Homeಕರ್ನಾಟಕ7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ

7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ

ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಚಾಸಿ ನಂಬರ್ ಇರುವ 7.5 ಲಕ್ಷ ಚಾಲಕರು ಇದ್ದಾರೆ. ಇವರಿಗೆ ಕೇವಲ 40 ಕೋಟಿ ಮಾತ್ರ ಹಣ ಮೀಸಲಿಡಲಾಗಿದೆ. ಈ ಹಣದಲ್ಲಿ ಕೇವಲ 80 ಸಾವಿರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ 5000 ರೂ ಪರಿಹಾರ ನೀಡಬಹುದು.

- Advertisement -
- Advertisement -

ರಾಜ್ಯ ಸರ್ಕಾರ ಆಟೋ-ಟ್ಯಾಕ್ಸಿ ಚಾಲಕರು, ಕ್ಷೌರಿಕರು, ಮಡಿವಾಳರು ಮತ್ತು ಕಟ್ಟಡ ಕಾರ್ಮಿಕರಿಗೆ ‘ಪರಿಹಾರ’ ಘೋಷಿಸಿದ್ದರೂ ಬಹುತೇಕರಿಗೆ ಹಣ ಬಂದಿಲ್ಲ. ಸೇವಾಸಿಂಧುವಿನಲ್ಲಿ ಕಾರ್ಮಿಕರ ನೋಂದಣಿ ನಿಧಾನಗತಿಯಲ್ಲಿ ಸಾಗುತ್ತಿರುವುದು ಹಾಗೂ ಸರ್ವರ್ ಡೌನ್ ಪ್ರಮುಖ ಕಾರಣ ಎನ್ನಲಾಗಿದೆ. ಕಾರ್ಮಿಕರ ಹೆಸರಲ್ಲಿ ಸಣ್ಣಪುಟ್ಟ ವ್ಯತ್ಯಾಸವಿದ್ದರೂ ಸೇವಾಸಿಂದು ಸ್ವೀಕರಿಸುವುದಿಲ್ಲ. ಎಲ್ಲಾ ದಾಖಲೆಗಳನ್ನು ಸಲ್ಲಿಸಿಯೂ ಅದು ಒಪ್ಪಿಕೊಳ್ಳುವುದು ಕಷ್ಟವಾಗಿದೆ. ಹಾಗಾಗಿ ಫಲನುಭವಿಗಳು 5000 ರೂ ಪರಿಹಾರದ ಹಣ ಪಡೆಯುವುದಕ್ಕೆ ಹರಸಾಹಸಪಡಬೇಕಾಗಿದೆ.

ರಾಜ್ಯದಲ್ಲಿ 7.5 ಲಕ್ಷ ಮಂದಿ ಆಟೋ ಚಾಲಕರು ಮತ್ತು ಟ್ಯಾಕ್ಸಿ ಚಾಲಕರು ಇದ್ದಾರೆ. 2ಲಕ್ಷದಷ್ಟು ಮಂದಿ ಲೈಸನ್ಸ್  ಹೊಂದಿಲ್ಲದ ಚಾಲಕರು ಇದ್ದಾರೆ. ಹಾಗಾಗಿ ಪರವಾನಿಗೆ ಹೊಂದಿಲ್ಲದ ಚಾಲಕರಿಗೆ ಹಣ ಬರುವುದಿಲ್ಲ. ಅಷ್ಟೇ ಅಲ್ಲದೆ ಎಲ್ಲಾ ದಾಖಲೆಗಳು ಇರುವ ಚಾಲಕರಿಗೂ ಹಣ ದೊರೆಯುತ್ತದೆ ಎಂಬ ನಂಬಿಕೆ ಇಲ್ಲ. ಆದರೂ ಚಾಲಕರು ನಿತ್ಯವು ಸೇವಾಸಿಂದುವಿನಲ್ಲಿ ನೋಂದಣಿ ಮಾಡಿಸುವುದರಲ್ಲಿ ನಿರತರಾಗಿದ್ದಾರೆ. ದಾಖಲೆಗಳನ್ನು ಅಪ್ ಲೋಡ್ ಮಾಡಿ ಅಗ್ರಿ ಕೊಟ್ಟರೆ ಅದು ತೆಗೆದುಕೊಳ್ಳುವುದಿಲ್ಲ. ಹಾಗಾಗಿ ನೋಂದಣಿ ಕಾರ್ಯ ವಿಳಂಬವಾಗುತ್ತಿದೆ. ಇದೇ ರೀತಿ ಮುಂದುವರಿದರೆ ವರ್ಷವಾದರೂ ನೋಂದಣಿ ಮಾಡಿಸಲು ಸಾಧ್ಯವಿಲ್ಲ ಎಂದು ಚಾಲಕರು ಆರೋಪಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎನ್.ಉಮೇಶ್, “ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಚಾಸಿ ನಂಬರ್ ಇರುವ ಚಾಲಕರು 7.5 ಲಕ್ಷ ಇದ್ದಾರೆ. ಇವರಿಗೆ ಕೇವಲ 40 ಕೋಟಿ ಮಾತ್ರ ಹಣ ಮೀಸಲಿಡಲಾಗಿದೆ. ಈ ಹಣದಲ್ಲಿ ಕೇವಲ 80 ಸಾವಿರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ 5000 ರೂ ಪರಿಹಾರ ನೀಡಬಹುದು. 7.5 ಲಕ್ಷ ಮಂದಿ ಚಾಲಕರಿಗೆ 5 ಸಾವಿರ ರೂನಂತ ಪರಿಹಾರ ನೀಡಬೇಕೆಂದರೆ 400 ಕೋಟಿ ಹಣ ಮೀಸಲಿಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ 1610 ಕೋಟಿಯಲ್ಲಿ ಕೇವಲ 40 ಕೋಟಿ ಚಾಲಕರಿಗೆ ನೀಡಲು ಉದ್ದೇಶಿಸಿರುವುದರಿಂದ ಈ ಹಣ ಸಾಕಾಗುವುದಿಲ್ಲ ಎಂದು ಹೇಳಿದರು.

ಚಾಲಕರಿಗೆ ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಎಲ್ಲ ಇದ್ದರೂ ಚಾಸಿಸ್ ನಂಬರ್ ಬೇರೆಯವರ ಹೆಸರಲ್ಲಿರುತ್ತದೆ.  ಶೇಕಡ 40ರಷ್ಟು ಆಟೋ ಮತ್ತು ಟ್ಯಾಕ್ಸಿಗಳು ಚಾಲಕ ಕಮ್ ಮಾಲಿಕರವು ಆಗಿರುತ್ತವೆ. ಅವರಿಗೆ ಚಾಸಿಸ್ ನಂಬರ್ ಕೂಡ ಇರುತ್ತದೆ. ಉಳಿದ ಶೇಕಡ 60ರಷ್ಟು ಚಾಲಕರು ಚಾಸಿಸ್ ನಂಬರ್ ಹೊಂದಿಲ್ಲ. ಡ್ರೈವಿಂಗ್ ಲೈಸನ್ಸ್ ನಲ್ಲಿ ಮತ್ತು ಆಧಾರ್ ಕಾರ್ಡ್ ನಲ್ಲಿ ಹೆಸರು ವ್ಯತ್ಯಾಸವಿದ್ದರೆ (ಅದು ಇನ್ಶಿಯಲ್).ಆಗ ಸೇವಾಸಿಂದು ವೈಬ್ ಸೈಟ್ ನಲ್ಲಿ ನೋಂದಣಿಯಾಗದೆ ರಿಜೆಕ್ಟ್ ಆಗುತ್ತದೆ. ಇಂಥ ಪ್ರಕರಣಗಳು ಹಲವು ಇರುವುದು ಕಂಡು ಬಂದಿದೆ. ಆದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರೂ ಪರಿಹಾರ ಪಡೆಯಲು ಬಾರದಂತಹ ಪರಿಸ್ಥಿತಿ ಬಂದಿದೆ.


ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ


2018ರ ಅಂಕಿಸಂಖ್ಯೆಗಳ ಪ್ರಕಾರ ರಾಜ್ಯದಲ್ಲಿ 21 ಲಕ್ಷ ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಸಿದ್ದಾರೆ. ಆದರೆ 2019ರಲ್ಲಿ ನವೀಕರಣ ಆಗಿರುವುದು ತುಂಬ ಕಡಿಮೆ. ಕೇವಲ 1.55 ಲಕ್ಷ ಮಂದಿ ಕಟ್ಟಡ ಕಾರ್ಮಿಕರ ಹೆಸರನ್ನು ನವೀಕರಿಸಲು ಮಾತ್ರ ಸಾಧ್ಯವಾಗಿದೆ. ಇದುವರೆಗೆ ಕಟ್ಟಡ ಕಾರ್ಮಿಕರಿಗೆ ಶೇ.50ರಷ್ಟು ಮಂದಿಗೆ ಪರಿಹಾರದ ಹಣ ಅವರ ಅಕೌಂಟಿಗೆ ನೇರ ವರ್ಗಾವಣೆಗೊಂಡಿದೆ.  ಉಳಿದವರಿಗೆ ಇನ್ನೂ ಬಂದಿಲ್ಲ.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಮಹಾಂತೇಶ್ “ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 1 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಹಾಗಾಗಿ ಕಟ್ಟಡ ಕಾರ್ಮಿಕರಿಗೆ ಹಣ ಬಂದಿದೆ. ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನೋಂದಾಯಿತರಲ್ಲದ ಕಾರ್ಮಿಕರಿಗೂ ಪರಿಹಾರ ನೀಡಬೇಕೆಂಬ ಒತ್ತಾಯ ನಮ್ಮದು. ಈ ಹಿನ್ನೆಲೆಯಲ್ಲಿ 12 ಮಂದಿ ಕಾರ್ಮಿಕರಿಗೆ ಹಣ ವರ್ಗಾವಣೆಯಾಗಿದೆ. ನಮ್ಮ ತಕರಾರಿರುವುದು ಶಾಸಕರಿಗೆ ಆಹಾರ ಧಾನ್ಯದ ಕಿಟ್ ನೀಡಿರುವುದರಲ್ಲಿ. ಇದರಲ್ಲಿ ವಂಚನೆಯಾಗಿದೆ. ಹಾಗಾಗಿ ಕಷ್ಟದಲ್ಲಿರುವ ಎಲ್ಲಾ ಕಾರ್ಮಿಕರಿಗೂ ಪ್ರತಿ ತಿಂಗಳು 8 ಸಾವಿರದಂತೆ ಮೂರು ತಿಂಗಳಿಗೆ 24 ಸಾವಿರ ರೂಪಾಯಿ ನೀಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹಾಕಿದ್ದೇವೆ ಎಂದರು.

ಮಡಿವಾಳರು, ಕ್ಷೌರಿಕರು ಸೇವಾಸಿಂದುವಿನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಪರದಾಡುತ್ತಿದ್ದಾರೆ. ದಾಖಲೆಗಳನ್ನು ಹಿಡಿದು ಇಂಟರ್ ನೆಟ್ ಸೆಂಟರ್ ಗಳಿಗೆ ಅಲೆಯುತ್ತಿರುವುದು ಸಾಮಾನ್ಯವಾಗಿದೆ. ಆಧಾರ್‌, ಬ್ಯಾಂಕ್ ಪಾಸ್ ಪುಸ್ತಕ, ಅಂಗಡಿ ಲೈಸನ್ಸ್ ನೀಡಿದರೂ ನಮಗೆ ಇನ್ನೂ ಹಣ ಬಂದಿಲ್ಲ ಎನ್ನುತ್ತಾರೆ ರಾಜು.

ವೈಜ್ಞಾನಿಕವಾಗಿ ಚಾಲಕರು, ಕ್ಷೌರಿಕರು, ಮಡಿವಾಳರ ಸಮಗ್ರ ಮಾಹಿತಿ ಪಡೆಯದೇ ಇರುವುದು ಇಂತಹ ವಿಳಂಬಕ್ಕೆ ಕಾರಣವಾಗಿದೆ. ಆಧಾರ್, ಪಾಸ್ ಪುಸ್ತಕ, ಡ್ರೈವಿಂಗ್ ಲೈಸನ್ಸ್‌‌ನಲ್ಲಿರುವ ಹೆಸರುಗಳ ಸಣ್ಣಪುಟ್ಟ ವ್ಯತ್ಯಾಸಗಳು ಕೂಡ ಪರಿಹಾರದ ಹಣ ಪಡೆಯಲು ಸಾಧ್ಯವಾಗಿಲ್ಲ.


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...