Homeಕರ್ನಾಟಕ7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ

7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ

ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಚಾಸಿ ನಂಬರ್ ಇರುವ 7.5 ಲಕ್ಷ ಚಾಲಕರು ಇದ್ದಾರೆ. ಇವರಿಗೆ ಕೇವಲ 40 ಕೋಟಿ ಮಾತ್ರ ಹಣ ಮೀಸಲಿಡಲಾಗಿದೆ. ಈ ಹಣದಲ್ಲಿ ಕೇವಲ 80 ಸಾವಿರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ 5000 ರೂ ಪರಿಹಾರ ನೀಡಬಹುದು.

- Advertisement -
- Advertisement -

ರಾಜ್ಯ ಸರ್ಕಾರ ಆಟೋ-ಟ್ಯಾಕ್ಸಿ ಚಾಲಕರು, ಕ್ಷೌರಿಕರು, ಮಡಿವಾಳರು ಮತ್ತು ಕಟ್ಟಡ ಕಾರ್ಮಿಕರಿಗೆ ‘ಪರಿಹಾರ’ ಘೋಷಿಸಿದ್ದರೂ ಬಹುತೇಕರಿಗೆ ಹಣ ಬಂದಿಲ್ಲ. ಸೇವಾಸಿಂಧುವಿನಲ್ಲಿ ಕಾರ್ಮಿಕರ ನೋಂದಣಿ ನಿಧಾನಗತಿಯಲ್ಲಿ ಸಾಗುತ್ತಿರುವುದು ಹಾಗೂ ಸರ್ವರ್ ಡೌನ್ ಪ್ರಮುಖ ಕಾರಣ ಎನ್ನಲಾಗಿದೆ. ಕಾರ್ಮಿಕರ ಹೆಸರಲ್ಲಿ ಸಣ್ಣಪುಟ್ಟ ವ್ಯತ್ಯಾಸವಿದ್ದರೂ ಸೇವಾಸಿಂದು ಸ್ವೀಕರಿಸುವುದಿಲ್ಲ. ಎಲ್ಲಾ ದಾಖಲೆಗಳನ್ನು ಸಲ್ಲಿಸಿಯೂ ಅದು ಒಪ್ಪಿಕೊಳ್ಳುವುದು ಕಷ್ಟವಾಗಿದೆ. ಹಾಗಾಗಿ ಫಲನುಭವಿಗಳು 5000 ರೂ ಪರಿಹಾರದ ಹಣ ಪಡೆಯುವುದಕ್ಕೆ ಹರಸಾಹಸಪಡಬೇಕಾಗಿದೆ.

ರಾಜ್ಯದಲ್ಲಿ 7.5 ಲಕ್ಷ ಮಂದಿ ಆಟೋ ಚಾಲಕರು ಮತ್ತು ಟ್ಯಾಕ್ಸಿ ಚಾಲಕರು ಇದ್ದಾರೆ. 2ಲಕ್ಷದಷ್ಟು ಮಂದಿ ಲೈಸನ್ಸ್  ಹೊಂದಿಲ್ಲದ ಚಾಲಕರು ಇದ್ದಾರೆ. ಹಾಗಾಗಿ ಪರವಾನಿಗೆ ಹೊಂದಿಲ್ಲದ ಚಾಲಕರಿಗೆ ಹಣ ಬರುವುದಿಲ್ಲ. ಅಷ್ಟೇ ಅಲ್ಲದೆ ಎಲ್ಲಾ ದಾಖಲೆಗಳು ಇರುವ ಚಾಲಕರಿಗೂ ಹಣ ದೊರೆಯುತ್ತದೆ ಎಂಬ ನಂಬಿಕೆ ಇಲ್ಲ. ಆದರೂ ಚಾಲಕರು ನಿತ್ಯವು ಸೇವಾಸಿಂದುವಿನಲ್ಲಿ ನೋಂದಣಿ ಮಾಡಿಸುವುದರಲ್ಲಿ ನಿರತರಾಗಿದ್ದಾರೆ. ದಾಖಲೆಗಳನ್ನು ಅಪ್ ಲೋಡ್ ಮಾಡಿ ಅಗ್ರಿ ಕೊಟ್ಟರೆ ಅದು ತೆಗೆದುಕೊಳ್ಳುವುದಿಲ್ಲ. ಹಾಗಾಗಿ ನೋಂದಣಿ ಕಾರ್ಯ ವಿಳಂಬವಾಗುತ್ತಿದೆ. ಇದೇ ರೀತಿ ಮುಂದುವರಿದರೆ ವರ್ಷವಾದರೂ ನೋಂದಣಿ ಮಾಡಿಸಲು ಸಾಧ್ಯವಿಲ್ಲ ಎಂದು ಚಾಲಕರು ಆರೋಪಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎನ್.ಉಮೇಶ್, “ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಚಾಸಿ ನಂಬರ್ ಇರುವ ಚಾಲಕರು 7.5 ಲಕ್ಷ ಇದ್ದಾರೆ. ಇವರಿಗೆ ಕೇವಲ 40 ಕೋಟಿ ಮಾತ್ರ ಹಣ ಮೀಸಲಿಡಲಾಗಿದೆ. ಈ ಹಣದಲ್ಲಿ ಕೇವಲ 80 ಸಾವಿರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ 5000 ರೂ ಪರಿಹಾರ ನೀಡಬಹುದು. 7.5 ಲಕ್ಷ ಮಂದಿ ಚಾಲಕರಿಗೆ 5 ಸಾವಿರ ರೂನಂತ ಪರಿಹಾರ ನೀಡಬೇಕೆಂದರೆ 400 ಕೋಟಿ ಹಣ ಮೀಸಲಿಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ 1610 ಕೋಟಿಯಲ್ಲಿ ಕೇವಲ 40 ಕೋಟಿ ಚಾಲಕರಿಗೆ ನೀಡಲು ಉದ್ದೇಶಿಸಿರುವುದರಿಂದ ಈ ಹಣ ಸಾಕಾಗುವುದಿಲ್ಲ ಎಂದು ಹೇಳಿದರು.

ಚಾಲಕರಿಗೆ ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಎಲ್ಲ ಇದ್ದರೂ ಚಾಸಿಸ್ ನಂಬರ್ ಬೇರೆಯವರ ಹೆಸರಲ್ಲಿರುತ್ತದೆ.  ಶೇಕಡ 40ರಷ್ಟು ಆಟೋ ಮತ್ತು ಟ್ಯಾಕ್ಸಿಗಳು ಚಾಲಕ ಕಮ್ ಮಾಲಿಕರವು ಆಗಿರುತ್ತವೆ. ಅವರಿಗೆ ಚಾಸಿಸ್ ನಂಬರ್ ಕೂಡ ಇರುತ್ತದೆ. ಉಳಿದ ಶೇಕಡ 60ರಷ್ಟು ಚಾಲಕರು ಚಾಸಿಸ್ ನಂಬರ್ ಹೊಂದಿಲ್ಲ. ಡ್ರೈವಿಂಗ್ ಲೈಸನ್ಸ್ ನಲ್ಲಿ ಮತ್ತು ಆಧಾರ್ ಕಾರ್ಡ್ ನಲ್ಲಿ ಹೆಸರು ವ್ಯತ್ಯಾಸವಿದ್ದರೆ (ಅದು ಇನ್ಶಿಯಲ್).ಆಗ ಸೇವಾಸಿಂದು ವೈಬ್ ಸೈಟ್ ನಲ್ಲಿ ನೋಂದಣಿಯಾಗದೆ ರಿಜೆಕ್ಟ್ ಆಗುತ್ತದೆ. ಇಂಥ ಪ್ರಕರಣಗಳು ಹಲವು ಇರುವುದು ಕಂಡು ಬಂದಿದೆ. ಆದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರೂ ಪರಿಹಾರ ಪಡೆಯಲು ಬಾರದಂತಹ ಪರಿಸ್ಥಿತಿ ಬಂದಿದೆ.


ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ


2018ರ ಅಂಕಿಸಂಖ್ಯೆಗಳ ಪ್ರಕಾರ ರಾಜ್ಯದಲ್ಲಿ 21 ಲಕ್ಷ ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಸಿದ್ದಾರೆ. ಆದರೆ 2019ರಲ್ಲಿ ನವೀಕರಣ ಆಗಿರುವುದು ತುಂಬ ಕಡಿಮೆ. ಕೇವಲ 1.55 ಲಕ್ಷ ಮಂದಿ ಕಟ್ಟಡ ಕಾರ್ಮಿಕರ ಹೆಸರನ್ನು ನವೀಕರಿಸಲು ಮಾತ್ರ ಸಾಧ್ಯವಾಗಿದೆ. ಇದುವರೆಗೆ ಕಟ್ಟಡ ಕಾರ್ಮಿಕರಿಗೆ ಶೇ.50ರಷ್ಟು ಮಂದಿಗೆ ಪರಿಹಾರದ ಹಣ ಅವರ ಅಕೌಂಟಿಗೆ ನೇರ ವರ್ಗಾವಣೆಗೊಂಡಿದೆ.  ಉಳಿದವರಿಗೆ ಇನ್ನೂ ಬಂದಿಲ್ಲ.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಮಹಾಂತೇಶ್ “ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 1 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಹಾಗಾಗಿ ಕಟ್ಟಡ ಕಾರ್ಮಿಕರಿಗೆ ಹಣ ಬಂದಿದೆ. ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನೋಂದಾಯಿತರಲ್ಲದ ಕಾರ್ಮಿಕರಿಗೂ ಪರಿಹಾರ ನೀಡಬೇಕೆಂಬ ಒತ್ತಾಯ ನಮ್ಮದು. ಈ ಹಿನ್ನೆಲೆಯಲ್ಲಿ 12 ಮಂದಿ ಕಾರ್ಮಿಕರಿಗೆ ಹಣ ವರ್ಗಾವಣೆಯಾಗಿದೆ. ನಮ್ಮ ತಕರಾರಿರುವುದು ಶಾಸಕರಿಗೆ ಆಹಾರ ಧಾನ್ಯದ ಕಿಟ್ ನೀಡಿರುವುದರಲ್ಲಿ. ಇದರಲ್ಲಿ ವಂಚನೆಯಾಗಿದೆ. ಹಾಗಾಗಿ ಕಷ್ಟದಲ್ಲಿರುವ ಎಲ್ಲಾ ಕಾರ್ಮಿಕರಿಗೂ ಪ್ರತಿ ತಿಂಗಳು 8 ಸಾವಿರದಂತೆ ಮೂರು ತಿಂಗಳಿಗೆ 24 ಸಾವಿರ ರೂಪಾಯಿ ನೀಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹಾಕಿದ್ದೇವೆ ಎಂದರು.

ಮಡಿವಾಳರು, ಕ್ಷೌರಿಕರು ಸೇವಾಸಿಂದುವಿನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಪರದಾಡುತ್ತಿದ್ದಾರೆ. ದಾಖಲೆಗಳನ್ನು ಹಿಡಿದು ಇಂಟರ್ ನೆಟ್ ಸೆಂಟರ್ ಗಳಿಗೆ ಅಲೆಯುತ್ತಿರುವುದು ಸಾಮಾನ್ಯವಾಗಿದೆ. ಆಧಾರ್‌, ಬ್ಯಾಂಕ್ ಪಾಸ್ ಪುಸ್ತಕ, ಅಂಗಡಿ ಲೈಸನ್ಸ್ ನೀಡಿದರೂ ನಮಗೆ ಇನ್ನೂ ಹಣ ಬಂದಿಲ್ಲ ಎನ್ನುತ್ತಾರೆ ರಾಜು.

ವೈಜ್ಞಾನಿಕವಾಗಿ ಚಾಲಕರು, ಕ್ಷೌರಿಕರು, ಮಡಿವಾಳರ ಸಮಗ್ರ ಮಾಹಿತಿ ಪಡೆಯದೇ ಇರುವುದು ಇಂತಹ ವಿಳಂಬಕ್ಕೆ ಕಾರಣವಾಗಿದೆ. ಆಧಾರ್, ಪಾಸ್ ಪುಸ್ತಕ, ಡ್ರೈವಿಂಗ್ ಲೈಸನ್ಸ್‌‌ನಲ್ಲಿರುವ ಹೆಸರುಗಳ ಸಣ್ಣಪುಟ್ಟ ವ್ಯತ್ಯಾಸಗಳು ಕೂಡ ಪರಿಹಾರದ ಹಣ ಪಡೆಯಲು ಸಾಧ್ಯವಾಗಿಲ್ಲ.


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...