Homeಮುಖಪುಟಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದು ಪದ್ಮಾವತಿಯವರು ವಿ‍ಷಾದಿಸುತ್ತಿದ್ದರು.

- Advertisement -
- Advertisement -

‘ಗಾಡ್ ಮದರ್ ಆಫ್ ಕಾರ್ಡಿಯಾಲಜಿ’ ಎಂದು ಪ್ರಸಿದ್ಧವಾಗಿದ್ದ ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ಆಗಸ್ಟ್ 29 ರಂದು ಕೊರೊನಾ ಸೋಂಕಿನಿಂದ ನಿಧನರಾದರು ಎಂದು ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ತಿಳಿಸಿದೆ.

ಡಾ. ಪದ್ಮಾವತಿ ಶಿವರಾಮಕೃಷ್ಣ ಅಯ್ಯರ್ ಅವರನ್ನು ಡಾ.ಪದ್ಮಾವತಿ ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ಅವರು ತಮ್ಮ ಜೀವಿತದ ಕೊನೆಯವರೆಗೂ ಸಕ್ರಿಯರಾಗಿದ್ದುಕೊಂಡು, ರೋಗಿಗಳಿಗೆ ಮತ್ತು ವೈದ್ಯರಿಗೆ ಸಮಾನವಾಗಿ ಸಲಹೆ ನೀಡುತ್ತಿದ್ದರು. ಜೊತೆಗೆ ವೈದ್ಯಕೀಯ ನಿಯತಕಾಲಿಕಗಳಿಗೆ 300 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದರು.

1917 ರಲ್ಲಿ ಬರ್ಮಾದಲ್ಲಿ (ಈಗಿನ ಮ್ಯಾನ್ಮಾರ್) ಜನಿಸಿದ ಅವರು ರಂಗೂನ್ ವೈದ್ಯಕೀಯ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದ ಮೊದಲ ಮಹಿಳೆಯಾಗಿದ್ದರು.

ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ, ಜಪಾನ್ 1942 ರಲ್ಲಿ ಬರ್ಮಾದ ಮೇಲೆ ಆಕ್ರಮಣ ಮಾಡಿತು. ಪದ್ಮಾವತಿ ತನ್ನ ತಾಯಿ ಮತ್ತು ನಾಲ್ಕು ಸಹೋದರಿಯರೊಂದಿಗೆ ಭಾರತಕ್ಕೆ ಬಂದಿದ್ದರು.

1949 ರಲ್ಲಿ, ಡಾ. ಪದ್ಮಾವತಿ ಲಂಡನ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಮತ್ತು ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ ಸಹವರ್ತಿಯಾಗಿ ಲಂಡನ್‌ಗೆ ತೆರಳಿದರು. 1949 ರಲ್ಲಿ ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿ ಡಿಪಾರ್ಟ್ಮೆಂಟ್ ಆಫ್ ಪೀಡಿಯಾಟ್ರಿಕ್ಸ್ ನೊಂದಿಗೆ ಫೆಲೋಶಿಪ್ ಪಡೆಯುವ ಮೊದಲು ಅವರು ಸ್ವೀಡನ್‌ನಲ್ಲಿ ಅಧ್ಯಯನ ಮಾಡಿದರು.

ಬಾಲ್ಟಿಮೋರ್‌ನಲ್ಲಿ, ಡಾ. ಪದ್ಮಾವತಿ ಅವರು ಡಾ. ಹೆಲೆನ್ ಟೌಸಿಗ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು, ‘ನೀಲಿ ಶಿಶುಗಳು’ ಅಥವಾ ಜನ್ಮಜಾತ ಹೃದಯ ದೋಷಗಳಿಂದ ಜನಿಸಿದ ಶಿಶುಗಳಿಗೆ ಮೊದಲು ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಬಡವರು ವಾಡಿಕೆಯಂತೆ ಕೆಮ್ಮು, ಶೀತದಿಂದ ಬಳಲುತ್ತಿದ್ದಾರೆ, ಇದರಿಂದಾಗಿ ಕೊರೊನಾ ಪತ್ತೆ ಕಷ್ಟಕರವಾಗಿದೆ.

ಆಧುನಿಕ ಹೃದಯಶಾಸ್ತ್ರದ ಪ್ರವರ್ತಕ ಡಾ. ಪಾಲ್ ಡಡ್ಲಿ ವೈಟ್ ಅವರ ಅಡಿಯಲ್ಲಿ 1952 ರಲ್ಲಿ ಅವರು ಹಾರ್ವರ್ಡ್ ವೈದ್ಯಕೀಯ ಶಾಲೆಗೆ ಸೇರಿದರು.

1953 ರಲ್ಲಿ, ಡಾ. ಪದ್ಮಾವತಿ ಭಾರತಕ್ಕೆ ಮರಳಿ, ದೆಹಲಿಯ ಮಹಿಳಾ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಪ್ರಾರಂಭಿಸಿದರು. ಒಂದು ವರ್ಷದೊಳಗೆ ಮೆಡಿಸಿನ್ ಪ್ರಾಧ್ಯಾಪಕರಾಗಿ ಬಡ್ತಿ ಪಡೆದರು.

ಅವರು ರಾಕ್‌ಫೆಲ್ಲರ್ ಫೌಂಡೇಶನ್‌ನ ಅನುದಾನದೊಂದಿಗೆ ಉತ್ತರ ಭಾರತದ ಮೊದಲ ಹೃದಯ ಕ್ಯಾತಿಟರ್ಟೈಸೇಶನ್ ಲ್ಯಾಬ್ ಅನ್ನು ಸ್ಥಾಪಿಸಿದರು.

1967 ರಲ್ಲಿ, ಭಾರತ ಸರ್ಕಾರವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ (ಎಂಎಎಂಸಿ) ನಿರ್ದೇಶಕಿ-ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡಿತು. ಅಲ್ಲಿ ಅವರು ಹೃದ್ರೋಗ ವಿಭಾಗವನ್ನೂ ಸ್ಥಾಪಿಸಿದರು. ಎಂಎಎಂಸಿಯಲ್ಲಿ 26 ವಿಭಾಗಗಳಿದ್ದು, ಸ್ನಾತಕೋತ್ತರ ಪದವೀಧರರನ್ನು ಪ್ರವೇಶಿಸುವ ಕಾರ್ಡಿಯಾಲಜಿಯಲ್ಲಿ ಡಿಎಂ ಕೋರ್ಸ್ ಅನ್ನು ಡಾ. ಪದ್ಮಾವತಿ ಪರಿಚಯಿಸಿದರು.

1967 ರಲ್ಲಿ ಪದ್ಮಭೂಷಣ್ ಮತ್ತು 1992 ರಲ್ಲಿ ಪದ್ಮವಿಭೂಷಣ್ ಪ್ರಶಸ್ತಿ ಪಡೆದರು. ಅವರು ಹಾರ್ವರ್ಡ್ ಮೆಡಿಕಲ್ ಇಂಟರ್ನ್ಯಾಷನಲ್ ಅವಾರ್ಡ್, ಡಾ ಬಿ.ಸಿ.ರಾಯ್ ಪ್ರಶಸ್ತಿ ಮತ್ತು ಕಮಲಾ ಮೆನನ್ ರಿಸರ್ಚ್ ಅವಾರ್ಡ್ ಅನ್ನು ಸಹ ಪಡೆದರು. 1981 ರಲ್ಲಿ ಭಾರತ ಸರ್ಕಾರದಿಂದ ನಿವೃತ್ತಿಯಾದ ನಂತರ, ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ನ ಸ್ಥಾಪಕ ನಿರ್ದೇಶಕರಾಗಿದ್ದರು.

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದಿದ್ದರು.


ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...