Homeಕರ್ನಾಟಕಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಗಳು ಎದ್ದಿದೆ.

- Advertisement -
- Advertisement -

ತುಮಕೂರು: ಕೊರೊನ ವಾರಿಯರ್ಸ್ ಗೆ ವೈಯಕ್ತಿಕ ಸುರಕ್ಷಾ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ಆರೋಪದ ಮೇಲೆ ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

ಮೊದಲಿಗೆ ಪಿಪಿಇ ಕಿಟ್‌‌ಗಳ ಟೆಂಡರ್ ರಾಜ್ಯ ಮಟ್ಟದಲ್ಲಾಗಿದೆಯೇ ಅಥವಾ ಜಿಲ್ಲಾ ಮಟ್ಟದಲ್ಲಿ ಆಗಿದೆಯೇ ಸ್ಪಷ್ಟ ಮಾಹಿತಿ ಇಲ್ಲ. ಆರೋಗ್ಯ ಇಲಾಖೆಯ ನಿರ್ದೇಶಕರೇ ಯಾವ್ಯಾವ ಜಿಲ್ಲೆಗಳಿಗೆ ಎಷ್ಟು ಪಿಪಿಇ ಕಿಟ್‌‌ಗಳ ಅಗತ್ಯವಿದೆ ಎಂಬ ಮಾಹಿತಿ ಪಡೆದು ರಾಜ್ಯಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಬಹುದು. ಇಲ್ಲವೇ ಅಧಿಕಾರ ವಿಕೇಂದ್ರೀಕರಣಕ್ಕೆ ಅವಕಾಶ ನೀಡಿದ್ದರೆ, ಜಿಲ್ಲಾ ಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಲು ಅವಕಾಶವಿದೆ.

ಒಂದೊಮ್ಮೆ ಜಿಲ್ಲಾಮಟ್ಟದಲ್ಲಿಯೇ ಪಿಪಿಇ ಕಿಟ್ ಖರೀದಿಗೆ ಟೆಂಟರ್ ಕರೆದಿದ್ದರೆ ಮೇಲಿನವರಿಗೆ ಕಮಿಷನ್ ನೀಡಲೇಬೇಕು ಎಂಬುದು ಆರೋಗ್ಯ ಇಲಾಖೆಯಲ್ಲಿನ ಮೂಲಗಳು ಹೇಳುತ್ತವೆ. ತುಮಕೂರಿನಲ್ಲಿ ಚಂದ್ರಿಕಾ ಅವರು ಜಿಲ್ಲೆಯಲ್ಲೇ ಟೆಂಡರ್ ಕರೆದು ಖರೀದಿಸಿದರೇ ಸ್ಪಷ್ಟವಾಗಿಲ್ಲ. ಆದರೆ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಗುಬ್ಬಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚಂದ್ರಿಕಾ ವಿರುದ್ಧ ಅವ್ಯವಹಾರದ ಆರೋಪ ಮಾಡುತ್ತಾರೆ.

ದಿಲೀಪ್ ಕುಮಾರ್ ಹಿಂದಿನ ಡಿಎಚ್ಒ ಚಂದ್ರಿಕಾ ವಿರುದ್ಧ ಆರೋಪ ಮಾಡುತ್ತಿದ್ದಂತೆಯೇ ಅವರನ್ನು ಡಿಮೋಷನ್ ಮಾಡಿ ಹೊಸದುರ್ಗಕ್ಕೆ ವರ್ಗಾವಣೆ ಮಾಡಲಾಯಿತು. ಆದರೆ ಚಂದ್ರಿಕಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲೇ ಇಲ್ಲ. ಸರ್ಕಾರ ದಲಿತ ಅಧಿಕಾರಿಗಳನ್ನು ಅನಗತ್ಯವಾಗಿ ವರ್ಗಾವಣೆ ಮಾಡುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚಂದ್ರಿಕಾ ಮೇಲೆ ತನಿಖೆಗೆ ಅಧೇಶಿಸಲಾಯಿತು. ಇದಾದ ಕೆಲವೇ ದಿನಗಳಲ್ಲಿ ಚಂದ್ರಿಕಾ ಅವರನ್ನು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರಾಗಿ ಪದೋನ್ನತಿ ನೀಡಿತು. ಹಾಗಾಗಿ ಚಂದ್ರಿಕಾ ಈಗ ಜೆಡಿ.

ಬಿಜೆಪಿ ಕಾರ್ಯಕರ್ತ ದಿಲೀಪ್ ಕುಮಾರ್ ಆರೋಪವನ್ನು ಚಂದ್ರಿಕಾ ಮೇಲೆ ಮಾಡಿದ ಕೂಡಲೇ ವರ್ಗಾವಣೆ ಮಾಡುವುದಾದರೆ ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಮಾಡುವ ಹುನ್ನಾರ ಈ ಆರೋಪದ ಹಿಂದಿತ್ತು ಎಂಬುದು ಈಗ ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾದುಸ್ವಾಮಿ, ಸಂಸದ ಜಿ.ಎಸ್.ಬಸವರಾಜು ಮತ್ತು ಶಾಸಕ ಜ್ಯೋತಿ ಗಣೇಶ್ ಒತ್ತಡ ವರ್ಗಾವಣೆಗೆ ಕಾರಣ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಚಂದ್ರಿಕಾ ಅವರು ಸಾಚಾ ಏನಲ್ಲ. ಆದರೆ ದಲಿತರು ಎಂಬ ಕಾರಣಕ್ಕೆ ಮತ್ತು ತಮ್ಮ ಮಾತನ್ನು ಕೇಳುವ ಅಧಿಕಾರಿಯನ್ನು ಡಿಎಚ್ಒ ಸ್ಥಾನಕ್ಕೆ ಕೂರಿಸಬೇಕಾಗಿತ್ತು. ಆ ಕಾರಣಕ್ಕೆ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಅಧಿಕಾರಿಯಾಗಿ ಕೂರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಸಂಸದ ಬಸವರಾಜು ತಮ್ಮ ಸುಮುದಾಯದ ಅಧಿಕಾರಿಯನ್ನು ಆ ಜಾಗಕ್ಕೆ ತಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಿನ ಡಿಎಚ್ಒ ನಾಗೇಂದ್ರಪ್ಪ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪಂಡ್ ಆಗಿದ್ದವರು. ಅವ್ಯವಹಾರದ ಆರೋಪವೂ ನಾಗೇಂದ್ರಪ್ಪ ಅವರ ಮೇಲಿತ್ತು. ಅಜೆಸ್ಟ್‌ಮೆಂಟ್ ನಡೆದು ಕೇಸು ಖುಲಾಸೆಯಾಗಿದೆ ಎಂದು ಹೇಳಲಾಗುತ್ತಿದೆ.

ಚಂದ್ರಿಕಾ ಡಿಎಚ್ಓ ಆಗಿದ್ದಾಗ ಪ್ರತಿದಿನದ ಕೊರೊನ ಹೆಲ್ತ್ ಬುಲಿಟಿನ್ ಅನ್ನು ಜಿಲ್ಲಾಧಿಕಾರಿ ನೀಡುತ್ತಿದ್ದರು. ನಾಗೇಂದ್ರಪ್ಪ ಡಿಎಚ್ಒ ಆಗಿ ಬಂದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಯೇ ಕೋವಿಡ್-19 ಅಂಕಿ ಅಂಶಗಳನ್ನು ನೀಡುತ್ತಿದ್ದಾರೆ. ಇದು ಒಬ್ಬ ಮಹಿಳಾ ಅಧಿಕಾರಿಯನ್ನು ನಡೆಸಿಕೊಂಡಿರುವ ರೀತಿಯನ್ನು ಎತ್ತಿತೋರಿಸುತ್ತದೆ. ಕೊರೊನ ಕಾಲದಲ್ಲಿ ‘ಹುಲ್ಲುಗಾವಲು’ ಹುಲುಸಾಗಿ ಬೆಳೆದಿದ್ದು, ಅದನ್ನು ಕೊಯ್ದುಕೊಳ್ಳಲು ಭ್ರಷ್ಟರು ಕಾದು ಕುಳಿತಿದ್ದಾರೆ. 

ದಲಿತ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ತಮ್ಮ ಸಮುದಾಯದ ಅಧಿಕಾರಿಗಳನ್ನು ಮುಖ್ಯ ಸ್ಥಾನಗಳಿಗೆ ತರುವ ಹುನ್ನಾರು ನಡೆಯುತ್ತಿದೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಕೂಡ ಜಿಲ್ಲಾ ಉಸ್ತುವಾರಿ ಸಚಿವರ ಸಂಬಂಧಿ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.


ಓದಿ: ಪಿಪಿಇ ಕಿಟ್‌, ಔಷಧಿ ಪೂರೈಕೆ ಆಗುತ್ತಿಲ್ಲ; ರಾಜಕೀಯವಾಡದಿರಿ: ಬಿಜೆಪಿ ವಿರುದ್ದ ಮಹಾ ಸಿಎಂ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...