Homeಕರೋನಾ ತಲ್ಲಣಕೊರೊನಾ: ಕಳೆದ 2 ತಿಂಗಳಿನಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲಿಸಿದ ಭಾರತ!

ಕೊರೊನಾ: ಕಳೆದ 2 ತಿಂಗಳಿನಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲಿಸಿದ ಭಾರತ!

ಪ್ರಸ್ತುತ ಅಮೇರಿಕಾದಲ್ಲಿ 78 ಲಕ್ಷ ಪ್ರಕರಣಗಳಿದ್ದು, 2 ಲಕ್ಷ ಸಾವುಗಳು ದಾಖಲಾಗಿವೆ. ಅಮೇರಿಕಾವನ್ನು ಹಿಂದಿಕ್ಕಿ, ಭಾರತ ಮೊದಲ ಸ್ಥಾನಕ್ಕೇರಲು ಕೇವಲ 6 ಲಕ್ಷ ಪ್ರಕರಣಗಳಷ್ಟೆ ಬಾಕಿಯಿವೆ.

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ 55,342 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕಳೆದ ಎರಡು ತಿಂಗಳಿನಲ್ಲಿಯೇ ಅತ್ಯಂತ ಕಡಿಮೆ ಪ್ರಕರಣಗಳು ನಿನ್ನೆ ದಾಖಲಾಗಿದೆ.

ಹಲವು ದಿನಗಳಿಂದ ಭಾರತದ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಕುಸಿಯುತ್ತಿದೆ ಎಂದು ಆರೋಗ್ಯ ಸಚಿವಾಲಯ ಇಂದು ಬೆಳಿಗಿನ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸ್ತುತ ಭಾರತದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 71.75 ಲಕ್ಷಕ್ಕೆ ತಲುಪಿದೆ.

ಇದನ್ನೂ ಓದಿ: 6 ಕೊರೊನಾ ಪ್ರಕರಣ ಪತ್ತೆ: ಇಡೀ ನಗರವನ್ನೇ ಪರೀಕ್ಷಿಸುತ್ತಿರುವ ಚೀನಾ ಆಡಳಿತ!

ದೇಶದಲ್ಲಿ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಈ ಹಿಂದೆ ಸರಾಸರಿ 90,000 ದಾಖಲಾಗುತ್ತಿತ್ತು. ಈಗ ಇದು ಸರಾಸರಿ 72,000 ರಿಂದ 74,000 ಕ್ಕೆ ಇಳಿದಿದೆ.

24 ಗಂಟೆಗಳಲ್ಲಿ, 77,760 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಕೊರೊನಾ ವೈರಸ್ ಪ್ರಕರಣಗಳು 8.38 ಲಕ್ಷಕ್ಕೆ ಇಳಿದಿದೆ. ಇದು ಭಾರತದ ಚೇತರಿಕೆ ಪ್ರಮಾಣವನ್ನು ಶೇಕಡಾ 86.8 ಕ್ಕೆ ಹೆಚ್ಚಿಸಿದೆ. ಇದುವರೆಗೂ ಸುಮಾರು 62.2 ಲಕ್ಷ ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ಇದುವರೆಗೂ ಸೋಂಕಿನಿಂದ ಸಂಭವಿಸಿದ ಒಟ್ಟು ಸಾವುಗಳ ಸಂಖ್ಯೆ 1,09,856 ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 706 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಆಗಸ್ಟ್ ಆರಂಭದಿಂದ ದಿನಕ್ಕೆ 800 ರಿಂದ 900 ಸಾವುಗಳು ವರದಿಯಾಗುತ್ತಿದ್ದು, ಸಾವಿನ ಪ್ರಮಾಣ ಶೇಕಡಾ 1.5 ರಷ್ಟು ಇದೆ.

ಸರ್ಕಾರವು ಸೋಮವಾರ ಒಂದೇ ದಿನ 10.7 ಲಕ್ಷ ಜನರನ್ನು ಪರೀಕ್ಷಿಸಿದ್ದರಿಂದ ಭಾರತದಲ್ಲಿ ದೈನಂದಿನ ಸೋಂಕಿತರ ದರವು ಶೇಕಡಾ 5.2 ರಷ್ಟಿದೆ. ಈವರೆಗೆ ಒಟ್ಟು 8.8 ಕೋಟಿ ಪರೀಕ್ಷೆಗಳನ್ನು ಮಾಡಲಾಗಿದೆ.

ಇದನ್ನೂ ಓದಿ: ಇನ್ನೂ ಹೆಚ್ಚಿನ ಕೊರೊನಾ ಪರಿಹಾರ ಸಾಧ್ಯವಿಲ್ಲ: ಸುಪ್ರೀಂ‌ಗೆ ಕೇಂದ್ರ ಸರ್ಕಾರ

ಗರಿಷ್ಠ ದೈನಂದಿನ ಕೊರೊನಾ ವೈರಸ್ ಪ್ರಕರಣಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ಮೊದಲ ಸ್ಥಾನದಲ್ಲಿದೆ. ಈ ರಾಜ್ಯಗಳು ದೇಶದ ಎಲ್ಲಾ ಪ್ರಕರಣಗಳಲ್ಲಿ ಶೇಕಡಾ 52.5 ರಷ್ಟನ್ನು ಹೊಂದಿದೆ.

ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶಗಳಲ್ಲಿ ಗರಿಷ್ಠ ಸಾವುಗಳು ಸಂಭವಿಸಿವೆ. ಈ ರಾಜ್ಯಗಳು ಒಟ್ಟು ಸಾವುಗಳಲ್ಲಿ ಶೇಕಡಾ 57 ರಷ್ಟನ್ನು ಹೊಂದಿದೆ.

ಇದನ್ನೂ ಓದಿ: ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಭಾರತ, ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳನ್ನು ಹೊಂದಿರುವ ದೇಶಗಳ ಪೈಕಿ ಅಮೇರಿಕಾದ ನಂತರದ ಎರಡನೇ ಸ್ಥಾನದಲ್ಲಿದೆ. ಪ್ರಸ್ತುತ ಅಮೇರಿಕಾದಲ್ಲಿ 78 ಲಕ್ಷ ಪ್ರಕರಣಗಳಿದ್ದು, 2 ಲಕ್ಷ ಸಾವುಗಳು ದಾಖಲಾಗಿವೆ. ಅಮೇರಿಕಾವನ್ನು ಹಿಂದಿಕ್ಕಿ, ಭಾರತ ಮೊದಲ ಸ್ಥಾನಕ್ಕೇರಲು ಕೇವಲ 6 ಲಕ್ಷ ಪ್ರಕರಣಗಳಷ್ಟೆ ಬಾಕಿಯಿವೆ.


ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...