Homeಕರ್ನಾಟಕ7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ

7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ

ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಚಾಸಿ ನಂಬರ್ ಇರುವ 7.5 ಲಕ್ಷ ಚಾಲಕರು ಇದ್ದಾರೆ. ಇವರಿಗೆ ಕೇವಲ 40 ಕೋಟಿ ಮಾತ್ರ ಹಣ ಮೀಸಲಿಡಲಾಗಿದೆ. ಈ ಹಣದಲ್ಲಿ ಕೇವಲ 80 ಸಾವಿರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ 5000 ರೂ ಪರಿಹಾರ ನೀಡಬಹುದು.

- Advertisement -
- Advertisement -

ರಾಜ್ಯ ಸರ್ಕಾರ ಆಟೋ-ಟ್ಯಾಕ್ಸಿ ಚಾಲಕರು, ಕ್ಷೌರಿಕರು, ಮಡಿವಾಳರು ಮತ್ತು ಕಟ್ಟಡ ಕಾರ್ಮಿಕರಿಗೆ ‘ಪರಿಹಾರ’ ಘೋಷಿಸಿದ್ದರೂ ಬಹುತೇಕರಿಗೆ ಹಣ ಬಂದಿಲ್ಲ. ಸೇವಾಸಿಂಧುವಿನಲ್ಲಿ ಕಾರ್ಮಿಕರ ನೋಂದಣಿ ನಿಧಾನಗತಿಯಲ್ಲಿ ಸಾಗುತ್ತಿರುವುದು ಹಾಗೂ ಸರ್ವರ್ ಡೌನ್ ಪ್ರಮುಖ ಕಾರಣ ಎನ್ನಲಾಗಿದೆ. ಕಾರ್ಮಿಕರ ಹೆಸರಲ್ಲಿ ಸಣ್ಣಪುಟ್ಟ ವ್ಯತ್ಯಾಸವಿದ್ದರೂ ಸೇವಾಸಿಂದು ಸ್ವೀಕರಿಸುವುದಿಲ್ಲ. ಎಲ್ಲಾ ದಾಖಲೆಗಳನ್ನು ಸಲ್ಲಿಸಿಯೂ ಅದು ಒಪ್ಪಿಕೊಳ್ಳುವುದು ಕಷ್ಟವಾಗಿದೆ. ಹಾಗಾಗಿ ಫಲನುಭವಿಗಳು 5000 ರೂ ಪರಿಹಾರದ ಹಣ ಪಡೆಯುವುದಕ್ಕೆ ಹರಸಾಹಸಪಡಬೇಕಾಗಿದೆ.

ರಾಜ್ಯದಲ್ಲಿ 7.5 ಲಕ್ಷ ಮಂದಿ ಆಟೋ ಚಾಲಕರು ಮತ್ತು ಟ್ಯಾಕ್ಸಿ ಚಾಲಕರು ಇದ್ದಾರೆ. 2ಲಕ್ಷದಷ್ಟು ಮಂದಿ ಲೈಸನ್ಸ್  ಹೊಂದಿಲ್ಲದ ಚಾಲಕರು ಇದ್ದಾರೆ. ಹಾಗಾಗಿ ಪರವಾನಿಗೆ ಹೊಂದಿಲ್ಲದ ಚಾಲಕರಿಗೆ ಹಣ ಬರುವುದಿಲ್ಲ. ಅಷ್ಟೇ ಅಲ್ಲದೆ ಎಲ್ಲಾ ದಾಖಲೆಗಳು ಇರುವ ಚಾಲಕರಿಗೂ ಹಣ ದೊರೆಯುತ್ತದೆ ಎಂಬ ನಂಬಿಕೆ ಇಲ್ಲ. ಆದರೂ ಚಾಲಕರು ನಿತ್ಯವು ಸೇವಾಸಿಂದುವಿನಲ್ಲಿ ನೋಂದಣಿ ಮಾಡಿಸುವುದರಲ್ಲಿ ನಿರತರಾಗಿದ್ದಾರೆ. ದಾಖಲೆಗಳನ್ನು ಅಪ್ ಲೋಡ್ ಮಾಡಿ ಅಗ್ರಿ ಕೊಟ್ಟರೆ ಅದು ತೆಗೆದುಕೊಳ್ಳುವುದಿಲ್ಲ. ಹಾಗಾಗಿ ನೋಂದಣಿ ಕಾರ್ಯ ವಿಳಂಬವಾಗುತ್ತಿದೆ. ಇದೇ ರೀತಿ ಮುಂದುವರಿದರೆ ವರ್ಷವಾದರೂ ನೋಂದಣಿ ಮಾಡಿಸಲು ಸಾಧ್ಯವಿಲ್ಲ ಎಂದು ಚಾಲಕರು ಆರೋಪಿಸುತ್ತಾರೆ.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎನ್.ಉಮೇಶ್, “ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಚಾಸಿ ನಂಬರ್ ಇರುವ ಚಾಲಕರು 7.5 ಲಕ್ಷ ಇದ್ದಾರೆ. ಇವರಿಗೆ ಕೇವಲ 40 ಕೋಟಿ ಮಾತ್ರ ಹಣ ಮೀಸಲಿಡಲಾಗಿದೆ. ಈ ಹಣದಲ್ಲಿ ಕೇವಲ 80 ಸಾವಿರ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮಾತ್ರ 5000 ರೂ ಪರಿಹಾರ ನೀಡಬಹುದು. 7.5 ಲಕ್ಷ ಮಂದಿ ಚಾಲಕರಿಗೆ 5 ಸಾವಿರ ರೂನಂತ ಪರಿಹಾರ ನೀಡಬೇಕೆಂದರೆ 400 ಕೋಟಿ ಹಣ ಮೀಸಲಿಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ 1610 ಕೋಟಿಯಲ್ಲಿ ಕೇವಲ 40 ಕೋಟಿ ಚಾಲಕರಿಗೆ ನೀಡಲು ಉದ್ದೇಶಿಸಿರುವುದರಿಂದ ಈ ಹಣ ಸಾಕಾಗುವುದಿಲ್ಲ ಎಂದು ಹೇಳಿದರು.

ಚಾಲಕರಿಗೆ ಡ್ರೈವಿಂಗ್ ಲೈಸನ್ಸ್, ಬ್ಯಾಡ್ಜ್ ಎಲ್ಲ ಇದ್ದರೂ ಚಾಸಿಸ್ ನಂಬರ್ ಬೇರೆಯವರ ಹೆಸರಲ್ಲಿರುತ್ತದೆ.  ಶೇಕಡ 40ರಷ್ಟು ಆಟೋ ಮತ್ತು ಟ್ಯಾಕ್ಸಿಗಳು ಚಾಲಕ ಕಮ್ ಮಾಲಿಕರವು ಆಗಿರುತ್ತವೆ. ಅವರಿಗೆ ಚಾಸಿಸ್ ನಂಬರ್ ಕೂಡ ಇರುತ್ತದೆ. ಉಳಿದ ಶೇಕಡ 60ರಷ್ಟು ಚಾಲಕರು ಚಾಸಿಸ್ ನಂಬರ್ ಹೊಂದಿಲ್ಲ. ಡ್ರೈವಿಂಗ್ ಲೈಸನ್ಸ್ ನಲ್ಲಿ ಮತ್ತು ಆಧಾರ್ ಕಾರ್ಡ್ ನಲ್ಲಿ ಹೆಸರು ವ್ಯತ್ಯಾಸವಿದ್ದರೆ (ಅದು ಇನ್ಶಿಯಲ್).ಆಗ ಸೇವಾಸಿಂದು ವೈಬ್ ಸೈಟ್ ನಲ್ಲಿ ನೋಂದಣಿಯಾಗದೆ ರಿಜೆಕ್ಟ್ ಆಗುತ್ತದೆ. ಇಂಥ ಪ್ರಕರಣಗಳು ಹಲವು ಇರುವುದು ಕಂಡು ಬಂದಿದೆ. ಆದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರೂ ಪರಿಹಾರ ಪಡೆಯಲು ಬಾರದಂತಹ ಪರಿಸ್ಥಿತಿ ಬಂದಿದೆ.


ಓದಿ: ಕೊರೊನಾ ವಿರುದ್ದ ಹೋರಾಡಲು ಮಹಾರಾಷ್ಟ್ರಕ್ಕೆ ವೈದ್ಯರ ತಂಡ ಕಳುಹಿಸಲಿರುವ ಕೇರಳ


2018ರ ಅಂಕಿಸಂಖ್ಯೆಗಳ ಪ್ರಕಾರ ರಾಜ್ಯದಲ್ಲಿ 21 ಲಕ್ಷ ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಸಿದ್ದಾರೆ. ಆದರೆ 2019ರಲ್ಲಿ ನವೀಕರಣ ಆಗಿರುವುದು ತುಂಬ ಕಡಿಮೆ. ಕೇವಲ 1.55 ಲಕ್ಷ ಮಂದಿ ಕಟ್ಟಡ ಕಾರ್ಮಿಕರ ಹೆಸರನ್ನು ನವೀಕರಿಸಲು ಮಾತ್ರ ಸಾಧ್ಯವಾಗಿದೆ. ಇದುವರೆಗೆ ಕಟ್ಟಡ ಕಾರ್ಮಿಕರಿಗೆ ಶೇ.50ರಷ್ಟು ಮಂದಿಗೆ ಪರಿಹಾರದ ಹಣ ಅವರ ಅಕೌಂಟಿಗೆ ನೇರ ವರ್ಗಾವಣೆಗೊಂಡಿದೆ.  ಉಳಿದವರಿಗೆ ಇನ್ನೂ ಬಂದಿಲ್ಲ.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಮಹಾಂತೇಶ್ “ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 1 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಹಾಗಾಗಿ ಕಟ್ಟಡ ಕಾರ್ಮಿಕರಿಗೆ ಹಣ ಬಂದಿದೆ. ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನೋಂದಾಯಿತರಲ್ಲದ ಕಾರ್ಮಿಕರಿಗೂ ಪರಿಹಾರ ನೀಡಬೇಕೆಂಬ ಒತ್ತಾಯ ನಮ್ಮದು. ಈ ಹಿನ್ನೆಲೆಯಲ್ಲಿ 12 ಮಂದಿ ಕಾರ್ಮಿಕರಿಗೆ ಹಣ ವರ್ಗಾವಣೆಯಾಗಿದೆ. ನಮ್ಮ ತಕರಾರಿರುವುದು ಶಾಸಕರಿಗೆ ಆಹಾರ ಧಾನ್ಯದ ಕಿಟ್ ನೀಡಿರುವುದರಲ್ಲಿ. ಇದರಲ್ಲಿ ವಂಚನೆಯಾಗಿದೆ. ಹಾಗಾಗಿ ಕಷ್ಟದಲ್ಲಿರುವ ಎಲ್ಲಾ ಕಾರ್ಮಿಕರಿಗೂ ಪ್ರತಿ ತಿಂಗಳು 8 ಸಾವಿರದಂತೆ ಮೂರು ತಿಂಗಳಿಗೆ 24 ಸಾವಿರ ರೂಪಾಯಿ ನೀಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹಾಕಿದ್ದೇವೆ ಎಂದರು.

ಮಡಿವಾಳರು, ಕ್ಷೌರಿಕರು ಸೇವಾಸಿಂದುವಿನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಪರದಾಡುತ್ತಿದ್ದಾರೆ. ದಾಖಲೆಗಳನ್ನು ಹಿಡಿದು ಇಂಟರ್ ನೆಟ್ ಸೆಂಟರ್ ಗಳಿಗೆ ಅಲೆಯುತ್ತಿರುವುದು ಸಾಮಾನ್ಯವಾಗಿದೆ. ಆಧಾರ್‌, ಬ್ಯಾಂಕ್ ಪಾಸ್ ಪುಸ್ತಕ, ಅಂಗಡಿ ಲೈಸನ್ಸ್ ನೀಡಿದರೂ ನಮಗೆ ಇನ್ನೂ ಹಣ ಬಂದಿಲ್ಲ ಎನ್ನುತ್ತಾರೆ ರಾಜು.

ವೈಜ್ಞಾನಿಕವಾಗಿ ಚಾಲಕರು, ಕ್ಷೌರಿಕರು, ಮಡಿವಾಳರ ಸಮಗ್ರ ಮಾಹಿತಿ ಪಡೆಯದೇ ಇರುವುದು ಇಂತಹ ವಿಳಂಬಕ್ಕೆ ಕಾರಣವಾಗಿದೆ. ಆಧಾರ್, ಪಾಸ್ ಪುಸ್ತಕ, ಡ್ರೈವಿಂಗ್ ಲೈಸನ್ಸ್‌‌ನಲ್ಲಿರುವ ಹೆಸರುಗಳ ಸಣ್ಣಪುಟ್ಟ ವ್ಯತ್ಯಾಸಗಳು ಕೂಡ ಪರಿಹಾರದ ಹಣ ಪಡೆಯಲು ಸಾಧ್ಯವಾಗಿಲ್ಲ.


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....