Homeಕರ್ನಾಟಕವಸತಿ ಶಾಲೆಯ 60 ವಿದ್ಯಾರ್ಥಿಗಳಿಗೆ ಕೊರೊನಾ; ಅ.20 ವರೆಗೆ ಶಾಲೆ ಬಂದ್

ವಸತಿ ಶಾಲೆಯ 60 ವಿದ್ಯಾರ್ಥಿಗಳಿಗೆ ಕೊರೊನಾ; ಅ.20 ವರೆಗೆ ಶಾಲೆ ಬಂದ್

- Advertisement -
- Advertisement -

ಬೆಂಗಳೂರಿನ ಒಂದು ವಸತಿ ಶಾಲೆಯೊಂದು ಕೊರೊನಾ ಕ್ಲಸ್ಟರ್ ಆಗಿ ಮಾರ್ಪಟ್ಟಿದ್ದು, ಶಾಲೆಯ ಸುಮಾರು 500 ವಿದ್ಯಾರ್ಥಿಗಳಲ್ಲಿ 60 ವಿದ್ಯಾರ್ಥಿಗಳಿಗೆ ಸೋಂಕು ಹರಡಿರುವುದು ದೃಡಪಟ್ಟಿದೆ. ಸೋಂಕು ಹರಡಿರುವುದು ದೃಡಪಡುತ್ತಿದ್ದಂತೆ ಶಾಲೆಯನ್ನು ಅಕ್ಟೋಬರ್ 20 ರವರೆಗೆ ಮುಚ್ಚಲಾಗಿದೆ ಎಂದು ವರದಿಯಾಗಿದೆ.

ರೋಗಲಕ್ಷಣವಿರುವ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಸರಿಯಾದ ವೈದ್ಯಕೀಯ ಸೌಲಭ್ಯದಲ್ಲಿ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು (ನಗರ) ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ಸಾವು: ₹1 ಲಕ್ಷ ಪರಿಹಾರ ಆದೇಶ ಹಿಂಪಡೆದ ರಾಜ್ಯದ ಬಿಜೆಪಿ ಸರ್ಕಾರ

“ಇದು ಒಂದು ಬೋರ್ಡಿಂಗ್ ಶಾಲೆ … ವಿದ್ಯಾರ್ಥಿಗಳು ಒಂದು ತಿಂಗಳು ಅಲ್ಲಿದ್ದರು. ಅವರು ಶಾಲೆಗೆ ಬಂದಾಗ ಯಾವುದೇ ಲಕ್ಷಣಗಳು ಇರಲಿಲ್ಲ. ಪಾಸಿಟಿವ್‌‌ ಆಗಿರುವ 60 ವಿದ್ಯಾರ್ಥಿಗಳಲ್ಲಿ (ಭಾನುವಾರ ಸಂಜೆ) ಕೇವಲ ಇಬ್ಬರಲ್ಲಿ ಮಾತ್ರ ರೋಗಲಕ್ಷಣಗಳಿಗೆ. ಅಲ್ಲಿ ನಮ್ಮ ತಂಡವಿದ್ದು. .. ನಾವು ಎಲ್ಲರನ್ನು ಪರೀಕ್ಷಿಸಿದ್ದೇವೆ. ನಾವು ಏಳು ದಿನ ಕಳೆದು ಮತ್ತೆ ಪರೀಕ್ಷೆ ನಡೆಸುತ್ತೇವೆ. ಶಾಲೆಯನ್ನು ಅಕ್ಟೋಬರ್ 20 ರವರೆಗೆ ಮುಚ್ಚಲಾಗಿದೆ. ಯಾವುದೇ ಆತಂಕವಿಲ್ಲ, ಇದು ಪೂರ್ವಭಾವಿ ಕ್ರಮ” ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಕೊರೊನಾ ಪಾಸಿಟಿವ್‌ ಆಗಿರುವ ವಿದ್ಯಾರ್ಥಿಗಳಲ್ಲಿ 14 ಮಂದಿ ತಮಿಳುನಾಡಿನವರು ಮತ್ತು ಉಳಿದವರು ಕರ್ನಾಟಕದವರು ಎಂದು ಎನ್‌ಡಿಟಿವಿ ವರದಿ ಮಾಡಿದೆ. ವಿದ್ಯಾರ್ಥಿಯೊಬ್ಬರಿಗೆ ವಾಂತಿ ಮತ್ತು ಭೇದಿ ಆದ ಕಾರಣ ದೂರು ನೀಡಲಾಗಿತ್ತು. ಇದರ ನಂತರ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸಲಾಗಿದೆ.

ರಾಜ್ಯದಲ್ಲಿ 6 ನೇ ತರಗತಿಯಿಂದ 8 ನೇ ತರಗತಿಯವರೆಗಿನ ತರಗತಿಗಳನ್ನು ಮತ್ತೇ ಪ್ರಾರಂಭಿಸಲು ಇತ್ತೀಚೆಗಷ್ಟೇ ಅನುಮತಿ ನೀಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲಾ ಸಿಬ್ಬಂದಿಗಳು ಕಟ್ಟುನಿಟ್ಟಾದ ಕೊರೊನಾ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಸರ್ಕಾರ ಎಚ್ಚರಿಸಿತ್ತು.

ಬುಧವಾರ(ಇಂದು) ಬೆಳಿಗ್ಗೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 629 ಹೊಸ ಕೊರೊನಾ ಪ್ರಕರಣಗಳು ವರದಿ ಆಗಿತ್ತು.

ಇದನ್ನೂ ಓದಿ: ಕೇರಳ: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 3 ಲಕ್ಷ ರೂ. ಆರ್ಥಿಕ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...