Homeಕರ್ನಾಟಕಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಗಳು ಎದ್ದಿದೆ.

- Advertisement -
- Advertisement -

ತುಮಕೂರು: ಕೊರೊನ ವಾರಿಯರ್ಸ್ ಗೆ ವೈಯಕ್ತಿಕ ಸುರಕ್ಷಾ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ಆರೋಪದ ಮೇಲೆ ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

ಮೊದಲಿಗೆ ಪಿಪಿಇ ಕಿಟ್‌‌ಗಳ ಟೆಂಡರ್ ರಾಜ್ಯ ಮಟ್ಟದಲ್ಲಾಗಿದೆಯೇ ಅಥವಾ ಜಿಲ್ಲಾ ಮಟ್ಟದಲ್ಲಿ ಆಗಿದೆಯೇ ಸ್ಪಷ್ಟ ಮಾಹಿತಿ ಇಲ್ಲ. ಆರೋಗ್ಯ ಇಲಾಖೆಯ ನಿರ್ದೇಶಕರೇ ಯಾವ್ಯಾವ ಜಿಲ್ಲೆಗಳಿಗೆ ಎಷ್ಟು ಪಿಪಿಇ ಕಿಟ್‌‌ಗಳ ಅಗತ್ಯವಿದೆ ಎಂಬ ಮಾಹಿತಿ ಪಡೆದು ರಾಜ್ಯಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಬಹುದು. ಇಲ್ಲವೇ ಅಧಿಕಾರ ವಿಕೇಂದ್ರೀಕರಣಕ್ಕೆ ಅವಕಾಶ ನೀಡಿದ್ದರೆ, ಜಿಲ್ಲಾ ಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಲು ಅವಕಾಶವಿದೆ.

ಒಂದೊಮ್ಮೆ ಜಿಲ್ಲಾಮಟ್ಟದಲ್ಲಿಯೇ ಪಿಪಿಇ ಕಿಟ್ ಖರೀದಿಗೆ ಟೆಂಟರ್ ಕರೆದಿದ್ದರೆ ಮೇಲಿನವರಿಗೆ ಕಮಿಷನ್ ನೀಡಲೇಬೇಕು ಎಂಬುದು ಆರೋಗ್ಯ ಇಲಾಖೆಯಲ್ಲಿನ ಮೂಲಗಳು ಹೇಳುತ್ತವೆ. ತುಮಕೂರಿನಲ್ಲಿ ಚಂದ್ರಿಕಾ ಅವರು ಜಿಲ್ಲೆಯಲ್ಲೇ ಟೆಂಡರ್ ಕರೆದು ಖರೀದಿಸಿದರೇ ಸ್ಪಷ್ಟವಾಗಿಲ್ಲ. ಆದರೆ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಗುಬ್ಬಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚಂದ್ರಿಕಾ ವಿರುದ್ಧ ಅವ್ಯವಹಾರದ ಆರೋಪ ಮಾಡುತ್ತಾರೆ.

ದಿಲೀಪ್ ಕುಮಾರ್ ಹಿಂದಿನ ಡಿಎಚ್ಒ ಚಂದ್ರಿಕಾ ವಿರುದ್ಧ ಆರೋಪ ಮಾಡುತ್ತಿದ್ದಂತೆಯೇ ಅವರನ್ನು ಡಿಮೋಷನ್ ಮಾಡಿ ಹೊಸದುರ್ಗಕ್ಕೆ ವರ್ಗಾವಣೆ ಮಾಡಲಾಯಿತು. ಆದರೆ ಚಂದ್ರಿಕಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲೇ ಇಲ್ಲ. ಸರ್ಕಾರ ದಲಿತ ಅಧಿಕಾರಿಗಳನ್ನು ಅನಗತ್ಯವಾಗಿ ವರ್ಗಾವಣೆ ಮಾಡುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚಂದ್ರಿಕಾ ಮೇಲೆ ತನಿಖೆಗೆ ಅಧೇಶಿಸಲಾಯಿತು. ಇದಾದ ಕೆಲವೇ ದಿನಗಳಲ್ಲಿ ಚಂದ್ರಿಕಾ ಅವರನ್ನು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರಾಗಿ ಪದೋನ್ನತಿ ನೀಡಿತು. ಹಾಗಾಗಿ ಚಂದ್ರಿಕಾ ಈಗ ಜೆಡಿ.

ಬಿಜೆಪಿ ಕಾರ್ಯಕರ್ತ ದಿಲೀಪ್ ಕುಮಾರ್ ಆರೋಪವನ್ನು ಚಂದ್ರಿಕಾ ಮೇಲೆ ಮಾಡಿದ ಕೂಡಲೇ ವರ್ಗಾವಣೆ ಮಾಡುವುದಾದರೆ ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಮಾಡುವ ಹುನ್ನಾರ ಈ ಆರೋಪದ ಹಿಂದಿತ್ತು ಎಂಬುದು ಈಗ ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾದುಸ್ವಾಮಿ, ಸಂಸದ ಜಿ.ಎಸ್.ಬಸವರಾಜು ಮತ್ತು ಶಾಸಕ ಜ್ಯೋತಿ ಗಣೇಶ್ ಒತ್ತಡ ವರ್ಗಾವಣೆಗೆ ಕಾರಣ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಚಂದ್ರಿಕಾ ಅವರು ಸಾಚಾ ಏನಲ್ಲ. ಆದರೆ ದಲಿತರು ಎಂಬ ಕಾರಣಕ್ಕೆ ಮತ್ತು ತಮ್ಮ ಮಾತನ್ನು ಕೇಳುವ ಅಧಿಕಾರಿಯನ್ನು ಡಿಎಚ್ಒ ಸ್ಥಾನಕ್ಕೆ ಕೂರಿಸಬೇಕಾಗಿತ್ತು. ಆ ಕಾರಣಕ್ಕೆ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಅಧಿಕಾರಿಯಾಗಿ ಕೂರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಸಂಸದ ಬಸವರಾಜು ತಮ್ಮ ಸುಮುದಾಯದ ಅಧಿಕಾರಿಯನ್ನು ಆ ಜಾಗಕ್ಕೆ ತಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಿನ ಡಿಎಚ್ಒ ನಾಗೇಂದ್ರಪ್ಪ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪಂಡ್ ಆಗಿದ್ದವರು. ಅವ್ಯವಹಾರದ ಆರೋಪವೂ ನಾಗೇಂದ್ರಪ್ಪ ಅವರ ಮೇಲಿತ್ತು. ಅಜೆಸ್ಟ್‌ಮೆಂಟ್ ನಡೆದು ಕೇಸು ಖುಲಾಸೆಯಾಗಿದೆ ಎಂದು ಹೇಳಲಾಗುತ್ತಿದೆ.

ಚಂದ್ರಿಕಾ ಡಿಎಚ್ಓ ಆಗಿದ್ದಾಗ ಪ್ರತಿದಿನದ ಕೊರೊನ ಹೆಲ್ತ್ ಬುಲಿಟಿನ್ ಅನ್ನು ಜಿಲ್ಲಾಧಿಕಾರಿ ನೀಡುತ್ತಿದ್ದರು. ನಾಗೇಂದ್ರಪ್ಪ ಡಿಎಚ್ಒ ಆಗಿ ಬಂದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಯೇ ಕೋವಿಡ್-19 ಅಂಕಿ ಅಂಶಗಳನ್ನು ನೀಡುತ್ತಿದ್ದಾರೆ. ಇದು ಒಬ್ಬ ಮಹಿಳಾ ಅಧಿಕಾರಿಯನ್ನು ನಡೆಸಿಕೊಂಡಿರುವ ರೀತಿಯನ್ನು ಎತ್ತಿತೋರಿಸುತ್ತದೆ. ಕೊರೊನ ಕಾಲದಲ್ಲಿ ‘ಹುಲ್ಲುಗಾವಲು’ ಹುಲುಸಾಗಿ ಬೆಳೆದಿದ್ದು, ಅದನ್ನು ಕೊಯ್ದುಕೊಳ್ಳಲು ಭ್ರಷ್ಟರು ಕಾದು ಕುಳಿತಿದ್ದಾರೆ. 

ದಲಿತ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ತಮ್ಮ ಸಮುದಾಯದ ಅಧಿಕಾರಿಗಳನ್ನು ಮುಖ್ಯ ಸ್ಥಾನಗಳಿಗೆ ತರುವ ಹುನ್ನಾರು ನಡೆಯುತ್ತಿದೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಕೂಡ ಜಿಲ್ಲಾ ಉಸ್ತುವಾರಿ ಸಚಿವರ ಸಂಬಂಧಿ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.


ಓದಿ: ಪಿಪಿಇ ಕಿಟ್‌, ಔಷಧಿ ಪೂರೈಕೆ ಆಗುತ್ತಿಲ್ಲ; ರಾಜಕೀಯವಾಡದಿರಿ: ಬಿಜೆಪಿ ವಿರುದ್ದ ಮಹಾ ಸಿಎಂ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....