Homeಆರೋಗ್ಯಅಮೆರಿಕಾದ ಮೃಗಾಲಯದ ಹುಲಿಗೆ ಕೊರೊನಾ ಸೋಂಕು; ಸಾಕು ಪ್ರಾಣಿಗಳಿಗೆ ಸೋಂಕು ತಗುಲಬಲ್ಲದೆ?

ಅಮೆರಿಕಾದ ಮೃಗಾಲಯದ ಹುಲಿಗೆ ಕೊರೊನಾ ಸೋಂಕು; ಸಾಕು ಪ್ರಾಣಿಗಳಿಗೆ ಸೋಂಕು ತಗುಲಬಲ್ಲದೆ?

- Advertisement -
- Advertisement -

ಅಮೆರಿಕಾದ ನ್ಯೂಯಾರ್ಕ್ ನಗರದ ಬ್ರಾಂಕ್ಸ್ ಮೃಗಾಲಯದ ಹುಲಿಯೊಂದಕ್ಕೆ ಕೋವಿಡ್-19 ಸೋಂಕು ತಗಲಿರುವುದು ಧೃಢಪಟ್ಟಿದೆ. ಇತರ ಆರು ಹುಲಿಗಳು ಕೂಡ ಸೋಂಕಿನ ಲಕ್ಷಣಗಳನ್ನು ಹೊಂದಿವೆ ಎಂದು ಅಮೆರಿಕಾದ ಕೃಷಿ ಇಲಾಖೆ ಭಾನುವಾರ ಹೇಳಿದೆ.

“ಇದೆ ಮೊದಲ ಬಾರಿಗೆ ಮನುಷ್ಯನಿಂದ ಕೋವಿಡ್-19 ಸೋಂಕು (ಕಾಡು) ಪ್ರಾಣಿಗಳಿಗೆ ತಗಲುವುದು ತಿಳಿದುಬಂದಿದೆ” ಎಂದು ಬ್ರಾಂಕ್ಸ್ ಮೃಗಾಲಯದ ಮುಖ್ಯ ಪಶುವೈದ್ಯ ಪಾಲ್ ಕ್ಯಾಲ್ ಹೇಳಿದ್ದಾರೆ. ಯಾವುದೇ ಲಕ್ಷಣಗಳನ್ನು ಹೊಂದಿಲ್ಲದ ಕೊರೊನ ಸೋಂಕಿತ ಮೃಗಾಲಯದ ಸಿಬ್ಬಂದಿಯಿಂದ ಹುಲಿಗೆ ಸೋಂಕು ತಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಆ ವ್ಯಕ್ತಿ ಯಾರು ಎಂದು ತಿಳಿಯಲಾಗಿಲ್ಲ. ಮಾರ್ಚ್ 16ರಿಂದಲೇ ಮೃಗಾಲಯವನ್ನು ಸಾರ್ವಜನಿಕರಿಗೆ ಮುಚ್ಚಲಾಗಿತ್ತು.

ಈ ಹಿಂದೆ ನಾಯಿಗಳು ಮತ್ತು ಬೆಕ್ಕುಗಳು ಸಾರ್ಸ್ ಸೋಂಕಿಗೆ ಗುರಿಯಾಗುವುದನ್ನು ಗುರುತಿಸಲಾಗಿತ್ತು. ಈ ನಿಟ್ಟಿನಲ್ಲಿ ಮನುಷ್ಯನಿಂದ ಸಾಕು ಮತ್ತು ಕಾಡುಪ್ರಾಣಿಗಳಿಗೆ ಕೋವಿಡ್-19 ಸೋಂಕು ಹರಡುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಬೆಕ್ಕುಗಳು ತಮ್ಮ ನಡುವೆ  ಕೋವಿಡ್-19 ಸೋಂಕು ಹರಡಿಕೊಳ್ಳುತ್ತವೆ: ಅಧ್ಯಯನ

ಚೈನಾದ ಸಂಶೋಧಕರು ನಡೆಸಿರುವ ಅಧ್ಯಯನದಲ್ಲಿ ಈ ಹೊಸ ಕೊರೊನಾ ವೈರಸ್ ಬೆಕ್ಕುಗಳಿಗೆ ಹರಡುವ ಸಾಧ್ಯತೆ ಇದೆ ಮತ್ತು ಬೆಕ್ಕುಗಳು ಅವುಗಳ ನಡುವೆ ಈ ಸೋಂಕನ್ನು ಹಬ್ಬಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು.

ಹರ್ಬಿನ್ ಪಶುವೈದ್ಯ ಸಂಶೋಧನಾ ಸಂಸ್ಥೆಯ ಸಂಶೋಧಕರು ಬೆಕ್ಕುಗಳು ಕೊರೊನ ಸೋಂಕಿಗೆ ಒಳಗಾಗುವ ಸಾಧ್ಯತೆ ಇದು ಎಂದು ತಿಳಿಸಿದ್ದರಲ್ಲದೆ, ನಾಯಿಗಳು, ಕೋಳಿಗಳು ಮತ್ತು ಹಂದಿಗಳು ಈ ರೋಗಕ್ಕೆ ಒಳಗಾಗುವ ಸಾಧ್ಯತೆ ಇಲ್ಲ ಎಂದು ಅಧ್ಯಯನ ತಿಳಿಸುತ್ತದೆ ಎಂದಿದ್ದರು.

ಬೆಕ್ಕುಗಳು ಕೂಡ ಕೊರೊನಾ ಸೋಂಕಿಗೆ ಗುರಿಯಾದರೆ ತಮ್ಮ ಸಂತತಿ ನಡುವೆ ಈ ಸೋಂಕನ್ನು ಹಬ್ಬುವುದಕ್ಕೆ ಅಧ್ಯಯನ ಫಲಿತಾಂಶ ನೀಡಿದೆ ಹೊರತು ಬೆಕ್ಕುಗಳಿಂದ ಮನುಷ್ಯರಿಗೆ ಸೋಂಕು ಹಬ್ಬುವುದರ ಬಗ್ಗೆ ಯಾವುದೇ ನೇರ ಸಾಕ್ಷ್ಯ ದೊರೆತಿಲ್ಲ ಎಂದು ಚೈನಾ ಕೃಷಿ ವಿಜ್ಞಾನಗಳ ಪ್ರಾಧಿಕಾರ ಹೇಳಿತ್ತು.

ಬೆಲ್ಜಿಯಂನಲ್ಲಿ ಇತ್ತೀಚೆಗಷ್ಟೇ ಬೆಕ್ಕೊಂದು ತನ್ನ ಮಾಲೀಕನಿಂದ ಕೊರೊನಾ ಸೋಂಕಿಗೆ ಗುರಿಯಾಗಿತ್ತು. ಈ ನಿಟ್ಟಿನಲ್ಲಿ ಅಧ್ಯಯನಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...