Homeಕರ್ನಾಟಕಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಗಳು ಎದ್ದಿದೆ.

- Advertisement -
- Advertisement -

ತುಮಕೂರು: ಕೊರೊನ ವಾರಿಯರ್ಸ್ ಗೆ ವೈಯಕ್ತಿಕ ಸುರಕ್ಷಾ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ಆರೋಪದ ಮೇಲೆ ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

ಮೊದಲಿಗೆ ಪಿಪಿಇ ಕಿಟ್‌‌ಗಳ ಟೆಂಡರ್ ರಾಜ್ಯ ಮಟ್ಟದಲ್ಲಾಗಿದೆಯೇ ಅಥವಾ ಜಿಲ್ಲಾ ಮಟ್ಟದಲ್ಲಿ ಆಗಿದೆಯೇ ಸ್ಪಷ್ಟ ಮಾಹಿತಿ ಇಲ್ಲ. ಆರೋಗ್ಯ ಇಲಾಖೆಯ ನಿರ್ದೇಶಕರೇ ಯಾವ್ಯಾವ ಜಿಲ್ಲೆಗಳಿಗೆ ಎಷ್ಟು ಪಿಪಿಇ ಕಿಟ್‌‌ಗಳ ಅಗತ್ಯವಿದೆ ಎಂಬ ಮಾಹಿತಿ ಪಡೆದು ರಾಜ್ಯಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಬಹುದು. ಇಲ್ಲವೇ ಅಧಿಕಾರ ವಿಕೇಂದ್ರೀಕರಣಕ್ಕೆ ಅವಕಾಶ ನೀಡಿದ್ದರೆ, ಜಿಲ್ಲಾ ಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಲು ಅವಕಾಶವಿದೆ.

ಒಂದೊಮ್ಮೆ ಜಿಲ್ಲಾಮಟ್ಟದಲ್ಲಿಯೇ ಪಿಪಿಇ ಕಿಟ್ ಖರೀದಿಗೆ ಟೆಂಟರ್ ಕರೆದಿದ್ದರೆ ಮೇಲಿನವರಿಗೆ ಕಮಿಷನ್ ನೀಡಲೇಬೇಕು ಎಂಬುದು ಆರೋಗ್ಯ ಇಲಾಖೆಯಲ್ಲಿನ ಮೂಲಗಳು ಹೇಳುತ್ತವೆ. ತುಮಕೂರಿನಲ್ಲಿ ಚಂದ್ರಿಕಾ ಅವರು ಜಿಲ್ಲೆಯಲ್ಲೇ ಟೆಂಡರ್ ಕರೆದು ಖರೀದಿಸಿದರೇ ಸ್ಪಷ್ಟವಾಗಿಲ್ಲ. ಆದರೆ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಗುಬ್ಬಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚಂದ್ರಿಕಾ ವಿರುದ್ಧ ಅವ್ಯವಹಾರದ ಆರೋಪ ಮಾಡುತ್ತಾರೆ.

ದಿಲೀಪ್ ಕುಮಾರ್ ಹಿಂದಿನ ಡಿಎಚ್ಒ ಚಂದ್ರಿಕಾ ವಿರುದ್ಧ ಆರೋಪ ಮಾಡುತ್ತಿದ್ದಂತೆಯೇ ಅವರನ್ನು ಡಿಮೋಷನ್ ಮಾಡಿ ಹೊಸದುರ್ಗಕ್ಕೆ ವರ್ಗಾವಣೆ ಮಾಡಲಾಯಿತು. ಆದರೆ ಚಂದ್ರಿಕಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲೇ ಇಲ್ಲ. ಸರ್ಕಾರ ದಲಿತ ಅಧಿಕಾರಿಗಳನ್ನು ಅನಗತ್ಯವಾಗಿ ವರ್ಗಾವಣೆ ಮಾಡುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚಂದ್ರಿಕಾ ಮೇಲೆ ತನಿಖೆಗೆ ಅಧೇಶಿಸಲಾಯಿತು. ಇದಾದ ಕೆಲವೇ ದಿನಗಳಲ್ಲಿ ಚಂದ್ರಿಕಾ ಅವರನ್ನು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರಾಗಿ ಪದೋನ್ನತಿ ನೀಡಿತು. ಹಾಗಾಗಿ ಚಂದ್ರಿಕಾ ಈಗ ಜೆಡಿ.

ಬಿಜೆಪಿ ಕಾರ್ಯಕರ್ತ ದಿಲೀಪ್ ಕುಮಾರ್ ಆರೋಪವನ್ನು ಚಂದ್ರಿಕಾ ಮೇಲೆ ಮಾಡಿದ ಕೂಡಲೇ ವರ್ಗಾವಣೆ ಮಾಡುವುದಾದರೆ ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಮಾಡುವ ಹುನ್ನಾರ ಈ ಆರೋಪದ ಹಿಂದಿತ್ತು ಎಂಬುದು ಈಗ ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾದುಸ್ವಾಮಿ, ಸಂಸದ ಜಿ.ಎಸ್.ಬಸವರಾಜು ಮತ್ತು ಶಾಸಕ ಜ್ಯೋತಿ ಗಣೇಶ್ ಒತ್ತಡ ವರ್ಗಾವಣೆಗೆ ಕಾರಣ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಚಂದ್ರಿಕಾ ಅವರು ಸಾಚಾ ಏನಲ್ಲ. ಆದರೆ ದಲಿತರು ಎಂಬ ಕಾರಣಕ್ಕೆ ಮತ್ತು ತಮ್ಮ ಮಾತನ್ನು ಕೇಳುವ ಅಧಿಕಾರಿಯನ್ನು ಡಿಎಚ್ಒ ಸ್ಥಾನಕ್ಕೆ ಕೂರಿಸಬೇಕಾಗಿತ್ತು. ಆ ಕಾರಣಕ್ಕೆ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಅಧಿಕಾರಿಯಾಗಿ ಕೂರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಸಂಸದ ಬಸವರಾಜು ತಮ್ಮ ಸುಮುದಾಯದ ಅಧಿಕಾರಿಯನ್ನು ಆ ಜಾಗಕ್ಕೆ ತಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಿನ ಡಿಎಚ್ಒ ನಾಗೇಂದ್ರಪ್ಪ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪಂಡ್ ಆಗಿದ್ದವರು. ಅವ್ಯವಹಾರದ ಆರೋಪವೂ ನಾಗೇಂದ್ರಪ್ಪ ಅವರ ಮೇಲಿತ್ತು. ಅಜೆಸ್ಟ್‌ಮೆಂಟ್ ನಡೆದು ಕೇಸು ಖುಲಾಸೆಯಾಗಿದೆ ಎಂದು ಹೇಳಲಾಗುತ್ತಿದೆ.

ಚಂದ್ರಿಕಾ ಡಿಎಚ್ಓ ಆಗಿದ್ದಾಗ ಪ್ರತಿದಿನದ ಕೊರೊನ ಹೆಲ್ತ್ ಬುಲಿಟಿನ್ ಅನ್ನು ಜಿಲ್ಲಾಧಿಕಾರಿ ನೀಡುತ್ತಿದ್ದರು. ನಾಗೇಂದ್ರಪ್ಪ ಡಿಎಚ್ಒ ಆಗಿ ಬಂದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಯೇ ಕೋವಿಡ್-19 ಅಂಕಿ ಅಂಶಗಳನ್ನು ನೀಡುತ್ತಿದ್ದಾರೆ. ಇದು ಒಬ್ಬ ಮಹಿಳಾ ಅಧಿಕಾರಿಯನ್ನು ನಡೆಸಿಕೊಂಡಿರುವ ರೀತಿಯನ್ನು ಎತ್ತಿತೋರಿಸುತ್ತದೆ. ಕೊರೊನ ಕಾಲದಲ್ಲಿ ‘ಹುಲ್ಲುಗಾವಲು’ ಹುಲುಸಾಗಿ ಬೆಳೆದಿದ್ದು, ಅದನ್ನು ಕೊಯ್ದುಕೊಳ್ಳಲು ಭ್ರಷ್ಟರು ಕಾದು ಕುಳಿತಿದ್ದಾರೆ. 

ದಲಿತ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ತಮ್ಮ ಸಮುದಾಯದ ಅಧಿಕಾರಿಗಳನ್ನು ಮುಖ್ಯ ಸ್ಥಾನಗಳಿಗೆ ತರುವ ಹುನ್ನಾರು ನಡೆಯುತ್ತಿದೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಕೂಡ ಜಿಲ್ಲಾ ಉಸ್ತುವಾರಿ ಸಚಿವರ ಸಂಬಂಧಿ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.


ಓದಿ: ಪಿಪಿಇ ಕಿಟ್‌, ಔಷಧಿ ಪೂರೈಕೆ ಆಗುತ್ತಿಲ್ಲ; ರಾಜಕೀಯವಾಡದಿರಿ: ಬಿಜೆಪಿ ವಿರುದ್ದ ಮಹಾ ಸಿಎಂ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...