Homeಕರೋನಾ ತಲ್ಲಣತಿರುಮಲ ತಿರುಪತಿ ದೇವಸ್ಥಾನದ 91 ಉದ್ಯೋಗಿಗಳು ಕೊರೊನಾ ಸೋಂಕಿತರು

ತಿರುಮಲ ತಿರುಪತಿ ದೇವಸ್ಥಾನದ 91 ಉದ್ಯೋಗಿಗಳು ಕೊರೊನಾ ಸೋಂಕಿತರು

ಜುಲೈ 9 ಮತ್ತು 10 ರ ವೇಳೆಗೆ ಕನಿಷ್ಠ 3,569 ಉದ್ಯೋಗಿಗಳನ್ನು ಪರೀಕ್ಷಿಸಲಾಯಿತು. ಅವರಲ್ಲಿ 91 ಮಂದಿಗೆ ಸೋಂಕು ದೃಢಪಟ್ಟಿರುವುದು ತಿಳಿದುಬಂದಿದೆ.

- Advertisement -
- Advertisement -

ತಿರುಮಲ ತಿರುಪತಿ ದೇವಸ್ಥಾನದ (TTD) 91 ಉದ್ಯೋಗಿಗಳಿಗೆ ಈವರೆಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಭಾನುವಾರ (ಜುಲೈ 12) ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆಂಧ್ರಪ್ರದೇಶದ ಅಲಿಪಿರಿ ಮತ್ತು ತಿರುಮಲಾದಲ್ಲಿ ನೌಕರರು ಮತ್ತು ಸಂದರ್ಶಕರ ಮೇಲೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಜುಲೈ 9 ಮತ್ತು 10 ರ ವೇಳೆಗೆ ಕನಿಷ್ಠ 3,569 ಉದ್ಯೋಗಿಗಳನ್ನು ಪರೀಕ್ಷಿಸಲಾಯಿತು. ಅವರಲ್ಲಿ 91 ಮಂದಿಗೆ ಸೋಂಕು ದೃಢಪಟ್ಟಿರುವುದು ತಿಳಿದುಬಂದಿದೆ.

ಹೆಚ್ಚಿನ ರೋಗಿಗಳು ವಿಶೇಷ ಸಂರಕ್ಷಣಾ ಪಡೆ (ಎಸ್‌ಪಿಎಫ್) ಸದಸ್ಯರಾಗಿದ್ದು, ಅವರಲ್ಲಿ ಹೆಚ್ಚಿನವರು ಲಕ್ಷಣರಹಿತರು ಎಂದು ಅಧಿಕಾರಿ ತಿಳಿಸಿದ್ದಾರೆ.

“ಅವರಲ್ಲಿ ಕೆಲವರು ಅನಂತಪುರ ಅಥವಾ ಕರ್ನೂಲ್‌ಗೆ ಹೋಗಿ ಹಿಂದಿರುಗಿದ್ದರು. ಅನೇಕ ಎಸ್‌ಪಿಎಫ್ ಸಿಬ್ಬಂದಿಗಳು ನಿಕಟ ಪ್ರದೇಶಗಳಲ್ಲಿ ವಾಸಿಸುತ್ತಿರುವುದರಿಂದ, ಅವರಲ್ಲಿ ಅನೇಕರು ಸೋಂಕಿಗೆ ಒಳಗಾಗಿದ್ದಾರೆ ಎಂದು ಅವರು ದಿ ನ್ಯೂಸ್ ಮಿನಿಟ್ ಗೆ ಹೇಳಿದ್ದಾರೆ.

ಜೂನ್ 18 ಮತ್ತು ಜೂನ್ 25 ರ ನಡುವೆ 700 ಸಂದರ್ಶಕರನ್ನು ಪರೀಕ್ಷಿಸಲಾಗಿದೆ ಎಂದು TTD ಹೇಳಿದೆ. ಆದರೆ ಅವರಲ್ಲಿ ಸೋಂಕು ಕಂಡುಬಂದಿಲ್ಲ. ಜುಲೈ 1 ಮತ್ತು ಜುಲೈ 7 ರ ನಡುವೆ ಪರೀಕ್ಷಿಸಿದ 1,943 ಸಂದರ್ಶಕರಿಗೆ ಫಲಿತಾಂಶಗಳು ನಕಾರಾತ್ಮಕವಾಗಿ ಬಂದಿದೆ.

ಲಾಕ್ ಡೌನ್ ನಂತರ ಜೂನ್ 11 ರಿಂದ ಯಾತ್ರಾರ್ಥಿಗಳಿಗಾಗಿ ಈ ದೇವಾಲಯವನ್ನು ಮತ್ತೆ ತೆರೆಯಲಾಯಿತು. ಪ್ರತಿದಿನ ಸುಮಾರು 50,000 ಲಕ್ಷ ಪ್ರವಾಸಿಗರನ್ನು ಬರುತ್ತಿದ್ದರು. ಕೊರೊನಾ ಬಿಕ್ಕಟ್ಟಿನ ದೃಷ್ಟಿಯಿಂದ ಈ ಸಂಖ್ಯೆಯನ್ನು 6,000 ಕ್ಕೆ ಇಳಿಸಲಾಯಿತು. ನಂತರ ಅದನ್ನು 12,000 ಕ್ಕೆ ಹೆಚ್ಚಿಸಲಾಯಿತು.


ಇದನ್ನೂ ಓದಿ: ಪುಲ್ವಾಮ ಜಿಲ್ಲೆಯ ದೇವಸ್ಥಾನದ ಜೀರ್ಣೋದ್ದಾರಕ್ಕೆ ಜೊತೆಯಾದ ಮುಸ್ಲೀಮರು


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...