Homeಮುಖಪುಟಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಕೊರೊನಾ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ನಿಧನ!

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದು ಪದ್ಮಾವತಿಯವರು ವಿ‍ಷಾದಿಸುತ್ತಿದ್ದರು.

- Advertisement -
- Advertisement -

‘ಗಾಡ್ ಮದರ್ ಆಫ್ ಕಾರ್ಡಿಯಾಲಜಿ’ ಎಂದು ಪ್ರಸಿದ್ಧವಾಗಿದ್ದ ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ಆಗಸ್ಟ್ 29 ರಂದು ಕೊರೊನಾ ಸೋಂಕಿನಿಂದ ನಿಧನರಾದರು ಎಂದು ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ತಿಳಿಸಿದೆ.

ಡಾ. ಪದ್ಮಾವತಿ ಶಿವರಾಮಕೃಷ್ಣ ಅಯ್ಯರ್ ಅವರನ್ನು ಡಾ.ಪದ್ಮಾವತಿ ಎಂದು ಪ್ರೀತಿಯಿಂದ ಕರೆಯಲಾಗುತ್ತಿತ್ತು. ಅವರು ತಮ್ಮ ಜೀವಿತದ ಕೊನೆಯವರೆಗೂ ಸಕ್ರಿಯರಾಗಿದ್ದುಕೊಂಡು, ರೋಗಿಗಳಿಗೆ ಮತ್ತು ವೈದ್ಯರಿಗೆ ಸಮಾನವಾಗಿ ಸಲಹೆ ನೀಡುತ್ತಿದ್ದರು. ಜೊತೆಗೆ ವೈದ್ಯಕೀಯ ನಿಯತಕಾಲಿಕಗಳಿಗೆ 300 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದರು.

1917 ರಲ್ಲಿ ಬರ್ಮಾದಲ್ಲಿ (ಈಗಿನ ಮ್ಯಾನ್ಮಾರ್) ಜನಿಸಿದ ಅವರು ರಂಗೂನ್ ವೈದ್ಯಕೀಯ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದ ಮೊದಲ ಮಹಿಳೆಯಾಗಿದ್ದರು.

ಇವರು ತನ್ನ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ, ಜಪಾನ್ 1942 ರಲ್ಲಿ ಬರ್ಮಾದ ಮೇಲೆ ಆಕ್ರಮಣ ಮಾಡಿತು. ಪದ್ಮಾವತಿ ತನ್ನ ತಾಯಿ ಮತ್ತು ನಾಲ್ಕು ಸಹೋದರಿಯರೊಂದಿಗೆ ಭಾರತಕ್ಕೆ ಬಂದಿದ್ದರು.

1949 ರಲ್ಲಿ, ಡಾ. ಪದ್ಮಾವತಿ ಲಂಡನ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್ ಮತ್ತು ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ ಸಹವರ್ತಿಯಾಗಿ ಲಂಡನ್‌ಗೆ ತೆರಳಿದರು. 1949 ರಲ್ಲಿ ಜಾನ್ಸ್ ಹಾಪ್ಕಿನ್ಸ್ ಯೂನಿವರ್ಸಿಟಿ ಡಿಪಾರ್ಟ್ಮೆಂಟ್ ಆಫ್ ಪೀಡಿಯಾಟ್ರಿಕ್ಸ್ ನೊಂದಿಗೆ ಫೆಲೋಶಿಪ್ ಪಡೆಯುವ ಮೊದಲು ಅವರು ಸ್ವೀಡನ್‌ನಲ್ಲಿ ಅಧ್ಯಯನ ಮಾಡಿದರು.

ಬಾಲ್ಟಿಮೋರ್‌ನಲ್ಲಿ, ಡಾ. ಪದ್ಮಾವತಿ ಅವರು ಡಾ. ಹೆಲೆನ್ ಟೌಸಿಗ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು, ‘ನೀಲಿ ಶಿಶುಗಳು’ ಅಥವಾ ಜನ್ಮಜಾತ ಹೃದಯ ದೋಷಗಳಿಂದ ಜನಿಸಿದ ಶಿಶುಗಳಿಗೆ ಮೊದಲು ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಭಾರತದ ಬಡವರು ವಾಡಿಕೆಯಂತೆ ಕೆಮ್ಮು, ಶೀತದಿಂದ ಬಳಲುತ್ತಿದ್ದಾರೆ, ಇದರಿಂದಾಗಿ ಕೊರೊನಾ ಪತ್ತೆ ಕಷ್ಟಕರವಾಗಿದೆ.

ಆಧುನಿಕ ಹೃದಯಶಾಸ್ತ್ರದ ಪ್ರವರ್ತಕ ಡಾ. ಪಾಲ್ ಡಡ್ಲಿ ವೈಟ್ ಅವರ ಅಡಿಯಲ್ಲಿ 1952 ರಲ್ಲಿ ಅವರು ಹಾರ್ವರ್ಡ್ ವೈದ್ಯಕೀಯ ಶಾಲೆಗೆ ಸೇರಿದರು.

1953 ರಲ್ಲಿ, ಡಾ. ಪದ್ಮಾವತಿ ಭಾರತಕ್ಕೆ ಮರಳಿ, ದೆಹಲಿಯ ಮಹಿಳಾ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಪ್ರಾರಂಭಿಸಿದರು. ಒಂದು ವರ್ಷದೊಳಗೆ ಮೆಡಿಸಿನ್ ಪ್ರಾಧ್ಯಾಪಕರಾಗಿ ಬಡ್ತಿ ಪಡೆದರು.

ಅವರು ರಾಕ್‌ಫೆಲ್ಲರ್ ಫೌಂಡೇಶನ್‌ನ ಅನುದಾನದೊಂದಿಗೆ ಉತ್ತರ ಭಾರತದ ಮೊದಲ ಹೃದಯ ಕ್ಯಾತಿಟರ್ಟೈಸೇಶನ್ ಲ್ಯಾಬ್ ಅನ್ನು ಸ್ಥಾಪಿಸಿದರು.

1967 ರಲ್ಲಿ, ಭಾರತ ಸರ್ಕಾರವು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ (ಎಂಎಎಂಸಿ) ನಿರ್ದೇಶಕಿ-ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡಿತು. ಅಲ್ಲಿ ಅವರು ಹೃದ್ರೋಗ ವಿಭಾಗವನ್ನೂ ಸ್ಥಾಪಿಸಿದರು. ಎಂಎಎಂಸಿಯಲ್ಲಿ 26 ವಿಭಾಗಗಳಿದ್ದು, ಸ್ನಾತಕೋತ್ತರ ಪದವೀಧರರನ್ನು ಪ್ರವೇಶಿಸುವ ಕಾರ್ಡಿಯಾಲಜಿಯಲ್ಲಿ ಡಿಎಂ ಕೋರ್ಸ್ ಅನ್ನು ಡಾ. ಪದ್ಮಾವತಿ ಪರಿಚಯಿಸಿದರು.

1967 ರಲ್ಲಿ ಪದ್ಮಭೂಷಣ್ ಮತ್ತು 1992 ರಲ್ಲಿ ಪದ್ಮವಿಭೂಷಣ್ ಪ್ರಶಸ್ತಿ ಪಡೆದರು. ಅವರು ಹಾರ್ವರ್ಡ್ ಮೆಡಿಕಲ್ ಇಂಟರ್ನ್ಯಾಷನಲ್ ಅವಾರ್ಡ್, ಡಾ ಬಿ.ಸಿ.ರಾಯ್ ಪ್ರಶಸ್ತಿ ಮತ್ತು ಕಮಲಾ ಮೆನನ್ ರಿಸರ್ಚ್ ಅವಾರ್ಡ್ ಅನ್ನು ಸಹ ಪಡೆದರು. 1981 ರಲ್ಲಿ ಭಾರತ ಸರ್ಕಾರದಿಂದ ನಿವೃತ್ತಿಯಾದ ನಂತರ, ದೆಹಲಿಯ ನ್ಯಾಷನಲ್ ಹಾರ್ಟ್ ಇನ್ಸ್ಟಿಟ್ಯೂಟ್ ನ ಸ್ಥಾಪಕ ನಿರ್ದೇಶಕರಾಗಿದ್ದರು.

ಹೃದಯ ಸಂಬಂಧಿ ಆಸ್ಪತ್ರೆಗಳು ಹೃದ್ರೋಗಗಳ ಚಿಕಿತ್ಸೆಯಲ್ಲಿ ದೈತ್ಯ ಪ್ರಗತಿಯನ್ನು ಸಾಧಿಸಿದ್ದರೂ, ಹೃದ್ರೋಗ ತಡೆಗಟ್ಟುವ ಅಂಶಗಳನ್ನು ಭಾರತದಲ್ಲಿ ಹೆಚ್ಚಾಗಿ ಕಡೆಗಣಿಸಲಾಗುತ್ತಿದೆ ಎಂದಿದ್ದರು.


ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...