Homeಕರ್ನಾಟಕಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಕೊರೊನ ಹುಲ್ಲುಗಾವಲು: ಸಸ್ಪೆಂಡ್ ಆಗಿದ್ದ ನಾಗೇಂದ್ರಪ್ಪನನ್ನು ಡಿಎಚ್ಓ ಸ್ಥಾನಕ್ಕೆ ಕೂರಿಸಿದ್ದೇಕೆ?

ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಗಳು ಎದ್ದಿದೆ.

- Advertisement -
- Advertisement -

ತುಮಕೂರು: ಕೊರೊನ ವಾರಿಯರ್ಸ್ ಗೆ ವೈಯಕ್ತಿಕ ಸುರಕ್ಷಾ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ಆರೋಪದ ಮೇಲೆ ಇಲ್ಲಿನ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಿಕಾ ವರ್ಗಾವಣೆ ಹಿಂದೆ ಕಮೀಷನ್ ದಂಧೆ ಕೆಲಸ ಮಾಡಿದೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬರತೊಡಗಿವೆ. ಚಂದ್ರಿಕಾ ಅವರ ಜಾಗಕ್ಕೆ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪೆಂಡ್ ಆಗಿದ್ದ ಡಾ.ನಾಗೇಂದ್ರಪ್ಪ ಅವರನ್ನು ಡಿಎಚ್ಒ ಸ್ಥಾನಕ್ಕೆ ತಂದು ಕೂರಿಸಿದ್ದೇಕೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ.

ಮೊದಲಿಗೆ ಪಿಪಿಇ ಕಿಟ್‌‌ಗಳ ಟೆಂಡರ್ ರಾಜ್ಯ ಮಟ್ಟದಲ್ಲಾಗಿದೆಯೇ ಅಥವಾ ಜಿಲ್ಲಾ ಮಟ್ಟದಲ್ಲಿ ಆಗಿದೆಯೇ ಸ್ಪಷ್ಟ ಮಾಹಿತಿ ಇಲ್ಲ. ಆರೋಗ್ಯ ಇಲಾಖೆಯ ನಿರ್ದೇಶಕರೇ ಯಾವ್ಯಾವ ಜಿಲ್ಲೆಗಳಿಗೆ ಎಷ್ಟು ಪಿಪಿಇ ಕಿಟ್‌‌ಗಳ ಅಗತ್ಯವಿದೆ ಎಂಬ ಮಾಹಿತಿ ಪಡೆದು ರಾಜ್ಯಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಬಹುದು. ಇಲ್ಲವೇ ಅಧಿಕಾರ ವಿಕೇಂದ್ರೀಕರಣಕ್ಕೆ ಅವಕಾಶ ನೀಡಿದ್ದರೆ, ಜಿಲ್ಲಾ ಮಟ್ಟದಲ್ಲಿಯೇ ಟೆಂಡರ್ ಕರೆದು ಖರೀದಿ ಮಾಡಲು ಅವಕಾಶವಿದೆ.

ಒಂದೊಮ್ಮೆ ಜಿಲ್ಲಾಮಟ್ಟದಲ್ಲಿಯೇ ಪಿಪಿಇ ಕಿಟ್ ಖರೀದಿಗೆ ಟೆಂಟರ್ ಕರೆದಿದ್ದರೆ ಮೇಲಿನವರಿಗೆ ಕಮಿಷನ್ ನೀಡಲೇಬೇಕು ಎಂಬುದು ಆರೋಗ್ಯ ಇಲಾಖೆಯಲ್ಲಿನ ಮೂಲಗಳು ಹೇಳುತ್ತವೆ. ತುಮಕೂರಿನಲ್ಲಿ ಚಂದ್ರಿಕಾ ಅವರು ಜಿಲ್ಲೆಯಲ್ಲೇ ಟೆಂಡರ್ ಕರೆದು ಖರೀದಿಸಿದರೇ ಸ್ಪಷ್ಟವಾಗಿಲ್ಲ. ಆದರೆ ಬಿಜೆಪಿ ಸರ್ಕಾರವೇ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡ ದಿಲೀಪ್ ಕುಮಾರ್ ಗುಬ್ಬಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚಂದ್ರಿಕಾ ವಿರುದ್ಧ ಅವ್ಯವಹಾರದ ಆರೋಪ ಮಾಡುತ್ತಾರೆ.

ದಿಲೀಪ್ ಕುಮಾರ್ ಹಿಂದಿನ ಡಿಎಚ್ಒ ಚಂದ್ರಿಕಾ ವಿರುದ್ಧ ಆರೋಪ ಮಾಡುತ್ತಿದ್ದಂತೆಯೇ ಅವರನ್ನು ಡಿಮೋಷನ್ ಮಾಡಿ ಹೊಸದುರ್ಗಕ್ಕೆ ವರ್ಗಾವಣೆ ಮಾಡಲಾಯಿತು. ಆದರೆ ಚಂದ್ರಿಕಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲೇ ಇಲ್ಲ. ಸರ್ಕಾರ ದಲಿತ ಅಧಿಕಾರಿಗಳನ್ನು ಅನಗತ್ಯವಾಗಿ ವರ್ಗಾವಣೆ ಮಾಡುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚಂದ್ರಿಕಾ ಮೇಲೆ ತನಿಖೆಗೆ ಅಧೇಶಿಸಲಾಯಿತು. ಇದಾದ ಕೆಲವೇ ದಿನಗಳಲ್ಲಿ ಚಂದ್ರಿಕಾ ಅವರನ್ನು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರಾಗಿ ಪದೋನ್ನತಿ ನೀಡಿತು. ಹಾಗಾಗಿ ಚಂದ್ರಿಕಾ ಈಗ ಜೆಡಿ.

ಬಿಜೆಪಿ ಕಾರ್ಯಕರ್ತ ದಿಲೀಪ್ ಕುಮಾರ್ ಆರೋಪವನ್ನು ಚಂದ್ರಿಕಾ ಮೇಲೆ ಮಾಡಿದ ಕೂಡಲೇ ವರ್ಗಾವಣೆ ಮಾಡುವುದಾದರೆ ಆ ಜಾಗಕ್ಕೆ ಲಿಂಗಾಯತ ಸಮುದಾಯದ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಮಾಡುವ ಹುನ್ನಾರ ಈ ಆರೋಪದ ಹಿಂದಿತ್ತು ಎಂಬುದು ಈಗ ಬೆಳಕಿಗೆ ಬಂದಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾದುಸ್ವಾಮಿ, ಸಂಸದ ಜಿ.ಎಸ್.ಬಸವರಾಜು ಮತ್ತು ಶಾಸಕ ಜ್ಯೋತಿ ಗಣೇಶ್ ಒತ್ತಡ ವರ್ಗಾವಣೆಗೆ ಕಾರಣ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.

ಚಂದ್ರಿಕಾ ಅವರು ಸಾಚಾ ಏನಲ್ಲ. ಆದರೆ ದಲಿತರು ಎಂಬ ಕಾರಣಕ್ಕೆ ಮತ್ತು ತಮ್ಮ ಮಾತನ್ನು ಕೇಳುವ ಅಧಿಕಾರಿಯನ್ನು ಡಿಎಚ್ಒ ಸ್ಥಾನಕ್ಕೆ ಕೂರಿಸಬೇಕಾಗಿತ್ತು. ಆ ಕಾರಣಕ್ಕೆ ನಾಗೇಂದ್ರಪ್ಪ ಅವರನ್ನು ಡಿಎಚ್ಒ ಅಧಿಕಾರಿಯಾಗಿ ಕೂರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಸಂಸದ ಬಸವರಾಜು ತಮ್ಮ ಸುಮುದಾಯದ ಅಧಿಕಾರಿಯನ್ನು ಆ ಜಾಗಕ್ಕೆ ತಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಿನ ಡಿಎಚ್ಒ ನಾಗೇಂದ್ರಪ್ಪ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಸಸ್ಪಂಡ್ ಆಗಿದ್ದವರು. ಅವ್ಯವಹಾರದ ಆರೋಪವೂ ನಾಗೇಂದ್ರಪ್ಪ ಅವರ ಮೇಲಿತ್ತು. ಅಜೆಸ್ಟ್‌ಮೆಂಟ್ ನಡೆದು ಕೇಸು ಖುಲಾಸೆಯಾಗಿದೆ ಎಂದು ಹೇಳಲಾಗುತ್ತಿದೆ.

ಚಂದ್ರಿಕಾ ಡಿಎಚ್ಓ ಆಗಿದ್ದಾಗ ಪ್ರತಿದಿನದ ಕೊರೊನ ಹೆಲ್ತ್ ಬುಲಿಟಿನ್ ಅನ್ನು ಜಿಲ್ಲಾಧಿಕಾರಿ ನೀಡುತ್ತಿದ್ದರು. ನಾಗೇಂದ್ರಪ್ಪ ಡಿಎಚ್ಒ ಆಗಿ ಬಂದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಯೇ ಕೋವಿಡ್-19 ಅಂಕಿ ಅಂಶಗಳನ್ನು ನೀಡುತ್ತಿದ್ದಾರೆ. ಇದು ಒಬ್ಬ ಮಹಿಳಾ ಅಧಿಕಾರಿಯನ್ನು ನಡೆಸಿಕೊಂಡಿರುವ ರೀತಿಯನ್ನು ಎತ್ತಿತೋರಿಸುತ್ತದೆ. ಕೊರೊನ ಕಾಲದಲ್ಲಿ ‘ಹುಲ್ಲುಗಾವಲು’ ಹುಲುಸಾಗಿ ಬೆಳೆದಿದ್ದು, ಅದನ್ನು ಕೊಯ್ದುಕೊಳ್ಳಲು ಭ್ರಷ್ಟರು ಕಾದು ಕುಳಿತಿದ್ದಾರೆ. 

ದಲಿತ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ತಮ್ಮ ಸಮುದಾಯದ ಅಧಿಕಾರಿಗಳನ್ನು ಮುಖ್ಯ ಸ್ಥಾನಗಳಿಗೆ ತರುವ ಹುನ್ನಾರು ನಡೆಯುತ್ತಿದೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಕೂಡ ಜಿಲ್ಲಾ ಉಸ್ತುವಾರಿ ಸಚಿವರ ಸಂಬಂಧಿ ಎಂದು ದಲಿತ ಮುಖಂಡರು ಆರೋಪಿಸಿದ್ದಾರೆ.


ಓದಿ: ಪಿಪಿಇ ಕಿಟ್‌, ಔಷಧಿ ಪೂರೈಕೆ ಆಗುತ್ತಿಲ್ಲ; ರಾಜಕೀಯವಾಡದಿರಿ: ಬಿಜೆಪಿ ವಿರುದ್ದ ಮಹಾ ಸಿಎಂ ಕಿಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...