ಸನ್ನು ಉಳಿಸಿಕೊಳ್ಳುವುದಕ್ಕಾಗಿ ಸರ್ಜಿಕಲ್ ಸ್ಟ್ರೈಕ್ ಶುರು ಮಾಡಿದ್ದಾರೆ. ತಮ್ಮ ಜನಪ್ರಿಯತೆಯನ್ನು ಉಳಿಸಿಕೊಳ್ಳಲು ಕೆಲವರ ತಲೆದಂಡವಾಗಲಿದೆ. ಈ ತಲೆದಂಡವನ್ನೇ ಅಸ್ತ್ರವಾಗಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ಮತ್ತೆ ಮೋದಿಯವರನ್ನು ಅಟ್ಟಕ್ಕೇರಿಸಲಿದೆ ಎಂದು ರಾಜಕೀಯ ವಿಮರ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೋವಿಡ್ ನಿರ್ವಹಣೆಯ ವಿಫಲತೆ, ಚುನಾವಣಾ ಫಲಿತಾಂಶಗಳಲ್ಲಿ ಹಿನ್ನಡೆ: BJP-RSS ನಲ್ಲಿ ಈಗ ಆಂತರಿಕ ಆಕ್ರೋಶ, ತಳಮಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೆಹಲಿ ಸರ್ಕಾರದ ಕೆಲಸಗಳಿಗೆ ಉಪರಾಜ್ಯಪಾಲರುಗಳ ಮೂಲಕ ಒಕ್ಕೂಟ ಸರ್ಕಾರ ಹೇಗೆ ತೊಡರುಗಾಲು ಕೊಡುತ್ತ ಬಂದಿದೆ ಎಂಬುದನ್ನು ನಾವೆಲ್ಲಾ ನೋಡುತ್ತಾ ಬಂದಿದ್ದೇವೆ. ಕರ್ನಾಟಕದ ಮು.ಮ. ಯಡ್ಯೂರಪ್ಪನವರ ಕೊರೋನಾ ವೈಫಲ್ಯವೂ ಸಹ ಅವರ ತಲೆದಂಡಕ್ಕೆಂದೇ ಹೆಣೆಯಲಾದ ಅಂತಹುದೇ ಕುತಂತ್ರ ಎಂಬುದು ನನ್ನ ನಂಬಿಕೆ. ಇದೇ ರೀತಿಯಲ್ಲಿ ಪಶ್ಚಿಮ ಬಂಗಾಳದ ಚುನಾವಣೋತ್ತರ ಗಲಭೆಗಳ ವಿಚಾರದಲ್ಲೂ ಕುತಂತ್ರ ಮಾಡಲಾಗಿದೆ ಎಂಬುದು ನನ್ನ ನಂಬಿಕೆ. ಒಟ್ಟಾರೆಯಾಗಿ ತಮಗೆ ಬೇಡದವರನ್ನು, ಅಸಂವೈಧಾನಿಕವಾಗಿಯಾದರೂ ಸರಿಯೇ, ಹೇಗಾದರೂ ತೊಲಗಿಸಿಕೊಳ್ಳುವ ಸರ್ವಾಧಿಕಾರದ ಒಂದು ಸ್ವರೂಪವನ್ನು ಒಕ್ಕೂಟ ಪ್ರದರ್ಶಿಸುತ್ತಿದೆ ಎಂಬುದನ್ನು ಯಾರೂ ಅಲ್ಲಗೆಳೆಯಲಾರರು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...