Homeಮುಖಪುಟಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ 'ಆನ್‌ಲೈನ್‌' ರಾಷ್ಟ್ರೀಯ ನಾಟಕೋತ್ಸವ!

ಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ ‘ಆನ್‌ಲೈನ್‌’ ರಾಷ್ಟ್ರೀಯ ನಾಟಕೋತ್ಸವ!

7 ದಿನ ನಡೆಯುವ ಈ ಅಂತರ್ಜಾಲ ನಾಟಕೋತ್ಸವದಲ್ಲಿ ವಚನಗೀತ ಗಾಯನ, ವಿಚಾರ ಮಾಲಿಕೆ ಮತ್ತು ನಾಟಕ ಪ್ರದರ್ಶನಗಳಿರುತ್ತವೆ.

- Advertisement -
- Advertisement -

ಕೊರೊನಾ ಕಾರಣದಿಂದ ರಂಗಭೂಮಿಯ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೆಲವು ತಂಡಗಳು ಆನ್‌ಲೈನ್ ಮೂಲಕ ತಮ್ಮ ನಾಟಕವನ್ನು ಪ್ರದರ್ಶಿಸುವ ಪ್ರಯೋಗಗಳನ್ನು ಮಾಡುತ್ತಿವೆ. ಇದೀಗ ಸಾಣೇಹಳ್ಳಿ ಪ್ರತಿಷ್ಟಿತ ರಂಗಶಿಕ್ಷಣ ಕೇಂದ್ರವು 7 ದಿನಗಳ ಆನ್‌ಲೈನ್ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಂಡಿದೆ.

ನವೆಂಬರ್ 1 ರಿಂದ 7ರವರೆಗೆ ನಡೆಯುವ ಈ ನಾಟಕೋತ್ಸವದಲ್ಲಿ ಶಿವಸಂಚಾರ-ಸಾಣೇಹಳ್ಳಿಯ ತಂಡದಿಂದ ವಚನ ಗೀತೆ, ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡು-ನುಡಿಗೆ ಸಂಬಂಧಿಸಿದ ಉಪನ್ಯಾಸಗಳು ಮತ್ತು ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆ ವಿಚಾರ ಮಾಲಿಕೆ ಹಾಗೂ ನಾಟಕ ಪ್ರದರ್ಶನದಂತಹ ವಿವಿಧ ಕಾರ್ಯಕ್ರಮಗಳು ಇರಲಿವೆ.

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ:ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ. ಹಾಗಾಗಿ ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ ಕಲಾವಿದರು ಮತ್ತು ರಂಗತಂಡಗಳು ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದರ ಭಾಗವಾಗಿಯೇ ಈ ರಾಷ್ಟ್ರೀಯ ರಂಗೋತ್ಸವ.

ಇದನ್ನೂ ಓದಿ:ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಕೊರೊನಾ ಕಾಲಘಟ್ಟದಲ್ಲಿ ಜನರು ಹೊಸ ಹುರುಪಿನೊಟ್ಟಿಗೆ ಹೆಜ್ಜೆಯಿಡಲು ಮತ್ತು ಅವರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಹಾಗೂ ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.

ಈ ಉತ್ಸವದ ಸಂಪೂರ್ಣ ಕಾರ್ಯಕ್ರಮಗಳನ್ನು, www.shivasanchara.org ಅಥವಾ ಶಿವಸಂಚಾರ-ಸಾಣೇಹಳ್ಳಿ ಫೇಸ್‌ಬುಕ್ ಗ್ರೂಪ್ ಅಥವಾ ಮತ್ತೆ ಕಲ್ಯಾಣ ಫೆಸ್‌ಬುಕ್ ಪೇಜ್ ಅಥವಾ shiva sanchara ಯೂಟ್ಯೂಬ್ ಚಾನೆಲ್‌ನಲ್ಲಿ ನೇರವಾಗಿ ವೀಕ್ಷಿಸಬಹುದಾಗಿದೆ.


ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...