HomeUncategorizedಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಹತ್ತು ತಿಂಗಳ ನಂತರವೂ ಕೊರೊನಾ ಬಿಕ್ಕಟ್ಟು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಅನ್‌ಲಾಕ್ ಮಾಡಿದ ನಂತರ ಅನೇಕ ದೇಶಗಳು ಕೊರೊನಾ ಸೋಂಕಿನ ಎರಡನೇ ಅಲೆಯನ್ನು ಎದುರಿಸುತ್ತಿವೆ.

- Advertisement -
- Advertisement -

ಕೊರೊನಾ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ವಿಶ್ವದಾದ್ಯಂತ 10 ಜನರಲ್ಲಿ ಒಬ್ಬರಿಗೆ ಕೊರೊನಾ ಸೋಂಕಿಗೆ ಒಳಗಾಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಶೇಷ ಸಭೆಯಲ್ಲಿ ಅಲ್ಲಿನ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಅಂದಾಜಿನ ಪ್ರಕಾರ, ವಿಶ್ವದ ಬಹುಪಾಲು ಜನರು ಅಪಾಯದಲ್ಲಿದ್ದಾರೆ ಎಂದು ಉನ್ನತ ಅದಿಕಾರಿಯೊಬ್ಬರು ಹೇಳಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಜಗತ್ತಿನಲ್ಲಿ ಪ್ರಸ್ತುತ 35 ಮಿಲಿಯನ್ ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಆದರೆ WHO ಅಂದಾಜಿನ ಪ್ರಕಾರ ಸುಮಾರು 800 ಮಿಲಿಯನ್ (80 ಕೋಟಿ) ಜನರು ಸೋಂಕಿಗೆ ಒಳಗಾಗಿದ್ದಾರೆ ಎಂಬುದು ತಿಳಿದು ಬಂದಿದೆ. ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆಗಿಂತ ವಾಸ್ತವದಲ್ಲಿರುವ ನೈಜ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ತಜ್ಞರು ಬಹಳ ಹಿಂದೆಯೇ ಕಳವಳ ವ್ಯಕ್ತಪಡಿಸಿದ್ದರು.

ಕೊರೊನಾ ಕುರಿತಂತೆ ಚರ್ಚಿಸಲು ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ WHO ಪ್ರಧಾನ ಕಛೇರಿಯಲ್ಲಿ ಸಭೆ ಸೇರಲಾಗಿತ್ತು.

ಹತ್ತು ತಿಂಗಳ ನಂತರವೂ ಕೊರೊನಾ ಬಿಕ್ಕಟ್ಟು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಅನ್‌ಲಾಕ್ ಮಾಡಿದ ನಂತರ ಅನೇಕ ದೇಶಗಳು ಕೊರೊನಾ ಸೋಂಕಿನ ಎರಡನೇ ಅಲೆಯನ್ನು ಎದುರಿಸುತ್ತಿವೆ. ಕೆಲವು ಕಡೆ ಮೊದಲಿಗಿಂತಲೂ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ.

ಇದನ್ನೂ ಓದಿ: ಕೊರೊನಾದಿಂದ 551 ವೈದ್ಯರ ಸಾವು: ಭಾರತೀಯ ವೈದ್ಯಕೀಯ ಸಂಘಟನೆಯ ದತ್ತಾಂಶ

ವಿಶ್ವದ ಜನಸಂಖ್ಯೆಯ ಶೇಕಡಾ 10 ರಷ್ಟು ಜನರು ಈ ವೈರಸ್‌ಗೆ ತುತ್ತಾಗಿದ್ದಾರೆ. ಇದು ದೇಶದಿಂದ ದೇಶಕ್ಕೆ ಬದಲಾಗುತ್ತದೆ. ನಗರದಿಂದ ಹಳ್ಳಿಗೆ ಬದಲಾಗುತ್ತದೆ ಮತ್ತು ವಿಭಿನ್ನ ಗುಂಪುಗಳ ನಡುವೆ ವ್ಯತ್ಯಾಸವನ್ನು ಹೊಂದಿರುತ್ತದೆ ಎಂದು, WHOನ ಆರೋಗ್ಯ ತುರ್ತು ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಮೈಕ್ ರಯಾನ್ ಹೇಳಿದ್ದಾರೆ.

ಪ್ರಸ್ತುತ ಭಾರತದಲ್ಲಿ 66,85,082 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 1,03,569 ಸಾವುಗಳು ಸಂಭವಿಸಿವೆ. ಒಟ್ಟು 56,32,490 ಸೋಂಕಿತರು ಇದುವರೆಗೂ ಚೇತರಿಸಿಕೊಂಡಿದ್ದು, 9,19,023 ಸಕ್ರಿಯ ಸೋಂಕಿತ ಪ್ರಕರಣಗಳಿವೆ.


ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...