Homeಕರ್ನಾಟಕಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಗಳು ಎದ್ದಿದೆ.

- Advertisement -
- Advertisement -

ತುಮಕೂರು: ಕೊರೊನ ವಾರಿಯರ್ಸ್ ಗೆ ವೈಯಕ್ತಿಕ ಸುರಕ್ಷಾ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ಆರೋಪದ ಮೇಲೆ ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

ಮೊದಲಿಗೆ ಪಿಪಿಇ ಕಿಟ್‌‌ಗಳ ಟೆಂಡರ್ ರಾಜ್ಯ ಮಟ್ಟದಲ್ಲಾಗಿದೆಯೇ ಅಥವಾ ಜಿಲ್ಲಾ ಮಟ್ಟದಲ್ಲಿ ಆಗಿದೆಯೇ ಸ್ಪಷ್ಟ ಮಾಹಿತಿ ಇಲ್ಲ. ಆರೋಗ್ಯ ಇಲಾಖೆಯ ನಿರ್ದೇಶಕರೇ ಯಾವ್ಯಾವ ಜಿಲ್ಲೆಗಳಿಗೆ ಎಷ್ಟು ಪಿಪಿಇ ಕಿಟ್‌‌ಗಳ ಅಗತ್ಯವಿದೆ ಎಂಬ ಮಾಹಿತಿ ಪಡೆದು ರಾಜ್ಯಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಬಹುದು. ಇಲ್ಲವೇ ಅಧಿಕಾರ ವಿಕೇಂದ್ರೀಕರಣಕ್ಕೆ ಅವಕಾಶ ನೀಡಿದ್ದರೆ, ಜಿಲ್ಲಾ ಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಲು ಅವಕಾಶವಿದೆ.

ಒಂದೊಮ್ಮೆ ಜಿಲ್ಲಾಮಟ್ಟದಲ್ಲಿಯೇ ಪಿಪಿಇ ಕಿಟ್ ಖರೀದಿಗೆ ಟೆಂಟರ್ ಕರೆದಿದ್ದರೆ ಮೇಲಿನವರಿಗೆ ಕಮಿಷನ್ ನೀಡಲೇಬೇಕು ಎಂಬುದು ಆರೋಗ್ಯ ಇಲಾಖೆಯಲ್ಲಿನ ಮೂಲಗಳು ಹೇಳುತ್ತವೆ. ತುಮಕೂರಿನಲ್ಲಿ ಚಂದ್ರಿಕಾ ಅವರು ಜಿಲ್ಲೆಯಲ್ಲೇ ಟೆಂಡರ್ ಕರೆದು ಖರೀದಿಸಿದರೇ ಸ್ಪಷ್ಟವಾಗಿಲ್ಲ. ಆದರೆ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಗುಬ್ಬಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚಂದ್ರಿಕಾ ವಿರುದ್ಧ ಅವ್ಯವಹಾರದ ಆರೋಪ ಮಾಡುತ್ತಾರೆ.

ದಿಲೀಪ್ ಕುಮಾರ್ ಹಿಂದಿನ ಡಿಎಚ್ಒ ಚಂದ್ರಿಕಾ ವಿರುದ್ಧ ಆರೋಪ ಮಾಡುತ್ತಿದ್ದಂತೆಯೇ ಅವರನ್ನು ಡಿಮೋಷನ್ ಮಾಡಿ ಹೊಸದುರ್ಗಕ್ಕೆ ವರ್ಗಾವಣೆ ಮಾಡಲಾಯಿತು. ಆದರೆ ಚಂದ್ರಿಕಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲೇ ಇಲ್ಲ. ಸರ್ಕಾರ ದಲಿತ ಅಧಿಕಾರಿಗಳನ್ನು ಅನಗತ್ಯವಾಗಿ ವರ್ಗಾವಣೆ ಮಾಡುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚಂದ್ರಿಕಾ ಮೇಲೆ ತನಿಖೆಗೆ ಅಧೇಶಿಸಲಾಯಿತು. ಇದಾದ ಕೆಲವೇ ದಿನಗಳಲ್ಲಿ ಚಂದ್ರಿಕಾ ಅವರನ್ನು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರಾಗಿ ಪದೋನ್ನತಿ ನೀಡಿತು. ಹಾಗಾಗಿ ಚಂದ್ರಿಕಾ ಈಗ ಜೆಡಿ.

ಬಿಜೆಪಿ ಕಾರ್ಯಕರ್ತ ದಿಲೀಪ್ ಕುಮಾರ್ ಆರೋಪವನ್ನು ಚಂದ್ರಿಕಾ ಮೇಲೆ ಮಾಡಿದ ಕೂಡಲೇ ವರ್ಗಾವಣೆ ಮಾಡುವುದಾದರೆ ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಮಾಡುವ ಹುನ್ನಾರ ಈ ಆರೋಪದ ಹಿಂದಿತ್ತು ಎಂಬುದು ಈಗ ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾದುಸ್ವಾಮಿ, ಸಂಸದ ಜಿ.ಎಸ್.ಬಸವರಾಜು ಮತ್ತು ಶಾಸಕ ಜ್ಯೋತಿ ಗಣೇಶ್ ಒತ್ತಡ ವರ್ಗಾವಣೆಗೆ ಕಾರಣ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಚಂದ್ರಿಕಾ ಅವರು ಸಾಚಾ ಏನಲ್ಲ. ಆದರೆ ದಲಿತರು ಎಂಬ ಕಾರಣಕ್ಕೆ ಮತ್ತು ತಮ್ಮ ಮಾತನ್ನು ಕೇಳುವ ಅಧಿಕಾರಿಯನ್ನು ಡಿಎಚ್ಒ ಸ್ಥಾನಕ್ಕೆ ಕೂರಿಸಬೇಕಾಗಿತ್ತು. ಆ ಕಾರಣಕ್ಕೆ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಅಧಿಕಾರಿಯಾಗಿ ಕೂರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಸಂಸದ ಬಸವರಾಜು ತಮ್ಮ ಸುಮುದಾಯದ ಅಧಿಕಾರಿಯನ್ನು ಆ ಜಾಗಕ್ಕೆ ತಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಿನ ಡಿಎಚ್ಒ ನಾಗೇಂದ್ರಪ್ಪ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪಂಡ್ ಆಗಿದ್ದವರು. ಅವ್ಯವಹಾರದ ಆರೋಪವೂ ನಾಗೇಂದ್ರಪ್ಪ ಅವರ ಮೇಲಿತ್ತು. ಅಜೆಸ್ಟ್‌ಮೆಂಟ್ ನಡೆದು ಕೇಸು ಖುಲಾಸೆಯಾಗಿದೆ ಎಂದು ಹೇಳಲಾಗುತ್ತಿದೆ.

ಚಂದ್ರಿಕಾ ಡಿಎಚ್ಓ ಆಗಿದ್ದಾಗ ಪ್ರತಿದಿನದ ಕೊರೊನ ಹೆಲ್ತ್ ಬುಲಿಟಿನ್ ಅನ್ನು ಜಿಲ್ಲಾಧಿಕಾರಿ ನೀಡುತ್ತಿದ್ದರು. ನಾಗೇಂದ್ರಪ್ಪ ಡಿಎಚ್ಒ ಆಗಿ ಬಂದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಯೇ ಕೋವಿಡ್-19 ಅಂಕಿ ಅಂಶಗಳನ್ನು ನೀಡುತ್ತಿದ್ದಾರೆ. ಇದು ಒಬ್ಬ ಮಹಿಳಾ ಅಧಿಕಾರಿಯನ್ನು ನಡೆಸಿಕೊಂಡಿರುವ ರೀತಿಯನ್ನು ಎತ್ತಿತೋರಿಸುತ್ತದೆ. ಕೊರೊನ ಕಾಲದಲ್ಲಿ ‘ಹುಲ್ಲುಗಾವಲು’ ಹುಲುಸಾಗಿ ಬೆಳೆದಿದ್ದು, ಅದನ್ನು ಕೊಯ್ದುಕೊಳ್ಳಲು ಭ್ರಷ್ಟರು ಕಾದು ಕುಳಿತಿದ್ದಾರೆ. 

ದಲಿತ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ತಮ್ಮ ಸಮುದಾಯದ ಅಧಿಕಾರಿಗಳನ್ನು ಮುಖ್ಯ ಸ್ಥಾನಗಳಿಗೆ ತರುವ ಹುನ್ನಾರು ನಡೆಯುತ್ತಿದೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಕೂಡ ಜಿಲ್ಲಾ ಉಸ್ತುವಾರಿ ಸಚಿವರ ಸಂಬಂಧಿ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.


ಓದಿ: ಪಿಪಿಇ ಕಿಟ್‌, ಔಷಧಿ ಪೂರೈಕೆ ಆಗುತ್ತಿಲ್ಲ; ರಾಜಕೀಯವಾಡದಿರಿ: ಬಿಜೆಪಿ ವಿರುದ್ದ ಮಹಾ ಸಿಎಂ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...