Homeಆರೋಗ್ಯಅಮೆರಿಕಾದ ಮೃಗಾಲಯದ ಹುಲಿಗೆ ಕೊರೊನಾ ಸೋಂಕು; ಸಾಕು ಪ್ರಾಣಿಗಳಿಗೆ ಸೋಂಕು ತಗುಲಬಲ್ಲದೆ?

ಅಮೆರಿಕಾದ ಮೃಗಾಲಯದ ಹುಲಿಗೆ ಕೊರೊನಾ ಸೋಂಕು; ಸಾಕು ಪ್ರಾಣಿಗಳಿಗೆ ಸೋಂಕು ತಗುಲಬಲ್ಲದೆ?

- Advertisement -
- Advertisement -

ಅಮೆರಿಕಾದ ನ್ಯೂಯಾರ್ಕ್ ನಗರದ ಬ್ರಾಂಕ್ಸ್ ಮೃಗಾಲಯದ ಹುಲಿಯೊಂದಕ್ಕೆ ಕೋವಿಡ್-19 ಸೋಂಕು ತಗಲಿರುವುದು ಧೃಢಪಟ್ಟಿದೆ. ಇತರ ಆರು ಹುಲಿಗಳು ಕೂಡ ಸೋಂಕಿನ ಲಕ್ಷಣಗಳನ್ನು ಹೊಂದಿವೆ ಎಂದು ಅಮೆರಿಕಾದ ಕೃಷಿ ಇಲಾಖೆ ಭಾನುವಾರ ಹೇಳಿದೆ.

“ಇದೆ ಮೊದಲ ಬಾರಿಗೆ ಮನುಷ್ಯನಿಂದ ಕೋವಿಡ್-19 ಸೋಂಕು (ಕಾಡು) ಪ್ರಾಣಿಗಳಿಗೆ ತಗಲುವುದು ತಿಳಿದುಬಂದಿದೆ” ಎಂದು ಬ್ರಾಂಕ್ಸ್ ಮೃಗಾಲಯದ ಮುಖ್ಯ ಪಶುವೈದ್ಯ ಪಾಲ್ ಕ್ಯಾಲ್ ಹೇಳಿದ್ದಾರೆ. ಯಾವುದೇ ಲಕ್ಷಣಗಳನ್ನು ಹೊಂದಿಲ್ಲದ ಕೊರೊನ ಸೋಂಕಿತ ಮೃಗಾಲಯದ ಸಿಬ್ಬಂದಿಯಿಂದ ಹುಲಿಗೆ ಸೋಂಕು ತಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಆ ವ್ಯಕ್ತಿ ಯಾರು ಎಂದು ತಿಳಿಯಲಾಗಿಲ್ಲ. ಮಾರ್ಚ್ 16ರಿಂದಲೇ ಮೃಗಾಲಯವನ್ನು ಸಾರ್ವಜನಿಕರಿಗೆ ಮುಚ್ಚಲಾಗಿತ್ತು.

ಈ ಹಿಂದೆ ನಾಯಿಗಳು ಮತ್ತು ಬೆಕ್ಕುಗಳು ಸಾರ್ಸ್ ಸೋಂಕಿಗೆ ಗುರಿಯಾಗುವುದನ್ನು ಗುರುತಿಸಲಾಗಿತ್ತು. ಈ ನಿಟ್ಟಿನಲ್ಲಿ ಮನುಷ್ಯನಿಂದ ಸಾಕು ಮತ್ತು ಕಾಡುಪ್ರಾಣಿಗಳಿಗೆ ಕೋವಿಡ್-19 ಸೋಂಕು ಹರಡುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಬೆಕ್ಕುಗಳು ತಮ್ಮ ನಡುವೆ  ಕೋವಿಡ್-19 ಸೋಂಕು ಹರಡಿಕೊಳ್ಳುತ್ತವೆ: ಅಧ್ಯಯನ

ಚೈನಾದ ಸಂಶೋಧಕರು ನಡೆಸಿರುವ ಅಧ್ಯಯನದಲ್ಲಿ ಈ ಹೊಸ ಕೊರೊನಾ ವೈರಸ್ ಬೆಕ್ಕುಗಳಿಗೆ ಹರಡುವ ಸಾಧ್ಯತೆ ಇದೆ ಮತ್ತು ಬೆಕ್ಕುಗಳು ಅವುಗಳ ನಡುವೆ ಈ ಸೋಂಕನ್ನು ಹಬ್ಬಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು.

ಹರ್ಬಿನ್ ಪಶುವೈದ್ಯ ಸಂಶೋಧನಾ ಸಂಸ್ಥೆಯ ಸಂಶೋಧಕರು ಬೆಕ್ಕುಗಳು ಕೊರೊನ ಸೋಂಕಿಗೆ ಒಳಗಾಗುವ ಸಾಧ್ಯತೆ ಇದು ಎಂದು ತಿಳಿಸಿದ್ದರಲ್ಲದೆ, ನಾಯಿಗಳು, ಕೋಳಿಗಳು ಮತ್ತು ಹಂದಿಗಳು ಈ ರೋಗಕ್ಕೆ ಒಳಗಾಗುವ ಸಾಧ್ಯತೆ ಇಲ್ಲ ಎಂದು ಅಧ್ಯಯನ ತಿಳಿಸುತ್ತದೆ ಎಂದಿದ್ದರು.

ಬೆಕ್ಕುಗಳು ಕೂಡ ಕೊರೊನಾ ಸೋಂಕಿಗೆ ಗುರಿಯಾದರೆ ತಮ್ಮ ಸಂತತಿ ನಡುವೆ ಈ ಸೋಂಕನ್ನು ಹಬ್ಬುವುದಕ್ಕೆ ಅಧ್ಯಯನ ಫಲಿತಾಂಶ ನೀಡಿದೆ ಹೊರತು ಬೆಕ್ಕುಗಳಿಂದ ಮನುಷ್ಯರಿಗೆ ಸೋಂಕು ಹಬ್ಬುವುದರ ಬಗ್ಗೆ ಯಾವುದೇ ನೇರ ಸಾಕ್ಷ್ಯ ದೊರೆತಿಲ್ಲ ಎಂದು ಚೈನಾ ಕೃಷಿ ವಿಜ್ಞಾನಗಳ ಪ್ರಾಧಿಕಾರ ಹೇಳಿತ್ತು.

ಬೆಲ್ಜಿಯಂನಲ್ಲಿ ಇತ್ತೀಚೆಗಷ್ಟೇ ಬೆಕ್ಕೊಂದು ತನ್ನ ಮಾಲೀಕನಿಂದ ಕೊರೊನಾ ಸೋಂಕಿಗೆ ಗುರಿಯಾಗಿತ್ತು. ಈ ನಿಟ್ಟಿನಲ್ಲಿ ಅಧ್ಯಯನಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...