Homeಮುಖಪುಟಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ 'ಆನ್‌ಲೈನ್‌' ರಾಷ್ಟ್ರೀಯ ನಾಟಕೋತ್ಸವ!

ಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ ‘ಆನ್‌ಲೈನ್‌’ ರಾಷ್ಟ್ರೀಯ ನಾಟಕೋತ್ಸವ!

7 ದಿನ ನಡೆಯುವ ಈ ಅಂತರ್ಜಾಲ ನಾಟಕೋತ್ಸವದಲ್ಲಿ ವಚನಗೀತ ಗಾಯನ, ವಿಚಾರ ಮಾಲಿಕೆ ಮತ್ತು ನಾಟಕ ಪ್ರದರ್ಶನಗಳಿರುತ್ತವೆ.

- Advertisement -
- Advertisement -

ಕೊರೊನಾ ಕಾರಣದಿಂದ ರಂಗಭೂಮಿಯ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೆಲವು ತಂಡಗಳು ಆನ್‌ಲೈನ್ ಮೂಲಕ ತಮ್ಮ ನಾಟಕವನ್ನು ಪ್ರದರ್ಶಿಸುವ ಪ್ರಯೋಗಗಳನ್ನು ಮಾಡುತ್ತಿವೆ. ಇದೀಗ ಸಾಣೇಹಳ್ಳಿ ಪ್ರತಿಷ್ಟಿತ ರಂಗಶಿಕ್ಷಣ ಕೇಂದ್ರವು 7 ದಿನಗಳ ಆನ್‌ಲೈನ್ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಂಡಿದೆ.

ನವೆಂಬರ್ 1 ರಿಂದ 7ರವರೆಗೆ ನಡೆಯುವ ಈ ನಾಟಕೋತ್ಸವದಲ್ಲಿ ಶಿವಸಂಚಾರ-ಸಾಣೇಹಳ್ಳಿಯ ತಂಡದಿಂದ ವಚನ ಗೀತೆ, ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡು-ನುಡಿಗೆ ಸಂಬಂಧಿಸಿದ ಉಪನ್ಯಾಸಗಳು ಮತ್ತು ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆ ವಿಚಾರ ಮಾಲಿಕೆ ಹಾಗೂ ನಾಟಕ ಪ್ರದರ್ಶನದಂತಹ ವಿವಿಧ ಕಾರ್ಯಕ್ರಮಗಳು ಇರಲಿವೆ.

ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ಎಲ್ಲಾ ಕ್ಷೇತ್ರಗಳೂ ಇಂದಿ ಸ್ವಲ್ಪಮಟ್ಟಿಗೆ ಪುನಃಶ್ಚೇತನಗೊಳ್ಳುವತ್ತ ಸಾಗುತ್ತಿವೆ. ರಂಗಭೂಮಿಯೂ ಇದರಿಂದ ಹೊರತಾಗಿಲ್ಲ. ಆನ್‌ಲೈನ್ ಅಭಿನಯ ತರಗತಿಗಳಿಂದ ಹಿಡಿದು, ಆನ್‌ಲೈನ್ ಮೂಲಕವೇ ನಾಟಕಗಳ ಪ್ರದರ್ಶನ ನೀಡುವ ಹಂತಕ್ಕೆ ಬಂದಿದೆ.

ಇದನ್ನೂ ಓದಿ:ಪಾರಿಜಾತಾ ಬಳಗದಿಂದ ರಂಗಭೂಮಿಯ ‘ರೀಥಿಂಕಿಂಗ್’ ಅಭಿಯಾನ

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚಿದ್ದು, ಸೋಂಕಿನ ಜೊತೆಗೆ ಜನ ಆರ್ಥಿಕ ಸಂಕಷ್ಟ, ಉದ್ಯೋಗ ನಷ್ಟದಿಂದ ಪಡಬಾರದ ಪಾಡು ಪಡುತ್ತಿದ್ದಾರೆ. ಇದರ ಜೊತೆಗೆ ಕೆಲಸ ಗೊತ್ತಿದ್ದರೂ ಸಹ ಕೆಲಸ ಇಲ್ಲದ ಸ್ಥಿತಿಯಲ್ಲಿ ಅನೇಕರಿದ್ದಾರೆ. ಹಾಗಾಗಿ ಕಳೆದ ಆರೇಳು ತಿಂಗಳುಗಳಿಂದ ಎಲ್ಲಾ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಬ್ಧಗೊಂಡಿವೆ. ಇದಕ್ಕೆ ರಂಗಭೂಮಿಯೂ ಹೊರತಾಗಿಲ್ಲ. ಕೊರೊನಾ ನಿವಾರಣೆಯ ನಂತರ ರಂಗಮಂದಿರಗಳು ತೆರೆದರೂ, ಮೊದಲಿನಂತೆ ಪ್ರೇಕ್ಷಕರು ಬರುವುದು ಸಧ್ಯದ ಪರಿಸ್ಥಿತಿಯಲ್ಲಿ ಕೊಂಚ ಕಷ್ಟವೇ.

ಕಲಾವಿದರು, ರಂಗಕರ್ಮಿಗಳು ತಮ್ಮ ಕಲೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಕಲಾಕ್ಷೇತ್ರಗಳನ್ನು ಮುಚ್ಚಿರುವುದರಿಂದ ಕಲಾವಿದರು ಮತ್ತು ರಂಗತಂಡಗಳು ಹೊಸ ಹೊಸ ಪ್ರಯತ್ನಗಳನ್ನು ಮಾಡುವ ತಯಾರಿಯಲ್ಲಿದ್ದಾರೆ. ಇದರ ಭಾಗವಾಗಿಯೇ ಈ ರಾಷ್ಟ್ರೀಯ ರಂಗೋತ್ಸವ.

ಇದನ್ನೂ ಓದಿ:ಬಾದಲ್ ಸರ್ಕಾರ್‌ರವರ ‘ಏವಂ ಇಂದ್ರಜಿತ್’: ಮೂರನೇ ರಂಗಭೂಮಿಗೆ ಅಡಿಪಾಯ ಹಾಕಿದ ನಾಟಕ

ಕೊರೊನಾ ಕಾಲಘಟ್ಟದಲ್ಲಿ ಜನರು ಹೊಸ ಹುರುಪಿನೊಟ್ಟಿಗೆ ಹೆಜ್ಜೆಯಿಡಲು ಮತ್ತು ಅವರಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಹಾಗೂ ನಾಟಕಗಳನ್ನು ಮಿಸ್ ಮಾಡಿಕೊಳ್ಳುತ್ತಿರುವವರಿಗಾಗಿಯೇ ಇಂತಹದೊಂದು ಪ್ರಯತ್ನ ನಡೆಯುತ್ತಿದೆ. ಮೊಬೈಲ್/ಲ್ಯಾಪ್ ಟಾಪ್/ಕಂಪ್ಯೂಟರ್/ಆಂಡ್ರಾಯ್ಡ್ ಟಿವಿಯಲ್ಲಿ ಮನೆಯಲ್ಲಿಯೇ ಕುಳಿತು ನಾಟಕ ವೀಕ್ಷಿಸಬಹುದು.

ಈ ಉತ್ಸವದ ಸಂಪೂರ್ಣ ಕಾರ್ಯಕ್ರಮಗಳನ್ನು, www.shivasanchara.org ಅಥವಾ ಶಿವಸಂಚಾರ-ಸಾಣೇಹಳ್ಳಿ ಫೇಸ್‌ಬುಕ್ ಗ್ರೂಪ್ ಅಥವಾ ಮತ್ತೆ ಕಲ್ಯಾಣ ಫೆಸ್‌ಬುಕ್ ಪೇಜ್ ಅಥವಾ shiva sanchara ಯೂಟ್ಯೂಬ್ ಚಾನೆಲ್‌ನಲ್ಲಿ ನೇರವಾಗಿ ವೀಕ್ಷಿಸಬಹುದಾಗಿದೆ.


ಇದನ್ನೂ ಓದಿ: ಸಮಕಾಲೀನ ರಾಜಕೀಯ ಸಂದರ್ಭಕ್ಕೆ ಸಿನೆಮಾ ಮತ್ತು ರಂಗಭೂಮಿಯ ಪ್ರತಿಕ್ರಿಯೆ: ಬಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...