Homeಕರೋನಾ ತಲ್ಲಣಭಾರತದಲ್ಲಿ ಕೊರೊನಾ: ಸೋಂಕಿತರ ಚೇತರಿಕೆಯ ಪ್ರಮಾಣ ಏರಿಕೆ

ಭಾರತದಲ್ಲಿ ಕೊರೊನಾ: ಸೋಂಕಿತರ ಚೇತರಿಕೆಯ ಪ್ರಮಾಣ ಏರಿಕೆ

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಈಗ 20.88 ಲಕ್ಷಕ್ಕಿಂತ ಹೆಚ್ಚಿದ್ದರೆ, ಇವುಗಳಲ್ಲಿ ಕೇವಲ 6.19 ಲಕ್ಷ ಮಾತ್ರ ಸಕ್ರಿಯ ಪ್ರಕರಣಗಳಿವೆ. ಉಳಿದವರು ಚೇತರಿಸಿಕೊಂಡಿದ್ದರೆ, ಶೇಕಡಾ 2 ರಷ್ಟು ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ.

- Advertisement -
- Advertisement -

ಕಳೆದ ಎರಡು ವಾರಗಳಿಂದ ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಚೇತರಿಕೆಯ ಪ್ರಮಾಣ ತ್ವರಿತಗತಿಯಲ್ಲಿ ಏರಿಕೆಯಾಗುತ್ತಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಈಗ 20.88 ಲಕ್ಷಕ್ಕಿಂತ ಹೆಚ್ಚಿದ್ದರೆ, ಇವುಗಳಲ್ಲಿ ಕೇವಲ 6.19 ಲಕ್ಷ ಮಾತ್ರ ಸಕ್ರಿಯ ಪ್ರಕರಣಗಳಿವೆ. 14,27,005 ಜನರು ಚೇತರಿಸಿಕೊಂಡಿದ್ದರೆ, 42,518  ಜನರು ಸಾವನ್ನಪ್ಪಿದ್ದಾರೆ.

ಹೊಸ ಸೋಂಕುಗಳು ಸ್ಥಿರ ವೇಗದಲ್ಲಿ ಏರುತ್ತಿದ್ದರೆ, ಒಟ್ಟು ಸೋಂಕಿತ ಪ್ರಕರಣಗಳ ಬೆಳವಣಿಗೆಯು ಕಳೆದ ಹತ್ತು ದಿನಗಳಿಂದ ಕುಸಿಯುತ್ತಿದೆ. ಮತ್ತು ಸಕ್ರಿಯ ಪ್ರಕರಣಗಳ ಬೆಳವಣಿಗೆ ಇನ್ನೂ ವೇಗವಾಗಿ ಕುಸಿಯುತ್ತಿದೆ.

ದಿನಕ್ಕೆ ಶೇಕಡಾ 3.03 ರಂತೆ, ಒಟ್ಟು ದೃಢಪಡಿಸಿದ ಪ್ರಕರಣಗಳ ಪ್ರಸ್ತುತ ಬೆಳವಣಿಗೆಯ ಪ್ರಮಾಣವು ಈಗಾಗಲೇ ಸಾರ್ವಕಾಲಿಕ ಕನಿಷ್ಠ ಮಟ್ಟದಲ್ಲಿದೆ. ಸಕ್ರಿಯ ಪ್ರಕರಣಗಳ ಬೆಳವಣಿಗೆಯ ದರವು ಶೇಕಡಾ 1.31 ಕ್ಕೆ ಇಳಿದಿದೆ.

ಈಗ ದೃಢಪಡಿಸಿದ ಎಲ್ಲಾ ಪ್ರಕರಣಗಳಲ್ಲಿ ಚೇತರಿಕೆಯ ಪ್ರಮಾಣ ಶೇಕಡಾ 68.32 ರಷ್ಟಿದ್ದರೆ, 2.04 ರಷ್ಟು ಸೋಂಕಿತ ಜನರು ಸಾವನ್ನಪ್ಪಿದ್ದಾರೆ.

ಸಾಂಕ್ರಾಮಿಕ ರೋಗವು ಹೆಚ್ಚಾದಂತೆ, ಒಟ್ಟು ದೃಢಪಡಿಸಿದ ಪ್ರಕರಣಗಳ ಅನುಪಾತವಾಗಿ ಸಕ್ರಿಯ ಪ್ರಕರಣಗಳು ಕ್ರಮೇಣ ಕುಸಿಯುತ್ತವೆ. ಸಾಂಕ್ರಾಮಿಕ ರೋಗವು ಕೊನೆಗೊಳ್ಳುವ ಹೊತ್ತಿಗೆ ಅದು ಶೂನ್ಯಕ್ಕೆ ತಲುಪುತ್ತದೆ ಎನ್ನಲಾಗಿದೆ.

ಹೆಚ್ಚು ಜನರು ಚೇತರಿಸಿಕೊಂಡಿರುವುದರಿಂದ ಆರೋಗ್ಯ ಮೂಲಸೌಕರ್ಯ ಮತ್ತು ವೈದ್ಯಕೀಯ ವೃತ್ತಿಪರರ ಮೇಲೆ ಹೊರೆ ಕಡಿಮೆಯಾಗುತ್ತದೆ. ಅಲ್ಲದೆ, ಸಕ್ರಿಯ ರೋಗಿಗಳು ಮಾತ್ರ ರೋಗವನ್ನು ಇತರರಿಗೆ ಹರಡುವುದರಿಂದ ಸೋಂಕಿನ ಪ್ರಮಾಣವು ಕಡಿಮೆಯಾಗಲಿದೆ ಎಂಬ ನಿರೀಕ್ಷೆಯಿದೆ.

ಶುಕ್ರವಾರ ಸತತ ಎರಡನೇ ದಿನ ಭಾರತ 60,000 ಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನು ದಾಖಲಿಸಿದೆ. ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ತಲಾ 10,000 ಪ್ರಕರಣಗಳನ್ನು ವರದಿ ಮಾಡಿದರೆ, ತಮಿಳುನಾಡು ಮತ್ತು ಕರ್ನಾಟಕ ತಲಾ 6,000 ಪ್ರಕರಣಗಳನ್ನು ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...