Homeಮುಖಪುಟಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ 'ಆನ್‌ಲೈನ್‌' ರಾಷ್ಟ್ರೀಯ ನಾಟಕೋತ್ಸವ!

ಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ ‘ಆನ್‌ಲೈನ್‌’ ರಾಷ್ಟ್ರೀಯ ನಾಟಕೋತ್ಸವ!

7 ದಿನ ನಡೆಯುವ ಈ ಅಂತರ್ಜಾಲ ನಾಟಕೋತ್ಸವದಲ್ಲಿ ವಚನಗೀತ ಗಾಯನ, ವಿಚಾರ ಮಾಲಿಕೆ ಮತ್ತು ನಾಟಕ ಪ್ರದರ್ಶನಗಳಿರುತ್ತವೆ.

- Advertisement -
- Advertisement -

ಕೊರೊನಾ ಕಾರಣದಿಂದ ರಂಗಭೂಮಿಯ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೆಲವು ತಂಡಗಳು ಆನ್‌ಲೈನ್ ಮೂಲಕ ತಮ್ಮ ನಾಟಕವನ್ನು ಪ್ರದರ್ಶಿಸುವ ಪ್ರಯೋಗಗಳನ್ನು ಮಾಡುತ್ತಿವೆ. ಇದೀಗ ಸಾಣೇಹಳ್ಳಿ ಪ್ರತಿಷ್ಟಿತ ರಂಗಶಿಕ್ಷಣ ಕೇಂದ್ರವು 7 ದಿನಗಳ ಆನ್‌ಲೈನ್ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಂಡಿದೆ.

ನವೆಂಬರ್ 1 ರಿಂದ 7ರವರೆಗೆ ನಡೆಯುವ ಈ ನಾಟಕೋತ್ಸವದಲ್ಲಿ ಶಿವಸಂಚಾರ-ಸಾಣೇಹಳ್ಳಿಯ ತಂಡದಿಂದ ವಚನ ಗೀತೆ, ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡು-ನುಡಿಗೆ ಸಂಬಂಧಿಸಿದ ಉಪನ್ಯಾಸಗಳು ಮತ್ತು ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆ ವಿಚಾರ ಮಾಲಿಕೆ ಹಾಗೂ ನಾಟಕ ಪ್ರದರ್ಶನದಂತಹ ವಿವಿಧ ಕಾರ್ಯಕ್ರಮಗಳು ಇರಲಿವೆ.

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ:ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ. ಹಾಗಾಗಿ ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ ಕಲಾವಿದರು ಮತ್ತು ರಂಗತಂಡಗಳು ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದರ ಭಾಗವಾಗಿಯೇ ಈ ರಾಷ್ಟ್ರೀಯ ರಂಗೋತ್ಸವ.

ಇದನ್ನೂ ಓದಿ:ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಕೊರೊನಾ ಕಾಲಘಟ್ಟದಲ್ಲಿ ಜನರು ಹೊಸ ಹುರುಪಿನೊಟ್ಟಿಗೆ ಹೆಜ್ಜೆಯಿಡಲು ಮತ್ತು ಅವರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಹಾಗೂ ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.

ಈ ಉತ್ಸವದ ಸಂಪೂರ್ಣ ಕಾರ್ಯಕ್ರಮಗಳನ್ನು, www.shivasanchara.org ಅಥವಾ ಶಿವಸಂಚಾರ-ಸಾಣೇಹಳ್ಳಿ ಫೇಸ್‌ಬುಕ್ ಗ್ರೂಪ್ ಅಥವಾ ಮತ್ತೆ ಕಲ್ಯಾಣ ಫೆಸ್‌ಬುಕ್ ಪೇಜ್ ಅಥವಾ shiva sanchara ಯೂಟ್ಯೂಬ್ ಚಾನೆಲ್‌ನಲ್ಲಿ ನೇರವಾಗಿ ವೀಕ್ಷಿಸಬಹುದಾಗಿದೆ.


ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...