Homeಕರೋನಾ ತಲ್ಲಣಕೊರೊನಾ: ಕಳೆದ 2 ತಿಂಗಳಿನಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲಿಸಿದ ಭಾರತ!

ಕೊರೊನಾ: ಕಳೆದ 2 ತಿಂಗಳಿನಲ್ಲಿ ಅತ್ಯಂತ ಕಡಿಮೆ ಪ್ರಕರಣ ದಾಖಲಿಸಿದ ಭಾರತ!

ಪ್ರಸ್ತುತ ಅಮೇರಿಕಾದಲ್ಲಿ 78 ಲಕ್ಷ ಪ್ರಕರಣಗಳಿದ್ದು, 2 ಲಕ್ಷ ಸಾವುಗಳು ದಾಖಲಾಗಿವೆ. ಅಮೇರಿಕಾವನ್ನು ಹಿಂದಿಕ್ಕಿ, ಭಾರತ ಮೊದಲ ಸ್ಥಾನಕ್ಕೇರಲು ಕೇವಲ 6 ಲಕ್ಷ ಪ್ರಕರಣಗಳಷ್ಟೆ ಬಾಕಿಯಿವೆ.

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ 55,342 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕಳೆದ ಎರಡು ತಿಂಗಳಿನಲ್ಲಿಯೇ ಅತ್ಯಂತ ಕಡಿಮೆ ಪ್ರಕರಣಗಳು ನಿನ್ನೆ ದಾಖಲಾಗಿದೆ.

ಹಲವು ದಿನಗಳಿಂದ ಭಾರತದ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಕುಸಿಯುತ್ತಿದೆ ಎಂದು ಆರೋಗ್ಯ ಸಚಿವಾಲಯ ಇಂದು ಬೆಳಿಗಿನ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸ್ತುತ ಭಾರತದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 71.75 ಲಕ್ಷಕ್ಕೆ ತಲುಪಿದೆ.

ಇದನ್ನೂ ಓದಿ: 6 ಕೊರೊನಾ ಪ್ರಕರಣ ಪತ್ತೆ: ಇಡೀ ನಗರವನ್ನೇ ಪರೀಕ್ಷಿಸುತ್ತಿರುವ ಚೀನಾ ಆಡಳಿತ!

ದೇಶದಲ್ಲಿ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಈ ಹಿಂದೆ ಸರಾಸರಿ 90,000 ದಾಖಲಾಗುತ್ತಿತ್ತು. ಈಗ ಇದು ಸರಾಸರಿ 72,000 ರಿಂದ 74,000 ಕ್ಕೆ ಇಳಿದಿದೆ.

24 ಗಂಟೆಗಳಲ್ಲಿ, 77,760 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಕೊರೊನಾ ವೈರಸ್ ಪ್ರಕರಣಗಳು 8.38 ಲಕ್ಷಕ್ಕೆ ಇಳಿದಿದೆ. ಇದು ಭಾರತದ ಚೇತರಿಕೆ ಪ್ರಮಾಣವನ್ನು ಶೇಕಡಾ 86.8 ಕ್ಕೆ ಹೆಚ್ಚಿಸಿದೆ. ಇದುವರೆಗೂ ಸುಮಾರು 62.2 ಲಕ್ಷ ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ಸಂಸದೆ ಕಛೇರಿ ಸೀಲ್!

ಇದುವರೆಗೂ ಸೋಂಕಿನಿಂದ ಸಂಭವಿಸಿದ ಒಟ್ಟು ಸಾವುಗಳ ಸಂಖ್ಯೆ 1,09,856 ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 706 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಭಾರತದಲ್ಲಿ ಆಗಸ್ಟ್ ಆರಂಭದಿಂದ ದಿನಕ್ಕೆ 800 ರಿಂದ 900 ಸಾವುಗಳು ವರದಿಯಾಗುತ್ತಿದ್ದು, ಸಾವಿನ ಪ್ರಮಾಣ ಶೇಕಡಾ 1.5 ರಷ್ಟು ಇದೆ.

ಸರ್ಕಾರವು ಸೋಮವಾರ ಒಂದೇ ದಿನ 10.7 ಲಕ್ಷ ಜನರನ್ನು ಪರೀಕ್ಷಿಸಿದ್ದರಿಂದ ಭಾರತದಲ್ಲಿ ದೈನಂದಿನ ಸೋಂಕಿತರ ದರವು ಶೇಕಡಾ 5.2 ರಷ್ಟಿದೆ. ಈವರೆಗೆ ಒಟ್ಟು 8.8 ಕೋಟಿ ಪರೀಕ್ಷೆಗಳನ್ನು ಮಾಡಲಾಗಿದೆ.

ಇದನ್ನೂ ಓದಿ: ಇನ್ನೂ ಹೆಚ್ಚಿನ ಕೊರೊನಾ ಪರಿಹಾರ ಸಾಧ್ಯವಿಲ್ಲ: ಸುಪ್ರೀಂ‌ಗೆ ಕೇಂದ್ರ ಸರ್ಕಾರ

ಗರಿಷ್ಠ ದೈನಂದಿನ ಕೊರೊನಾ ವೈರಸ್ ಪ್ರಕರಣಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ಮೊದಲ ಸ್ಥಾನದಲ್ಲಿದೆ. ಈ ರಾಜ್ಯಗಳು ದೇಶದ ಎಲ್ಲಾ ಪ್ರಕರಣಗಳಲ್ಲಿ ಶೇಕಡಾ 52.5 ರಷ್ಟನ್ನು ಹೊಂದಿದೆ.

ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶಗಳಲ್ಲಿ ಗರಿಷ್ಠ ಸಾವುಗಳು ಸಂಭವಿಸಿವೆ. ಈ ರಾಜ್ಯಗಳು ಒಟ್ಟು ಸಾವುಗಳಲ್ಲಿ ಶೇಕಡಾ 57 ರಷ್ಟನ್ನು ಹೊಂದಿದೆ.

ಇದನ್ನೂ ಓದಿ: ಲಕ್ಷದ್ವೀಪ: 8 ತಿಂಗಳಾದರೂ ಒಂದೂ ಕೊರೊನಾ ಸೊಂಕಿತರಿಲ್ಲದ ಪ್ರದೇಶ!

ಭಾರತ, ಇಡೀ ಜಗತ್ತಿನಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳನ್ನು ಹೊಂದಿರುವ ದೇಶಗಳ ಪೈಕಿ ಅಮೇರಿಕಾದ ನಂತರದ ಎರಡನೇ ಸ್ಥಾನದಲ್ಲಿದೆ. ಪ್ರಸ್ತುತ ಅಮೇರಿಕಾದಲ್ಲಿ 78 ಲಕ್ಷ ಪ್ರಕರಣಗಳಿದ್ದು, 2 ಲಕ್ಷ ಸಾವುಗಳು ದಾಖಲಾಗಿವೆ. ಅಮೇರಿಕಾವನ್ನು ಹಿಂದಿಕ್ಕಿ, ಭಾರತ ಮೊದಲ ಸ್ಥಾನಕ್ಕೇರಲು ಕೇವಲ 6 ಲಕ್ಷ ಪ್ರಕರಣಗಳಷ್ಟೆ ಬಾಕಿಯಿವೆ.


ಇದನ್ನೂ ಓದಿ: 10 ಕೋಟಿ ಜನರನ್ನು ತೀವ್ರ ಬಡತನಕ್ಕೆ ದೂಡಲಿದೆ ಕೊರೊನಾ: ವಿಶ್ವಬ್ಯಾಂಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...