Homeಆರೋಗ್ಯಅಮೆರಿಕಾದ ಮೃಗಾಲಯದ ಹುಲಿಗೆ ಕೊರೊನಾ ಸೋಂಕು; ಸಾಕು ಪ್ರಾಣಿಗಳಿಗೆ ಸೋಂಕು ತಗುಲಬಲ್ಲದೆ?

ಅಮೆರಿಕಾದ ಮೃಗಾಲಯದ ಹುಲಿಗೆ ಕೊರೊನಾ ಸೋಂಕು; ಸಾಕು ಪ್ರಾಣಿಗಳಿಗೆ ಸೋಂಕು ತಗುಲಬಲ್ಲದೆ?

- Advertisement -
- Advertisement -

ಅಮೆರಿಕಾದ ನ್ಯೂಯಾರ್ಕ್ ನಗರದ ಬ್ರಾಂಕ್ಸ್ ಮೃಗಾಲಯದ ಹುಲಿಯೊಂದಕ್ಕೆ ಕೋವಿಡ್-19 ಸೋಂಕು ತಗಲಿರುವುದು ಧೃಢಪಟ್ಟಿದೆ. ಇತರ ಆರು ಹುಲಿಗಳು ಕೂಡ ಸೋಂಕಿನ ಲಕ್ಷಣಗಳನ್ನು ಹೊಂದಿವೆ ಎಂದು ಅಮೆರಿಕಾದ ಕೃಷಿ ಇಲಾಖೆ ಭಾನುವಾರ ಹೇಳಿದೆ.

“ಇದೆ ಮೊದಲ ಬಾರಿಗೆ ಮನುಷ್ಯನಿಂದ ಕೋವಿಡ್-19 ಸೋಂಕು (ಕಾಡು) ಪ್ರಾಣಿಗಳಿಗೆ ತಗಲುವುದು ತಿಳಿದುಬಂದಿದೆ” ಎಂದು ಬ್ರಾಂಕ್ಸ್ ಮೃಗಾಲಯದ ಮುಖ್ಯ ಪಶುವೈದ್ಯ ಪಾಲ್ ಕ್ಯಾಲ್ ಹೇಳಿದ್ದಾರೆ. ಯಾವುದೇ ಲಕ್ಷಣಗಳನ್ನು ಹೊಂದಿಲ್ಲದ ಕೊರೊನ ಸೋಂಕಿತ ಮೃಗಾಲಯದ ಸಿಬ್ಬಂದಿಯಿಂದ ಹುಲಿಗೆ ಸೋಂಕು ತಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಆ ವ್ಯಕ್ತಿ ಯಾರು ಎಂದು ತಿಳಿಯಲಾಗಿಲ್ಲ. ಮಾರ್ಚ್ 16ರಿಂದಲೇ ಮೃಗಾಲಯವನ್ನು ಸಾರ್ವಜನಿಕರಿಗೆ ಮುಚ್ಚಲಾಗಿತ್ತು.

ಈ ಹಿಂದೆ ನಾಯಿಗಳು ಮತ್ತು ಬೆಕ್ಕುಗಳು ಸಾರ್ಸ್ ಸೋಂಕಿಗೆ ಗುರಿಯಾಗುವುದನ್ನು ಗುರುತಿಸಲಾಗಿತ್ತು. ಈ ನಿಟ್ಟಿನಲ್ಲಿ ಮನುಷ್ಯನಿಂದ ಸಾಕು ಮತ್ತು ಕಾಡುಪ್ರಾಣಿಗಳಿಗೆ ಕೋವಿಡ್-19 ಸೋಂಕು ಹರಡುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಬೆಕ್ಕುಗಳು ತಮ್ಮ ನಡುವೆ  ಕೋವಿಡ್-19 ಸೋಂಕು ಹರಡಿಕೊಳ್ಳುತ್ತವೆ: ಅಧ್ಯಯನ

ಚೈನಾದ ಸಂಶೋಧಕರು ನಡೆಸಿರುವ ಅಧ್ಯಯನದಲ್ಲಿ ಈ ಹೊಸ ಕೊರೊನಾ ವೈರಸ್ ಬೆಕ್ಕುಗಳಿಗೆ ಹರಡುವ ಸಾಧ್ಯತೆ ಇದೆ ಮತ್ತು ಬೆಕ್ಕುಗಳು ಅವುಗಳ ನಡುವೆ ಈ ಸೋಂಕನ್ನು ಹಬ್ಬಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು.

ಹರ್ಬಿನ್ ಪಶುವೈದ್ಯ ಸಂಶೋಧನಾ ಸಂಸ್ಥೆಯ ಸಂಶೋಧಕರು ಬೆಕ್ಕುಗಳು ಕೊರೊನ ಸೋಂಕಿಗೆ ಒಳಗಾಗುವ ಸಾಧ್ಯತೆ ಇದು ಎಂದು ತಿಳಿಸಿದ್ದರಲ್ಲದೆ, ನಾಯಿಗಳು, ಕೋಳಿಗಳು ಮತ್ತು ಹಂದಿಗಳು ಈ ರೋಗಕ್ಕೆ ಒಳಗಾಗುವ ಸಾಧ್ಯತೆ ಇಲ್ಲ ಎಂದು ಅಧ್ಯಯನ ತಿಳಿಸುತ್ತದೆ ಎಂದಿದ್ದರು.

ಬೆಕ್ಕುಗಳು ಕೂಡ ಕೊರೊನಾ ಸೋಂಕಿಗೆ ಗುರಿಯಾದರೆ ತಮ್ಮ ಸಂತತಿ ನಡುವೆ ಈ ಸೋಂಕನ್ನು ಹಬ್ಬುವುದಕ್ಕೆ ಅಧ್ಯಯನ ಫಲಿತಾಂಶ ನೀಡಿದೆ ಹೊರತು ಬೆಕ್ಕುಗಳಿಂದ ಮನುಷ್ಯರಿಗೆ ಸೋಂಕು ಹಬ್ಬುವುದರ ಬಗ್ಗೆ ಯಾವುದೇ ನೇರ ಸಾಕ್ಷ್ಯ ದೊರೆತಿಲ್ಲ ಎಂದು ಚೈನಾ ಕೃಷಿ ವಿಜ್ಞಾನಗಳ ಪ್ರಾಧಿಕಾರ ಹೇಳಿತ್ತು.

ಬೆಲ್ಜಿಯಂನಲ್ಲಿ ಇತ್ತೀಚೆಗಷ್ಟೇ ಬೆಕ್ಕೊಂದು ತನ್ನ ಮಾಲೀಕನಿಂದ ಕೊರೊನಾ ಸೋಂಕಿಗೆ ಗುರಿಯಾಗಿತ್ತು. ಈ ನಿಟ್ಟಿನಲ್ಲಿ ಅಧ್ಯಯನಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...