Homeಮುಖಪುಟಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ 'ಆನ್‌ಲೈನ್‌' ರಾಷ್ಟ್ರೀಯ ನಾಟಕೋತ್ಸವ!

ಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ ‘ಆನ್‌ಲೈನ್‌’ ರಾಷ್ಟ್ರೀಯ ನಾಟಕೋತ್ಸವ!

7 ದಿನ ನಡೆಯುವ ಈ ಅಂತರ್ಜಾಲ ನಾಟಕೋತ್ಸವದಲ್ಲಿ ವಚನಗೀತ ಗಾಯನ, ವಿಚಾರ ಮಾಲಿಕೆ ಮತ್ತು ನಾಟಕ ಪ್ರದರ್ಶನಗಳಿರುತ್ತವೆ.

- Advertisement -
- Advertisement -

ಕೊರೊನಾ ಕಾರಣದಿಂದ ರಂಗಭೂಮಿಯ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೆಲವು ತಂಡಗಳು ಆನ್‌ಲೈನ್ ಮೂಲಕ ತಮ್ಮ ನಾಟಕವನ್ನು ಪ್ರದರ್ಶಿಸುವ ಪ್ರಯೋಗಗಳನ್ನು ಮಾಡುತ್ತಿವೆ. ಇದೀಗ ಸಾಣೇಹಳ್ಳಿ ಪ್ರತಿಷ್ಟಿತ ರಂಗಶಿಕ್ಷಣ ಕೇಂದ್ರವು 7 ದಿನಗಳ ಆನ್‌ಲೈನ್ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಂಡಿದೆ.

ನವೆಂಬರ್ 1 ರಿಂದ 7ರವರೆಗೆ ನಡೆಯುವ ಈ ನಾಟಕೋತ್ಸವದಲ್ಲಿ ಶಿವಸಂಚಾರ-ಸಾಣೇಹಳ್ಳಿಯ ತಂಡದಿಂದ ವಚನ ಗೀತೆ, ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡು-ನುಡಿಗೆ ಸಂಬಂಧಿಸಿದ ಉಪನ್ಯಾಸಗಳು ಮತ್ತು ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆ ವಿಚಾರ ಮಾಲಿಕೆ ಹಾಗೂ ನಾಟಕ ಪ್ರದರ್ಶನದಂತಹ ವಿವಿಧ ಕಾರ್ಯಕ್ರಮಗಳು ಇರಲಿವೆ.

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ:ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ. ಹಾಗಾಗಿ ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ ಕಲಾವಿದರು ಮತ್ತು ರಂಗತಂಡಗಳು ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದರ ಭಾಗವಾಗಿಯೇ ಈ ರಾಷ್ಟ್ರೀಯ ರಂಗೋತ್ಸವ.

ಇದನ್ನೂ ಓದಿ:ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಕೊರೊನಾ ಕಾಲಘಟ್ಟದಲ್ಲಿ ಜನರು ಹೊಸ ಹುರುಪಿನೊಟ್ಟಿಗೆ ಹೆಜ್ಜೆಯಿಡಲು ಮತ್ತು ಅವರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಹಾಗೂ ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.

ಈ ಉತ್ಸವದ ಸಂಪೂರ್ಣ ಕಾರ್ಯಕ್ರಮಗಳನ್ನು, www.shivasanchara.org ಅಥವಾ ಶಿವಸಂಚಾರ-ಸಾಣೇಹಳ್ಳಿ ಫೇಸ್‌ಬುಕ್ ಗ್ರೂಪ್ ಅಥವಾ ಮತ್ತೆ ಕಲ್ಯಾಣ ಫೆಸ್‌ಬುಕ್ ಪೇಜ್ ಅಥವಾ shiva sanchara ಯೂಟ್ಯೂಬ್ ಚಾನೆಲ್‌ನಲ್ಲಿ ನೇರವಾಗಿ ವೀಕ್ಷಿಸಬಹುದಾಗಿದೆ.


ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...