Homeಮುಖಪುಟಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದು ಪದ್ಮಾವತಿಯವರು ವಿ‍ಷಾದಿಸುತ್ತಿದ್ದರು.

- Advertisement -
- Advertisement -

‘ಗಾಡ್ ಮದರ್ ಆಫ್ ಕಾರ್ಡಿಯಾಲಜಿ’ ಎಂದು ಪ್ರಸಿದ್ಧವಾಗಿದ್ದ ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ಆಗಸ್ಟ್ 29 ರಂದು ಕೊರೊನಾ ಸೋಂಕಿನಿಂದ ನಿಧನರಾದರು ಎಂದು ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ತಿಳಿಸಿದೆ.

ಡಾ. ಪದ್ಮಾವತಿ ಶಿವರಾಮಕೃಷ್ಣ ಅಯ್ಯರ್ ಅವರನ್ನು ಡಾ.ಪದ್ಮಾವತಿ ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ಅವರು ತಮ್ಮ ಜೀವಿತದ ಕೊನೆಯವರೆಗೂ ಸಕ್ರಿಯರಾಗಿದ್ದುಕೊಂಡು, ರೋಗಿಗಳಿಗೆ ಮತ್ತು ವೈದ್ಯರಿಗೆ ಸಮಾನವಾಗಿ ಸಲಹೆ ನೀಡುತ್ತಿದ್ದರು. ಜೊತೆಗೆ ವೈದ್ಯಕೀಯ ನಿಯತಕಾಲಿಕಗಳಿಗೆ 300 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದರು.

1917 ರಲ್ಲಿ ಬರ್ಮಾದಲ್ಲಿ (ಈಗಿನ ಮ್ಯಾನ್ಮಾರ್) ಜನಿಸಿದ ಅವರು ರಂಗೂನ್ ವೈದ್ಯಕೀಯ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದ ಮೊದಲ ಮಹಿಳೆಯಾಗಿದ್ದರು.

ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ, ಜಪಾನ್ 1942 ರಲ್ಲಿ ಬರ್ಮಾದ ಮೇಲೆ ಆಕ್ರಮಣ ಮಾಡಿತು. ಪದ್ಮಾವತಿ ತನ್ನ ತಾಯಿ ಮತ್ತು ನಾಲ್ಕು ಸಹೋದರಿಯರೊಂದಿಗೆ ಭಾರತಕ್ಕೆ ಬಂದಿದ್ದರು.

1949 ರಲ್ಲಿ, ಡಾ. ಪದ್ಮಾವತಿ ಲಂಡನ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಮತ್ತು ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ ಸಹವರ್ತಿಯಾಗಿ ಲಂಡನ್‌ಗೆ ತೆರಳಿದರು. 1949 ರಲ್ಲಿ ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿ ಡಿಪಾರ್ಟ್ಮೆಂಟ್ ಆಫ್ ಪೀಡಿಯಾಟ್ರಿಕ್ಸ್ ನೊಂದಿಗೆ ಫೆಲೋಶಿಪ್ ಪಡೆಯುವ ಮೊದಲು ಅವರು ಸ್ವೀಡನ್‌ನಲ್ಲಿ ಅಧ್ಯಯನ ಮಾಡಿದರು.

ಬಾಲ್ಟಿಮೋರ್‌ನಲ್ಲಿ, ಡಾ. ಪದ್ಮಾವತಿ ಅವರು ಡಾ. ಹೆಲೆನ್ ಟೌಸಿಗ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು, ‘ನೀಲಿ ಶಿಶುಗಳು’ ಅಥವಾ ಜನ್ಮಜಾತ ಹೃದಯ ದೋಷಗಳಿಂದ ಜನಿಸಿದ ಶಿಶುಗಳಿಗೆ ಮೊದಲು ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಬಡವರು ವಾಡಿಕೆಯಂತೆ ಕೆಮ್ಮು, ಶೀತದಿಂದ ಬಳಲುತ್ತಿದ್ದಾರೆ, ಇದರಿಂದಾಗಿ ಕೊರೊನಾ ಪತ್ತೆ ಕಷ್ಟಕರವಾಗಿದೆ.

ಆಧುನಿಕ ಹೃದಯಶಾಸ್ತ್ರದ ಪ್ರವರ್ತಕ ಡಾ. ಪಾಲ್ ಡಡ್ಲಿ ವೈಟ್ ಅವರ ಅಡಿಯಲ್ಲಿ 1952 ರಲ್ಲಿ ಅವರು ಹಾರ್ವರ್ಡ್ ವೈದ್ಯಕೀಯ ಶಾಲೆಗೆ ಸೇರಿದರು.

1953 ರಲ್ಲಿ, ಡಾ. ಪದ್ಮಾವತಿ ಭಾರತಕ್ಕೆ ಮರಳಿ, ದೆಹಲಿಯ ಮಹಿಳಾ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಪ್ರಾರಂಭಿಸಿದರು. ಒಂದು ವರ್ಷದೊಳಗೆ ಮೆಡಿಸಿನ್ ಪ್ರಾಧ್ಯಾಪಕರಾಗಿ ಬಡ್ತಿ ಪಡೆದರು.

ಅವರು ರಾಕ್‌ಫೆಲ್ಲರ್ ಫೌಂಡೇಶನ್‌ನ ಅನುದಾನದೊಂದಿಗೆ ಉತ್ತರ ಭಾರತದ ಮೊದಲ ಹೃದಯ ಕ್ಯಾತಿಟರ್ಟೈಸೇಶನ್ ಲ್ಯಾಬ್ ಅನ್ನು ಸ್ಥಾಪಿಸಿದರು.

1967 ರಲ್ಲಿ, ಭಾರತ ಸರ್ಕಾರವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ (ಎಂಎಎಂಸಿ) ನಿರ್ದೇಶಕಿ-ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡಿತು. ಅಲ್ಲಿ ಅವರು ಹೃದ್ರೋಗ ವಿಭಾಗವನ್ನೂ ಸ್ಥಾಪಿಸಿದರು. ಎಂಎಎಂಸಿಯಲ್ಲಿ 26 ವಿಭಾಗಗಳಿದ್ದು, ಸ್ನಾತಕೋತ್ತರ ಪದವೀಧರರನ್ನು ಪ್ರವೇಶಿಸುವ ಕಾರ್ಡಿಯಾಲಜಿಯಲ್ಲಿ ಡಿಎಂ ಕೋರ್ಸ್ ಅನ್ನು ಡಾ. ಪದ್ಮಾವತಿ ಪರಿಚಯಿಸಿದರು.

1967 ರಲ್ಲಿ ಪದ್ಮಭೂಷಣ್ ಮತ್ತು 1992 ರಲ್ಲಿ ಪದ್ಮವಿಭೂಷಣ್ ಪ್ರಶಸ್ತಿ ಪಡೆದರು. ಅವರು ಹಾರ್ವರ್ಡ್ ಮೆಡಿಕಲ್ ಇಂಟರ್ನ್ಯಾಷನಲ್ ಅವಾರ್ಡ್, ಡಾ ಬಿ.ಸಿ.ರಾಯ್ ಪ್ರಶಸ್ತಿ ಮತ್ತು ಕಮಲಾ ಮೆನನ್ ರಿಸರ್ಚ್ ಅವಾರ್ಡ್ ಅನ್ನು ಸಹ ಪಡೆದರು. 1981 ರಲ್ಲಿ ಭಾರತ ಸರ್ಕಾರದಿಂದ ನಿವೃತ್ತಿಯಾದ ನಂತರ, ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ನ ಸ್ಥಾಪಕ ನಿರ್ದೇಶಕರಾಗಿದ್ದರು.

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದಿದ್ದರು.


ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...