Homeಕರೋನಾ ತಲ್ಲಣಕೊರೊನಾ, ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಂತೆ CITU, KPRS, AIAWU ಮನವಿ

ಕೊರೊನಾ, ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಂತೆ CITU, KPRS, AIAWU ಮನವಿ

- Advertisement -
- Advertisement -

ದೇಶದಾದ್ಯಂತ ಬಿಗಡಾಯಿಸುತ್ತಿರುವ ಆರ್ಥಿಕ ಬಿಕ್ಕಟ್ಟು ಹಾಗೂ ಕೊರೊನಾ ಸಂಕಷ್ಠವನ್ನು ಜನತೆ ಅತ್ಯಂತ ಗಂಭೀರವಾಗಿ ಎದುರಿಸುತ್ತಿರುವಾಗ ಸರಕಾರ ಜನರ ಜೊತೆ ನಿಂತು ದೇಶದ ಆರ್ಥಿಕ ಸಂಕಷ್ಠ ಹಾಗೂ ಆರೋಗ್ಯ ರಕ್ಷಣೆಗೆ ನಿಲ್ಲುವುದರ ಬದಲು ಕಾರ್ಪೋರೇಟ್ ಕಂಪನಿಗಳ ಲೂಟಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿರುವ ಸೆಂಟರ್ ಅಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಕರ್ನಾಟಕ ಪ್ರಾಂತ ರೈತ ಸಂಘ (KPRS) ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (AIAWU) ಅಂತಹ ನೀತಿಗಳನ್ನು ತಕ್ಷಣವೇ ಕೈಬಿಡುವಂತೆ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿವೆ.

ಮೂರು ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು, ಆರ್ಥಿಕ ಕುಸಿತ ಮತ್ತು ಕೊರೊನಾ ಬಿಕ್ಕಟ್ಟಿನ ಪರಿಸ್ಥಿಯಲ್ಲಿ ಕೆಲವು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರಧಾನ ಮಂತ್ರಿಗೆ ಹಕ್ಕೊತ್ತಾಯ ಮಾಡಿದೆ.

ಹಕ್ಕೋತ್ತಾಯವು, ವಿಶೇಷ ಪ್ಯಾಕೇಜ್ ಘೋಷಿಸಬೇಕು, ಜನದ್ರೋಹಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಒಳಿಸಬೇಕು, ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ಸಂಸ್ಥೆಗಳ ಖಾಸಗೀಕರಣವನ್ನು ತಡೆಯಬೇಕೆಂದು ಆಗ್ರಹಿಸಿದೆ.

ಜಂಟಿ ಕ್ರಿಯಾ ಸಮಿತಿಯ ಹಕ್ಕೊತ್ತಾಯಗಳು :

  • ಕೊರೊನಾ ವೈರಾಣುವನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ನಾಗರೀಕರುಗಳಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆ ದೊರೆಯುವಂತೆ ಕ್ರಮವಹಿಸಬೇಕು. ಇದಕ್ಕಾಗಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇ 3 ರಷ್ಠು ಅಂಶವನ್ನು ವೆಚ್ಚ ಮಾಡಲು ಕ್ರಮವಹಿಸಬೇಕು.
  • ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲಾ ಕುಟುಂಬಗಳಿಗೆ ಕನಿಷ್ಟ ಕೊರೊನಾ ಸಮಸ್ಯೆ ಇತ್ಯರ್ಥವಾಗುವವರೆಗೆ ಮಾಸಿಕ 7,500 ರೂಗಳ ನೆರವು ಘೋಷಿಸಬೇಕು.
  • ಈ ಎಲ್ಲಾ ಕುಟುಂಬಗಳ ಸದಸ್ಯರಿಗೆ, ಮಾಸಿಕ ತಲಾ 10 ಕೆಜಿ ಸಮಗ್ರ ಆಹಾರ ಸಾಮಗ್ರಿಗಳನ್ನು ಒದಗಿಸಬೇಕು ಹಾಗೂ ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಕಿಟ್‌ನ್ನು ಒದಗಿಸಬೇಕು.
  • ನಗರ ಹಾಗೂ ಗ್ರಾಮೀಣ ಪ್ರದೇಶದ ಉದ್ಯೋಗ ಕೇಳುವ ಎಲ್ಲಾ ಜನತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ತಲಾ ಕುಟುಂಬಕ್ಕೆ ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು ಕನಿಷ್ಟ 600 ರೂಗಳಿಗೆ ಹೆಚ್ಚಿಸಬೇಕು.
  • ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂಗಳನ್ನು ಒದಗಿಸಬೇಕು.
  • ಎಲ್ಲ ರೀತಿಯ ಕಾರ್ಮಿಕರುಗಳಿಗೆ ಲಾಕ್‌ಡೌನ್ ಅವಧಿಯ ವೇತನವು ದೊರೆಯುವಂತೆ ಅಗತ್ಯ ಕ್ರಮವಹಿಸಬೇಕು. ಕಾರ್ಮಿಕ ಕಾಯ್ದೆಗಳ ದುರ್ಬಲಗೊಳಿಸುವಿಕೆಯನ್ನು ತಕ್ಷಣ ತಡೆಯಬೇಕು.
  • ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ವಲಯದ ಸಂಸ್ಥೆಗಳ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು.
  • ವ್ಯವಸಾಯವನ್ನು ಕಾರ್ಪೋರೇಟ್ ಕಂಪನಿಗಳಿಗೆ ವಹಿಸುವ ಎಲ್ಲಾ ಭೂ ಹಾಗೂ ವ್ಯವಸಾಯ ಸಂಬಂಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು.
  • ಸಾರ್ವಜನಿಕರನ್ನು ಕಾಳಸಂತೆಯ ಲೂಟಿಕೋರತನಕ್ಕೆ ಒಳಪಡಿಸುವ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ-2020 ನ್ನು ವಾಪಾಸು ಪಡೆಯಬೇಕು.

ಇದನ್ನೂ ಓದಿ: ಮಾಸ್ಕ್ ಧರಿಸದ ಕಾರಣಕ್ಕೆ ಬಂಧನಕ್ಕೊಳಗಾದ ದಲಿತ ಯುವಕ ಪೊಲೀಸ್ ಕಸ್ಟಡಿಯಲ್ಲಿ ಸಾವು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...