Homeಮುಖಪುಟಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದು ಪದ್ಮಾವತಿಯವರು ವಿ‍ಷಾದಿಸುತ್ತಿದ್ದರು.

- Advertisement -
- Advertisement -

‘ಗಾಡ್ ಮದರ್ ಆಫ್ ಕಾರ್ಡಿಯಾಲಜಿ’ ಎಂದು ಪ್ರಸಿದ್ಧವಾಗಿದ್ದ ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ಆಗಸ್ಟ್ 29 ರಂದು ಕೊರೊನಾ ಸೋಂಕಿನಿಂದ ನಿಧನರಾದರು ಎಂದು ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ತಿಳಿಸಿದೆ.

ಡಾ. ಪದ್ಮಾವತಿ ಶಿವರಾಮಕೃಷ್ಣ ಅಯ್ಯರ್ ಅವರನ್ನು ಡಾ.ಪದ್ಮಾವತಿ ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ಅವರು ತಮ್ಮ ಜೀವಿತದ ಕೊನೆಯವರೆಗೂ ಸಕ್ರಿಯರಾಗಿದ್ದುಕೊಂಡು, ರೋಗಿಗಳಿಗೆ ಮತ್ತು ವೈದ್ಯರಿಗೆ ಸಮಾನವಾಗಿ ಸಲಹೆ ನೀಡುತ್ತಿದ್ದರು. ಜೊತೆಗೆ ವೈದ್ಯಕೀಯ ನಿಯತಕಾಲಿಕಗಳಿಗೆ 300 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದರು.

1917 ರಲ್ಲಿ ಬರ್ಮಾದಲ್ಲಿ (ಈಗಿನ ಮ್ಯಾನ್ಮಾರ್) ಜನಿಸಿದ ಅವರು ರಂಗೂನ್ ವೈದ್ಯಕೀಯ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದ ಮೊದಲ ಮಹಿಳೆಯಾಗಿದ್ದರು.

ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ, ಜಪಾನ್ 1942 ರಲ್ಲಿ ಬರ್ಮಾದ ಮೇಲೆ ಆಕ್ರಮಣ ಮಾಡಿತು. ಪದ್ಮಾವತಿ ತನ್ನ ತಾಯಿ ಮತ್ತು ನಾಲ್ಕು ಸಹೋದರಿಯರೊಂದಿಗೆ ಭಾರತಕ್ಕೆ ಬಂದಿದ್ದರು.

1949 ರಲ್ಲಿ, ಡಾ. ಪದ್ಮಾವತಿ ಲಂಡನ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಮತ್ತು ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ ಸಹವರ್ತಿಯಾಗಿ ಲಂಡನ್‌ಗೆ ತೆರಳಿದರು. 1949 ರಲ್ಲಿ ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿ ಡಿಪಾರ್ಟ್ಮೆಂಟ್ ಆಫ್ ಪೀಡಿಯಾಟ್ರಿಕ್ಸ್ ನೊಂದಿಗೆ ಫೆಲೋಶಿಪ್ ಪಡೆಯುವ ಮೊದಲು ಅವರು ಸ್ವೀಡನ್‌ನಲ್ಲಿ ಅಧ್ಯಯನ ಮಾಡಿದರು.

ಬಾಲ್ಟಿಮೋರ್‌ನಲ್ಲಿ, ಡಾ. ಪದ್ಮಾವತಿ ಅವರು ಡಾ. ಹೆಲೆನ್ ಟೌಸಿಗ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು, ‘ನೀಲಿ ಶಿಶುಗಳು’ ಅಥವಾ ಜನ್ಮಜಾತ ಹೃದಯ ದೋಷಗಳಿಂದ ಜನಿಸಿದ ಶಿಶುಗಳಿಗೆ ಮೊದಲು ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಬಡವರು ವಾಡಿಕೆಯಂತೆ ಕೆಮ್ಮು, ಶೀತದಿಂದ ಬಳಲುತ್ತಿದ್ದಾರೆ, ಇದರಿಂದಾಗಿ ಕೊರೊನಾ ಪತ್ತೆ ಕಷ್ಟಕರವಾಗಿದೆ.

ಆಧುನಿಕ ಹೃದಯಶಾಸ್ತ್ರದ ಪ್ರವರ್ತಕ ಡಾ. ಪಾಲ್ ಡಡ್ಲಿ ವೈಟ್ ಅವರ ಅಡಿಯಲ್ಲಿ 1952 ರಲ್ಲಿ ಅವರು ಹಾರ್ವರ್ಡ್ ವೈದ್ಯಕೀಯ ಶಾಲೆಗೆ ಸೇರಿದರು.

1953 ರಲ್ಲಿ, ಡಾ. ಪದ್ಮಾವತಿ ಭಾರತಕ್ಕೆ ಮರಳಿ, ದೆಹಲಿಯ ಮಹಿಳಾ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಪ್ರಾರಂಭಿಸಿದರು. ಒಂದು ವರ್ಷದೊಳಗೆ ಮೆಡಿಸಿನ್ ಪ್ರಾಧ್ಯಾಪಕರಾಗಿ ಬಡ್ತಿ ಪಡೆದರು.

ಅವರು ರಾಕ್‌ಫೆಲ್ಲರ್ ಫೌಂಡೇಶನ್‌ನ ಅನುದಾನದೊಂದಿಗೆ ಉತ್ತರ ಭಾರತದ ಮೊದಲ ಹೃದಯ ಕ್ಯಾತಿಟರ್ಟೈಸೇಶನ್ ಲ್ಯಾಬ್ ಅನ್ನು ಸ್ಥಾಪಿಸಿದರು.

1967 ರಲ್ಲಿ, ಭಾರತ ಸರ್ಕಾರವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ (ಎಂಎಎಂಸಿ) ನಿರ್ದೇಶಕಿ-ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡಿತು. ಅಲ್ಲಿ ಅವರು ಹೃದ್ರೋಗ ವಿಭಾಗವನ್ನೂ ಸ್ಥಾಪಿಸಿದರು. ಎಂಎಎಂಸಿಯಲ್ಲಿ 26 ವಿಭಾಗಗಳಿದ್ದು, ಸ್ನಾತಕೋತ್ತರ ಪದವೀಧರರನ್ನು ಪ್ರವೇಶಿಸುವ ಕಾರ್ಡಿಯಾಲಜಿಯಲ್ಲಿ ಡಿಎಂ ಕೋರ್ಸ್ ಅನ್ನು ಡಾ. ಪದ್ಮಾವತಿ ಪರಿಚಯಿಸಿದರು.

1967 ರಲ್ಲಿ ಪದ್ಮಭೂಷಣ್ ಮತ್ತು 1992 ರಲ್ಲಿ ಪದ್ಮವಿಭೂಷಣ್ ಪ್ರಶಸ್ತಿ ಪಡೆದರು. ಅವರು ಹಾರ್ವರ್ಡ್ ಮೆಡಿಕಲ್ ಇಂಟರ್ನ್ಯಾಷನಲ್ ಅವಾರ್ಡ್, ಡಾ ಬಿ.ಸಿ.ರಾಯ್ ಪ್ರಶಸ್ತಿ ಮತ್ತು ಕಮಲಾ ಮೆನನ್ ರಿಸರ್ಚ್ ಅವಾರ್ಡ್ ಅನ್ನು ಸಹ ಪಡೆದರು. 1981 ರಲ್ಲಿ ಭಾರತ ಸರ್ಕಾರದಿಂದ ನಿವೃತ್ತಿಯಾದ ನಂತರ, ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ನ ಸ್ಥಾಪಕ ನಿರ್ದೇಶಕರಾಗಿದ್ದರು.

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದಿದ್ದರು.


ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...