Homeಕರೋನಾ ತಲ್ಲಣಭಾರತದಲ್ಲಿ ಕೊರೊನಾ: ಸೋಂಕಿತರ ಚೇತರಿಕೆಯ ಪ್ರಮಾಣ ಏರಿಕೆ

ಭಾರತದಲ್ಲಿ ಕೊರೊನಾ: ಸೋಂಕಿತರ ಚೇತರಿಕೆಯ ಪ್ರಮಾಣ ಏರಿಕೆ

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಈಗ 20.88 ಲಕ್ಷಕ್ಕಿಂತ ಹೆಚ್ಚಿದ್ದರೆ, ಇವುಗಳಲ್ಲಿ ಕೇವಲ 6.19 ಲಕ್ಷ ಮಾತ್ರ ಸಕ್ರಿಯ ಪ್ರಕರಣಗಳಿವೆ. ಉಳಿದವರು ಚೇತರಿಸಿಕೊಂಡಿದ್ದರೆ, ಶೇಕಡಾ 2 ರಷ್ಟು ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ.

- Advertisement -
- Advertisement -

ಕಳೆದ ಎರಡು ವಾರಗಳಿಂದ ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಚೇತರಿಕೆಯ ಪ್ರಮಾಣ ತ್ವರಿತಗತಿಯಲ್ಲಿ ಏರಿಕೆಯಾಗುತ್ತಿದೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಈಗ 20.88 ಲಕ್ಷಕ್ಕಿಂತ ಹೆಚ್ಚಿದ್ದರೆ, ಇವುಗಳಲ್ಲಿ ಕೇವಲ 6.19 ಲಕ್ಷ ಮಾತ್ರ ಸಕ್ರಿಯ ಪ್ರಕರಣಗಳಿವೆ. 14,27,005 ಜನರು ಚೇತರಿಸಿಕೊಂಡಿದ್ದರೆ, 42,518  ಜನರು ಸಾವನ್ನಪ್ಪಿದ್ದಾರೆ.

ಹೊಸ ಸೋಂಕುಗಳು ಸ್ಥಿರ ವೇಗದಲ್ಲಿ ಏರುತ್ತಿದ್ದರೆ, ಒಟ್ಟು ಸೋಂಕಿತ ಪ್ರಕರಣಗಳ ಬೆಳವಣಿಗೆಯು ಕಳೆದ ಹತ್ತು ದಿನಗಳಿಂದ ಕುಸಿಯುತ್ತಿದೆ. ಮತ್ತು ಸಕ್ರಿಯ ಪ್ರಕರಣಗಳ ಬೆಳವಣಿಗೆ ಇನ್ನೂ ವೇಗವಾಗಿ ಕುಸಿಯುತ್ತಿದೆ.

ದಿನಕ್ಕೆ ಶೇಕಡಾ 3.03 ರಂತೆ, ಒಟ್ಟು ದೃಢಪಡಿಸಿದ ಪ್ರಕರಣಗಳ ಪ್ರಸ್ತುತ ಬೆಳವಣಿಗೆಯ ಪ್ರಮಾಣವು ಈಗಾಗಲೇ ಸಾರ್ವಕಾಲಿಕ ಕನಿಷ್ಠ ಮಟ್ಟದಲ್ಲಿದೆ. ಸಕ್ರಿಯ ಪ್ರಕರಣಗಳ ಬೆಳವಣಿಗೆಯ ದರವು ಶೇಕಡಾ 1.31 ಕ್ಕೆ ಇಳಿದಿದೆ.

ಈಗ ದೃಢಪಡಿಸಿದ ಎಲ್ಲಾ ಪ್ರಕರಣಗಳಲ್ಲಿ ಚೇತರಿಕೆಯ ಪ್ರಮಾಣ ಶೇಕಡಾ 68.32 ರಷ್ಟಿದ್ದರೆ, 2.04 ರಷ್ಟು ಸೋಂಕಿತ ಜನರು ಸಾವನ್ನಪ್ಪಿದ್ದಾರೆ.

ಸಾಂಕ್ರಾಮಿಕ ರೋಗವು ಹೆಚ್ಚಾದಂತೆ, ಒಟ್ಟು ದೃಢಪಡಿಸಿದ ಪ್ರಕರಣಗಳ ಅನುಪಾತವಾಗಿ ಸಕ್ರಿಯ ಪ್ರಕರಣಗಳು ಕ್ರಮೇಣ ಕುಸಿಯುತ್ತವೆ. ಸಾಂಕ್ರಾಮಿಕ ರೋಗವು ಕೊನೆಗೊಳ್ಳುವ ಹೊತ್ತಿಗೆ ಅದು ಶೂನ್ಯಕ್ಕೆ ತಲುಪುತ್ತದೆ ಎನ್ನಲಾಗಿದೆ.

ಹೆಚ್ಚು ಜನರು ಚೇತರಿಸಿಕೊಂಡಿರುವುದರಿಂದ ಆರೋಗ್ಯ ಮೂಲಸೌಕರ್ಯ ಮತ್ತು ವೈದ್ಯಕೀಯ ವೃತ್ತಿಪರರ ಮೇಲೆ ಹೊರೆ ಕಡಿಮೆಯಾಗುತ್ತದೆ. ಅಲ್ಲದೆ, ಸಕ್ರಿಯ ರೋಗಿಗಳು ಮಾತ್ರ ರೋಗವನ್ನು ಇತರರಿಗೆ ಹರಡುವುದರಿಂದ ಸೋಂಕಿನ ಪ್ರಮಾಣವು ಕಡಿಮೆಯಾಗಲಿದೆ ಎಂಬ ನಿರೀಕ್ಷೆಯಿದೆ.

ಶುಕ್ರವಾರ ಸತತ ಎರಡನೇ ದಿನ ಭಾರತ 60,000 ಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನು ದಾಖಲಿಸಿದೆ. ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ತಲಾ 10,000 ಪ್ರಕರಣಗಳನ್ನು ವರದಿ ಮಾಡಿದರೆ, ತಮಿಳುನಾಡು ಮತ್ತು ಕರ್ನಾಟಕ ತಲಾ 6,000 ಪ್ರಕರಣಗಳನ್ನು ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...