Homeಮುಖಪುಟಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ 'ಆನ್‌ಲೈನ್‌' ರಾಷ್ಟ್ರೀಯ ನಾಟಕೋತ್ಸವ!

ಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ ‘ಆನ್‌ಲೈನ್‌’ ರಾಷ್ಟ್ರೀಯ ನಾಟಕೋತ್ಸವ!

7 ದಿನ ನಡೆಯುವ ಈ ಅಂತರ್ಜಾಲ ನಾಟಕೋತ್ಸವದಲ್ಲಿ ವಚನಗೀತ ಗಾಯನ, ವಿಚಾರ ಮಾಲಿಕೆ ಮತ್ತು ನಾಟಕ ಪ್ರದರ್ಶನಗಳಿರುತ್ತವೆ.

- Advertisement -
- Advertisement -

ಕೊರೊನಾ ಕಾರಣದಿಂದ ರಂಗಭೂಮಿಯ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೆಲವು ತಂಡಗಳು ಆನ್‌ಲೈನ್ ಮೂಲಕ ತಮ್ಮ ನಾಟಕವನ್ನು ಪ್ರದರ್ಶಿಸುವ ಪ್ರಯೋಗಗಳನ್ನು ಮಾಡುತ್ತಿವೆ. ಇದೀಗ ಸಾಣೇಹಳ್ಳಿ ಪ್ರತಿಷ್ಟಿತ ರಂಗಶಿಕ್ಷಣ ಕೇಂದ್ರವು 7 ದಿನಗಳ ಆನ್‌ಲೈನ್ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಂಡಿದೆ.

ನವೆಂಬರ್ 1 ರಿಂದ 7ರವರೆಗೆ ನಡೆಯುವ ಈ ನಾಟಕೋತ್ಸವದಲ್ಲಿ ಶಿವಸಂಚಾರ-ಸಾಣೇಹಳ್ಳಿಯ ತಂಡದಿಂದ ವಚನ ಗೀತೆ, ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡು-ನುಡಿಗೆ ಸಂಬಂಧಿಸಿದ ಉಪನ್ಯಾಸಗಳು ಮತ್ತು ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆ ವಿಚಾರ ಮಾಲಿಕೆ ಹಾಗೂ ನಾಟಕ ಪ್ರದರ್ಶನದಂತಹ ವಿವಿಧ ಕಾರ್ಯಕ್ರಮಗಳು ಇರಲಿವೆ.

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ:ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ. ಹಾಗಾಗಿ ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ ಕಲಾವಿದರು ಮತ್ತು ರಂಗತಂಡಗಳು ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದರ ಭಾಗವಾಗಿಯೇ ಈ ರಾಷ್ಟ್ರೀಯ ರಂಗೋತ್ಸವ.

ಇದನ್ನೂ ಓದಿ:ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಕೊರೊನಾ ಕಾಲಘಟ್ಟದಲ್ಲಿ ಜನರು ಹೊಸ ಹುರುಪಿನೊಟ್ಟಿಗೆ ಹೆಜ್ಜೆಯಿಡಲು ಮತ್ತು ಅವರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಹಾಗೂ ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.

ಈ ಉತ್ಸವದ ಸಂಪೂರ್ಣ ಕಾರ್ಯಕ್ರಮಗಳನ್ನು, www.shivasanchara.org ಅಥವಾ ಶಿವಸಂಚಾರ-ಸಾಣೇಹಳ್ಳಿ ಫೇಸ್‌ಬುಕ್ ಗ್ರೂಪ್ ಅಥವಾ ಮತ್ತೆ ಕಲ್ಯಾಣ ಫೆಸ್‌ಬುಕ್ ಪೇಜ್ ಅಥವಾ shiva sanchara ಯೂಟ್ಯೂಬ್ ಚಾನೆಲ್‌ನಲ್ಲಿ ನೇರವಾಗಿ ವೀಕ್ಷಿಸಬಹುದಾಗಿದೆ.


ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...