Homeಕರೋನಾ ತಲ್ಲಣಕೊರೊನಾ: ಬ್ರೆಜಿಲ್‌ ಹಿಂದಿಕ್ಕಿ ಎರಡನೆ ಸ್ಥಾನಕ್ಕೆ ಏರಿದ ಭಾರತ

ಕೊರೊನಾ: ಬ್ರೆಜಿಲ್‌ ಹಿಂದಿಕ್ಕಿ ಎರಡನೆ ಸ್ಥಾನಕ್ಕೆ ಏರಿದ ಭಾರತ

ಇದುವರೆಗೂ 32 ಲಕ್ಷಕ್ಕೂ ಹೆಚ್ಚು ಕೊರೊನಾ ರೋಗಿಗಳು ದೇಶದಾದ್ಯಂತ ಚೇತರಿಸಿಕೊಂಡಿದ್ದಾರೆ.

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ 90 ಸಾವಿರಕ್ಕಿಂತಲೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ದಾಖಲಾಗುವುದರೊಂದಿಗೆ ಬ್ರೆಜಿಲ್‌‌ ದೇಶವನ್ನು ಹಿಂದಿಕ್ಕಿ, ಭಾರತವು ವಿಶ್ವದ ಎರಡನೇ ಅತೀ ಹೆಚ್ಚು ಕೊರೊನಾ ಸೋಂಕಿತ ದೇಶವಾಗಿ ದಾಖಲಾಯಿತು.

ಪ್ರಸ್ತುತ ದೇಶದಲ್ಲಿ ಇದುವರೆಗೂ ಒಟ್ಟು 42 ಲಕ್ಷ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ದೇಶದಲ್ಲಿ 90,000 ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ಇದನ್ನೂ ಓದಿ: ಕೊರೊನಾ ಕಾರಣ ಸದನದಲ್ಲಿ ಪ್ರಶ್ನೋತ್ತರ ವೇಳೆ ಇಲ್ಲ, ಆದರೆ ವಿದ್ಯಾರ್ಥಿಗಳಿಗೆ ಮಾತ್ರ ಜೆಇಇ, ನೀಟ್ ಪರೀಕ್ಷೆ: ಒವೈಸಿ

ಅಮೆರಿಕಾ ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿರುವ ದೇಶವಾಗಿದ್ದು, ಅಲ್ಲಿ ಇದುವರೆಗೂ 62 ಲಕ್ಷ ಪ್ರಕರಣಗಳು ವರದಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ, ಭಾರತವು ಸುಮಾರು ಒಂದು ತಿಂಗಳಿನಿಂದ ವಿಶ್ವದಲ್ಲೇ ಅತಿ ಹೆಚ್ಚು ದೈನಂದಿನ ಕೊರೊನಾ ಪ್ರಕರಣಗಳನ್ನು ವರದಿ ಮಾಡುತ್ತಿದೆ.

ಸುಮಾರು 32 ಲಕ್ಷಕ್ಕೂ ಹೆಚ್ಚು ಕೊರೊನಾ ರೋಗಿಗಳು ದೇಶದಾದ್ಯಂತ ಚೇತರಿಸಿಕೊಂಡಿದ್ದು, ಕಳೆದ 24 ಗಂಟೆಗಳಲ್ಲಿ 69 ಸಾವಿರಕ್ಕೂ ಹೆಚ್ಚು ಚೇತರಿಕೆ ದಾಖಲಾಗಿದೆ.

ಸೋಂಕಿನಿಂದಾಗಿ ಈವರೆಗೆ 71,642 ಜನರು ಸಾವಿಗೀಡಾಗಿದ್ದು, ನಿನ್ನೆ ಒಂದೇ ದಿನದಲ್ಲಿ 1,016 ಸಾವುಗಳು ದಾಖಲಾಗಿದೆ.

ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಉತ್ತರ ಪ್ರದೇಶ ರಾಜ್ಯಗಳು ಕೊರೊನಾದಿಂದಾಗಿ ಹೆಚ್ಚು ಹಾನಿಗೊಳಗಾದ ರಾಜ್ಯಗಳಾಗಿದ್ದು, ಈ ಐದು ರಾಜ್ಯಗಳು ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳನ್ನು ವರದಿ ಮಾಡಿದೆ.

ರಾಜ್ಯದಲ್ಲಿ ಇದುವರೆಗೆ 3.99 ಲಕ್ಷ ಪ್ರಕರಣಗಳು ವರದಿಯಾಗಿದ್ದು. 2.93 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದಾಗಿ 6,393 ಜನರು ಈ ವರೆಗೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...