Homeಮುಖಪುಟಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದು ಪದ್ಮಾವತಿಯವರು ವಿ‍ಷಾದಿಸುತ್ತಿದ್ದರು.

- Advertisement -
- Advertisement -

‘ಗಾಡ್ ಮದರ್ ಆಫ್ ಕಾರ್ಡಿಯಾಲಜಿ’ ಎಂದು ಪ್ರಸಿದ್ಧವಾಗಿದ್ದ ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ಆಗಸ್ಟ್ 29 ರಂದು ಕೊರೊನಾ ಸೋಂಕಿನಿಂದ ನಿಧನರಾದರು ಎಂದು ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ತಿಳಿಸಿದೆ.

ಡಾ. ಪದ್ಮಾವತಿ ಶಿವರಾಮಕೃಷ್ಣ ಅಯ್ಯರ್ ಅವರನ್ನು ಡಾ.ಪದ್ಮಾವತಿ ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ಅವರು ತಮ್ಮ ಜೀವಿತದ ಕೊನೆಯವರೆಗೂ ಸಕ್ರಿಯರಾಗಿದ್ದುಕೊಂಡು, ರೋಗಿಗಳಿಗೆ ಮತ್ತು ವೈದ್ಯರಿಗೆ ಸಮಾನವಾಗಿ ಸಲಹೆ ನೀಡುತ್ತಿದ್ದರು. ಜೊತೆಗೆ ವೈದ್ಯಕೀಯ ನಿಯತಕಾಲಿಕಗಳಿಗೆ 300 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದರು.

1917 ರಲ್ಲಿ ಬರ್ಮಾದಲ್ಲಿ (ಈಗಿನ ಮ್ಯಾನ್ಮಾರ್) ಜನಿಸಿದ ಅವರು ರಂಗೂನ್ ವೈದ್ಯಕೀಯ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದ ಮೊದಲ ಮಹಿಳೆಯಾಗಿದ್ದರು.

ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ, ಜಪಾನ್ 1942 ರಲ್ಲಿ ಬರ್ಮಾದ ಮೇಲೆ ಆಕ್ರಮಣ ಮಾಡಿತು. ಪದ್ಮಾವತಿ ತನ್ನ ತಾಯಿ ಮತ್ತು ನಾಲ್ಕು ಸಹೋದರಿಯರೊಂದಿಗೆ ಭಾರತಕ್ಕೆ ಬಂದಿದ್ದರು.

1949 ರಲ್ಲಿ, ಡಾ. ಪದ್ಮಾವತಿ ಲಂಡನ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಮತ್ತು ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ ಸಹವರ್ತಿಯಾಗಿ ಲಂಡನ್‌ಗೆ ತೆರಳಿದರು. 1949 ರಲ್ಲಿ ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿ ಡಿಪಾರ್ಟ್ಮೆಂಟ್ ಆಫ್ ಪೀಡಿಯಾಟ್ರಿಕ್ಸ್ ನೊಂದಿಗೆ ಫೆಲೋಶಿಪ್ ಪಡೆಯುವ ಮೊದಲು ಅವರು ಸ್ವೀಡನ್‌ನಲ್ಲಿ ಅಧ್ಯಯನ ಮಾಡಿದರು.

ಬಾಲ್ಟಿಮೋರ್‌ನಲ್ಲಿ, ಡಾ. ಪದ್ಮಾವತಿ ಅವರು ಡಾ. ಹೆಲೆನ್ ಟೌಸಿಗ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು, ‘ನೀಲಿ ಶಿಶುಗಳು’ ಅಥವಾ ಜನ್ಮಜಾತ ಹೃದಯ ದೋಷಗಳಿಂದ ಜನಿಸಿದ ಶಿಶುಗಳಿಗೆ ಮೊದಲು ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಬಡವರು ವಾಡಿಕೆಯಂತೆ ಕೆಮ್ಮು, ಶೀತದಿಂದ ಬಳಲುತ್ತಿದ್ದಾರೆ, ಇದರಿಂದಾಗಿ ಕೊರೊನಾ ಪತ್ತೆ ಕಷ್ಟಕರವಾಗಿದೆ.

ಆಧುನಿಕ ಹೃದಯಶಾಸ್ತ್ರದ ಪ್ರವರ್ತಕ ಡಾ. ಪಾಲ್ ಡಡ್ಲಿ ವೈಟ್ ಅವರ ಅಡಿಯಲ್ಲಿ 1952 ರಲ್ಲಿ ಅವರು ಹಾರ್ವರ್ಡ್ ವೈದ್ಯಕೀಯ ಶಾಲೆಗೆ ಸೇರಿದರು.

1953 ರಲ್ಲಿ, ಡಾ. ಪದ್ಮಾವತಿ ಭಾರತಕ್ಕೆ ಮರಳಿ, ದೆಹಲಿಯ ಮಹಿಳಾ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಪ್ರಾರಂಭಿಸಿದರು. ಒಂದು ವರ್ಷದೊಳಗೆ ಮೆಡಿಸಿನ್ ಪ್ರಾಧ್ಯಾಪಕರಾಗಿ ಬಡ್ತಿ ಪಡೆದರು.

ಅವರು ರಾಕ್‌ಫೆಲ್ಲರ್ ಫೌಂಡೇಶನ್‌ನ ಅನುದಾನದೊಂದಿಗೆ ಉತ್ತರ ಭಾರತದ ಮೊದಲ ಹೃದಯ ಕ್ಯಾತಿಟರ್ಟೈಸೇಶನ್ ಲ್ಯಾಬ್ ಅನ್ನು ಸ್ಥಾಪಿಸಿದರು.

1967 ರಲ್ಲಿ, ಭಾರತ ಸರ್ಕಾರವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ (ಎಂಎಎಂಸಿ) ನಿರ್ದೇಶಕಿ-ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡಿತು. ಅಲ್ಲಿ ಅವರು ಹೃದ್ರೋಗ ವಿಭಾಗವನ್ನೂ ಸ್ಥಾಪಿಸಿದರು. ಎಂಎಎಂಸಿಯಲ್ಲಿ 26 ವಿಭಾಗಗಳಿದ್ದು, ಸ್ನಾತಕೋತ್ತರ ಪದವೀಧರರನ್ನು ಪ್ರವೇಶಿಸುವ ಕಾರ್ಡಿಯಾಲಜಿಯಲ್ಲಿ ಡಿಎಂ ಕೋರ್ಸ್ ಅನ್ನು ಡಾ. ಪದ್ಮಾವತಿ ಪರಿಚಯಿಸಿದರು.

1967 ರಲ್ಲಿ ಪದ್ಮಭೂಷಣ್ ಮತ್ತು 1992 ರಲ್ಲಿ ಪದ್ಮವಿಭೂಷಣ್ ಪ್ರಶಸ್ತಿ ಪಡೆದರು. ಅವರು ಹಾರ್ವರ್ಡ್ ಮೆಡಿಕಲ್ ಇಂಟರ್ನ್ಯಾಷನಲ್ ಅವಾರ್ಡ್, ಡಾ ಬಿ.ಸಿ.ರಾಯ್ ಪ್ರಶಸ್ತಿ ಮತ್ತು ಕಮಲಾ ಮೆನನ್ ರಿಸರ್ಚ್ ಅವಾರ್ಡ್ ಅನ್ನು ಸಹ ಪಡೆದರು. 1981 ರಲ್ಲಿ ಭಾರತ ಸರ್ಕಾರದಿಂದ ನಿವೃತ್ತಿಯಾದ ನಂತರ, ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ನ ಸ್ಥಾಪಕ ನಿರ್ದೇಶಕರಾಗಿದ್ದರು.

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದಿದ್ದರು.


ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...