Homeಕರ್ನಾಟಕಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಗಳು ಎದ್ದಿದೆ.

- Advertisement -
- Advertisement -

ತುಮಕೂರು: ಕೊರೊನ ವಾರಿಯರ್ಸ್ ಗೆ ವೈಯಕ್ತಿಕ ಸುರಕ್ಷಾ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ಆರೋಪದ ಮೇಲೆ ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

ಮೊದಲಿಗೆ ಪಿಪಿಇ ಕಿಟ್‌‌ಗಳ ಟೆಂಡರ್ ರಾಜ್ಯ ಮಟ್ಟದಲ್ಲಾಗಿದೆಯೇ ಅಥವಾ ಜಿಲ್ಲಾ ಮಟ್ಟದಲ್ಲಿ ಆಗಿದೆಯೇ ಸ್ಪಷ್ಟ ಮಾಹಿತಿ ಇಲ್ಲ. ಆರೋಗ್ಯ ಇಲಾಖೆಯ ನಿರ್ದೇಶಕರೇ ಯಾವ್ಯಾವ ಜಿಲ್ಲೆಗಳಿಗೆ ಎಷ್ಟು ಪಿಪಿಇ ಕಿಟ್‌‌ಗಳ ಅಗತ್ಯವಿದೆ ಎಂಬ ಮಾಹಿತಿ ಪಡೆದು ರಾಜ್ಯಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಬಹುದು. ಇಲ್ಲವೇ ಅಧಿಕಾರ ವಿಕೇಂದ್ರೀಕರಣಕ್ಕೆ ಅವಕಾಶ ನೀಡಿದ್ದರೆ, ಜಿಲ್ಲಾ ಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಲು ಅವಕಾಶವಿದೆ.

ಒಂದೊಮ್ಮೆ ಜಿಲ್ಲಾಮಟ್ಟದಲ್ಲಿಯೇ ಪಿಪಿಇ ಕಿಟ್ ಖರೀದಿಗೆ ಟೆಂಟರ್ ಕರೆದಿದ್ದರೆ ಮೇಲಿನವರಿಗೆ ಕಮಿಷನ್ ನೀಡಲೇಬೇಕು ಎಂಬುದು ಆರೋಗ್ಯ ಇಲಾಖೆಯಲ್ಲಿನ ಮೂಲಗಳು ಹೇಳುತ್ತವೆ. ತುಮಕೂರಿನಲ್ಲಿ ಚಂದ್ರಿಕಾ ಅವರು ಜಿಲ್ಲೆಯಲ್ಲೇ ಟೆಂಡರ್ ಕರೆದು ಖರೀದಿಸಿದರೇ ಸ್ಪಷ್ಟವಾಗಿಲ್ಲ. ಆದರೆ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಗುಬ್ಬಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚಂದ್ರಿಕಾ ವಿರುದ್ಧ ಅವ್ಯವಹಾರದ ಆರೋಪ ಮಾಡುತ್ತಾರೆ.

ದಿಲೀಪ್ ಕುಮಾರ್ ಹಿಂದಿನ ಡಿಎಚ್ಒ ಚಂದ್ರಿಕಾ ವಿರುದ್ಧ ಆರೋಪ ಮಾಡುತ್ತಿದ್ದಂತೆಯೇ ಅವರನ್ನು ಡಿಮೋಷನ್ ಮಾಡಿ ಹೊಸದುರ್ಗಕ್ಕೆ ವರ್ಗಾವಣೆ ಮಾಡಲಾಯಿತು. ಆದರೆ ಚಂದ್ರಿಕಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲೇ ಇಲ್ಲ. ಸರ್ಕಾರ ದಲಿತ ಅಧಿಕಾರಿಗಳನ್ನು ಅನಗತ್ಯವಾಗಿ ವರ್ಗಾವಣೆ ಮಾಡುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚಂದ್ರಿಕಾ ಮೇಲೆ ತನಿಖೆಗೆ ಅಧೇಶಿಸಲಾಯಿತು. ಇದಾದ ಕೆಲವೇ ದಿನಗಳಲ್ಲಿ ಚಂದ್ರಿಕಾ ಅವರನ್ನು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರಾಗಿ ಪದೋನ್ನತಿ ನೀಡಿತು. ಹಾಗಾಗಿ ಚಂದ್ರಿಕಾ ಈಗ ಜೆಡಿ.

ಬಿಜೆಪಿ ಕಾರ್ಯಕರ್ತ ದಿಲೀಪ್ ಕುಮಾರ್ ಆರೋಪವನ್ನು ಚಂದ್ರಿಕಾ ಮೇಲೆ ಮಾಡಿದ ಕೂಡಲೇ ವರ್ಗಾವಣೆ ಮಾಡುವುದಾದರೆ ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಮಾಡುವ ಹುನ್ನಾರ ಈ ಆರೋಪದ ಹಿಂದಿತ್ತು ಎಂಬುದು ಈಗ ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾದುಸ್ವಾಮಿ, ಸಂಸದ ಜಿ.ಎಸ್.ಬಸವರಾಜು ಮತ್ತು ಶಾಸಕ ಜ್ಯೋತಿ ಗಣೇಶ್ ಒತ್ತಡ ವರ್ಗಾವಣೆಗೆ ಕಾರಣ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಚಂದ್ರಿಕಾ ಅವರು ಸಾಚಾ ಏನಲ್ಲ. ಆದರೆ ದಲಿತರು ಎಂಬ ಕಾರಣಕ್ಕೆ ಮತ್ತು ತಮ್ಮ ಮಾತನ್ನು ಕೇಳುವ ಅಧಿಕಾರಿಯನ್ನು ಡಿಎಚ್ಒ ಸ್ಥಾನಕ್ಕೆ ಕೂರಿಸಬೇಕಾಗಿತ್ತು. ಆ ಕಾರಣಕ್ಕೆ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಅಧಿಕಾರಿಯಾಗಿ ಕೂರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಸಂಸದ ಬಸವರಾಜು ತಮ್ಮ ಸುಮುದಾಯದ ಅಧಿಕಾರಿಯನ್ನು ಆ ಜಾಗಕ್ಕೆ ತಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಿನ ಡಿಎಚ್ಒ ನಾಗೇಂದ್ರಪ್ಪ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪಂಡ್ ಆಗಿದ್ದವರು. ಅವ್ಯವಹಾರದ ಆರೋಪವೂ ನಾಗೇಂದ್ರಪ್ಪ ಅವರ ಮೇಲಿತ್ತು. ಅಜೆಸ್ಟ್‌ಮೆಂಟ್ ನಡೆದು ಕೇಸು ಖುಲಾಸೆಯಾಗಿದೆ ಎಂದು ಹೇಳಲಾಗುತ್ತಿದೆ.

ಚಂದ್ರಿಕಾ ಡಿಎಚ್ಓ ಆಗಿದ್ದಾಗ ಪ್ರತಿದಿನದ ಕೊರೊನ ಹೆಲ್ತ್ ಬುಲಿಟಿನ್ ಅನ್ನು ಜಿಲ್ಲಾಧಿಕಾರಿ ನೀಡುತ್ತಿದ್ದರು. ನಾಗೇಂದ್ರಪ್ಪ ಡಿಎಚ್ಒ ಆಗಿ ಬಂದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಯೇ ಕೋವಿಡ್-19 ಅಂಕಿ ಅಂಶಗಳನ್ನು ನೀಡುತ್ತಿದ್ದಾರೆ. ಇದು ಒಬ್ಬ ಮಹಿಳಾ ಅಧಿಕಾರಿಯನ್ನು ನಡೆಸಿಕೊಂಡಿರುವ ರೀತಿಯನ್ನು ಎತ್ತಿತೋರಿಸುತ್ತದೆ. ಕೊರೊನ ಕಾಲದಲ್ಲಿ ‘ಹುಲ್ಲುಗಾವಲು’ ಹುಲುಸಾಗಿ ಬೆಳೆದಿದ್ದು, ಅದನ್ನು ಕೊಯ್ದುಕೊಳ್ಳಲು ಭ್ರಷ್ಟರು ಕಾದು ಕುಳಿತಿದ್ದಾರೆ. 

ದಲಿತ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ತಮ್ಮ ಸಮುದಾಯದ ಅಧಿಕಾರಿಗಳನ್ನು ಮುಖ್ಯ ಸ್ಥಾನಗಳಿಗೆ ತರುವ ಹುನ್ನಾರು ನಡೆಯುತ್ತಿದೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಕೂಡ ಜಿಲ್ಲಾ ಉಸ್ತುವಾರಿ ಸಚಿವರ ಸಂಬಂಧಿ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.


ಓದಿ: ಪಿಪಿಇ ಕಿಟ್‌, ಔಷಧಿ ಪೂರೈಕೆ ಆಗುತ್ತಿಲ್ಲ; ರಾಜಕೀಯವಾಡದಿರಿ: ಬಿಜೆಪಿ ವಿರುದ್ದ ಮಹಾ ಸಿಎಂ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...