HomeUncategorizedಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಜಗತ್ತಿನ 10 ಜನರಲ್ಲಿ ಒಬ್ಬರಿಗೆ ಕೊರೊನಾ: WHO ಕಳವಳ

ಹತ್ತು ತಿಂಗಳ ನಂತರವೂ ಕೊರೊನಾ ಬಿಕ್ಕಟ್ಟು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಅನ್‌ಲಾಕ್ ಮಾಡಿದ ನಂತರ ಅನೇಕ ದೇಶಗಳು ಕೊರೊನಾ ಸೋಂಕಿನ ಎರಡನೇ ಅಲೆಯನ್ನು ಎದುರಿಸುತ್ತಿವೆ.

- Advertisement -
- Advertisement -

ಕೊರೊನಾ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ವಿಶ್ವದಾದ್ಯಂತ 10 ಜನರಲ್ಲಿ ಒಬ್ಬರಿಗೆ ಕೊರೊನಾ ಸೋಂಕಿಗೆ ಒಳಗಾಗಿರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಶೇಷ ಸಭೆಯಲ್ಲಿ ಅಲ್ಲಿನ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಅಂದಾಜಿನ ಪ್ರಕಾರ, ವಿಶ್ವದ ಬಹುಪಾಲು ಜನರು ಅಪಾಯದಲ್ಲಿದ್ದಾರೆ ಎಂದು ಉನ್ನತ ಅದಿಕಾರಿಯೊಬ್ಬರು ಹೇಳಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ.

ಇದನ್ನೂ ಓದಿ: ಇನ್ಮುಂದೆ ಕೊರೊನಾ ಸೋಂಕಿತರಿಗೆ ಕ್ಷಯರೋಗ ಪರೀಕ್ಷೆ ಕಡ್ಡಾಯ

ಜಗತ್ತಿನಲ್ಲಿ ಪ್ರಸ್ತುತ 35 ಮಿಲಿಯನ್ ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಆದರೆ WHO ಅಂದಾಜಿನ ಪ್ರಕಾರ ಸುಮಾರು 800 ಮಿಲಿಯನ್ (80 ಕೋಟಿ) ಜನರು ಸೋಂಕಿಗೆ ಒಳಗಾಗಿದ್ದಾರೆ ಎಂಬುದು ತಿಳಿದು ಬಂದಿದೆ. ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆಗಿಂತ ವಾಸ್ತವದಲ್ಲಿರುವ ನೈಜ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ತಜ್ಞರು ಬಹಳ ಹಿಂದೆಯೇ ಕಳವಳ ವ್ಯಕ್ತಪಡಿಸಿದ್ದರು.

ಕೊರೊನಾ ಕುರಿತಂತೆ ಚರ್ಚಿಸಲು ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ WHO ಪ್ರಧಾನ ಕಛೇರಿಯಲ್ಲಿ ಸಭೆ ಸೇರಲಾಗಿತ್ತು.

ಹತ್ತು ತಿಂಗಳ ನಂತರವೂ ಕೊರೊನಾ ಬಿಕ್ಕಟ್ಟು ಕೊನೆಗೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಅನ್‌ಲಾಕ್ ಮಾಡಿದ ನಂತರ ಅನೇಕ ದೇಶಗಳು ಕೊರೊನಾ ಸೋಂಕಿನ ಎರಡನೇ ಅಲೆಯನ್ನು ಎದುರಿಸುತ್ತಿವೆ. ಕೆಲವು ಕಡೆ ಮೊದಲಿಗಿಂತಲೂ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿವೆ.

ಇದನ್ನೂ ಓದಿ: ಕೊರೊನಾದಿಂದ 551 ವೈದ್ಯರ ಸಾವು: ಭಾರತೀಯ ವೈದ್ಯಕೀಯ ಸಂಘಟನೆಯ ದತ್ತಾಂಶ

ವಿಶ್ವದ ಜನಸಂಖ್ಯೆಯ ಶೇಕಡಾ 10 ರಷ್ಟು ಜನರು ಈ ವೈರಸ್‌ಗೆ ತುತ್ತಾಗಿದ್ದಾರೆ. ಇದು ದೇಶದಿಂದ ದೇಶಕ್ಕೆ ಬದಲಾಗುತ್ತದೆ. ನಗರದಿಂದ ಹಳ್ಳಿಗೆ ಬದಲಾಗುತ್ತದೆ ಮತ್ತು ವಿಭಿನ್ನ ಗುಂಪುಗಳ ನಡುವೆ ವ್ಯತ್ಯಾಸವನ್ನು ಹೊಂದಿರುತ್ತದೆ ಎಂದು, WHOನ ಆರೋಗ್ಯ ತುರ್ತು ಕಾರ್ಯಕ್ರಮದ ಕಾರ್ಯನಿರ್ವಾಹಕ ನಿರ್ದೇಶಕ ಮೈಕ್ ರಯಾನ್ ಹೇಳಿದ್ದಾರೆ.

ಪ್ರಸ್ತುತ ಭಾರತದಲ್ಲಿ 66,85,082 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 1,03,569 ಸಾವುಗಳು ಸಂಭವಿಸಿವೆ. ಒಟ್ಟು 56,32,490 ಸೋಂಕಿತರು ಇದುವರೆಗೂ ಚೇತರಿಸಿಕೊಂಡಿದ್ದು, 9,19,023 ಸಕ್ರಿಯ ಸೋಂಕಿತ ಪ್ರಕರಣಗಳಿವೆ.


ಇದನ್ನೂ ಓದಿ: ‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...