Homeಮುಖಪುಟಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ 'ಆನ್‌ಲೈನ್‌' ರಾಷ್ಟ್ರೀಯ ನಾಟಕೋತ್ಸವ!

ಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ ‘ಆನ್‌ಲೈನ್‌’ ರಾಷ್ಟ್ರೀಯ ನಾಟಕೋತ್ಸವ!

7 ದಿನ ನಡೆಯುವ ಈ ಅಂತರ್ಜಾಲ ನಾಟಕೋತ್ಸವದಲ್ಲಿ ವಚನಗೀತ ಗಾಯನ, ವಿಚಾರ ಮಾಲಿಕೆ ಮತ್ತು ನಾಟಕ ಪ್ರದರ್ಶನಗಳಿರುತ್ತವೆ.

- Advertisement -
- Advertisement -

ಕೊರೊನಾ ಕಾರಣದಿಂದ ರಂಗಭೂಮಿಯ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೆಲವು ತಂಡಗಳು ಆನ್‌ಲೈನ್ ಮೂಲಕ ತಮ್ಮ ನಾಟಕವನ್ನು ಪ್ರದರ್ಶಿಸುವ ಪ್ರಯೋಗಗಳನ್ನು ಮಾಡುತ್ತಿವೆ. ಇದೀಗ ಸಾಣೇಹಳ್ಳಿ ಪ್ರತಿಷ್ಟಿತ ರಂಗಶಿಕ್ಷಣ ಕೇಂದ್ರವು 7 ದಿನಗಳ ಆನ್‌ಲೈನ್ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಂಡಿದೆ.

ನವೆಂಬರ್ 1 ರಿಂದ 7ರವರೆಗೆ ನಡೆಯುವ ಈ ನಾಟಕೋತ್ಸವದಲ್ಲಿ ಶಿವಸಂಚಾರ-ಸಾಣೇಹಳ್ಳಿಯ ತಂಡದಿಂದ ವಚನ ಗೀತೆ, ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡು-ನುಡಿಗೆ ಸಂಬಂಧಿಸಿದ ಉಪನ್ಯಾಸಗಳು ಮತ್ತು ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆ ವಿಚಾರ ಮಾಲಿಕೆ ಹಾಗೂ ನಾಟಕ ಪ್ರದರ್ಶನದಂತಹ ವಿವಿಧ ಕಾರ್ಯಕ್ರಮಗಳು ಇರಲಿವೆ.

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ:ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ. ಹಾಗಾಗಿ ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ ಕಲಾವಿದರು ಮತ್ತು ರಂಗತಂಡಗಳು ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದರ ಭಾಗವಾಗಿಯೇ ಈ ರಾಷ್ಟ್ರೀಯ ರಂಗೋತ್ಸವ.

ಇದನ್ನೂ ಓದಿ:ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಕೊರೊನಾ ಕಾಲಘಟ್ಟದಲ್ಲಿ ಜನರು ಹೊಸ ಹುರುಪಿನೊಟ್ಟಿಗೆ ಹೆಜ್ಜೆಯಿಡಲು ಮತ್ತು ಅವರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಹಾಗೂ ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.

ಈ ಉತ್ಸವದ ಸಂಪೂರ್ಣ ಕಾರ್ಯಕ್ರಮಗಳನ್ನು, www.shivasanchara.org ಅಥವಾ ಶಿವಸಂಚಾರ-ಸಾಣೇಹಳ್ಳಿ ಫೇಸ್‌ಬುಕ್ ಗ್ರೂಪ್ ಅಥವಾ ಮತ್ತೆ ಕಲ್ಯಾಣ ಫೆಸ್‌ಬುಕ್ ಪೇಜ್ ಅಥವಾ shiva sanchara ಯೂಟ್ಯೂಬ್ ಚಾನೆಲ್‌ನಲ್ಲಿ ನೇರವಾಗಿ ವೀಕ್ಷಿಸಬಹುದಾಗಿದೆ.


ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...