Homeಕರೋನಾ ತಲ್ಲಣಕೊರೊನಾ, ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಂತೆ CITU, KPRS, AIAWU ಮನವಿ

ಕೊರೊನಾ, ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಂತೆ CITU, KPRS, AIAWU ಮನವಿ

- Advertisement -
- Advertisement -

ದೇಶದಾದ್ಯಂತ ಬಿಗಡಾಯಿಸುತ್ತಿರುವ ಆರ್ಥಿಕ ಬಿಕ್ಕಟ್ಟು ಹಾಗೂ ಕೊರೊನಾ ಸಂಕಷ್ಠವನ್ನು ಜನತೆ ಅತ್ಯಂತ ಗಂಭೀರವಾಗಿ ಎದುರಿಸುತ್ತಿರುವಾಗ ಸರಕಾರ ಜನರ ಜೊತೆ ನಿಂತು ದೇಶದ ಆರ್ಥಿಕ ಸಂಕಷ್ಠ ಹಾಗೂ ಆರೋಗ್ಯ ರಕ್ಷಣೆಗೆ ನಿಲ್ಲುವುದರ ಬದಲು ಕಾರ್ಪೋರೇಟ್ ಕಂಪನಿಗಳ ಲೂಟಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿರುವ ಸೆಂಟರ್ ಅಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಕರ್ನಾಟಕ ಪ್ರಾಂತ ರೈತ ಸಂಘ (KPRS) ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (AIAWU) ಅಂತಹ ನೀತಿಗಳನ್ನು ತಕ್ಷಣವೇ ಕೈಬಿಡುವಂತೆ ಪ್ರಧಾನ ಮಂತ್ರಿಯನ್ನು ಒತ್ತಾಯಿಸಿವೆ.

ಮೂರು ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು, ಆರ್ಥಿಕ ಕುಸಿತ ಮತ್ತು ಕೊರೊನಾ ಬಿಕ್ಕಟ್ಟಿನ ಪರಿಸ್ಥಿಯಲ್ಲಿ ಕೆಲವು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರಧಾನ ಮಂತ್ರಿಗೆ ಹಕ್ಕೊತ್ತಾಯ ಮಾಡಿದೆ.

ಹಕ್ಕೋತ್ತಾಯವು, ವಿಶೇಷ ಪ್ಯಾಕೇಜ್ ಘೋಷಿಸಬೇಕು, ಜನದ್ರೋಹಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಒಳಿಸಬೇಕು, ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ಸಂಸ್ಥೆಗಳ ಖಾಸಗೀಕರಣವನ್ನು ತಡೆಯಬೇಕೆಂದು ಆಗ್ರಹಿಸಿದೆ.

ಜಂಟಿ ಕ್ರಿಯಾ ಸಮಿತಿಯ ಹಕ್ಕೊತ್ತಾಯಗಳು :

  • ಕೊರೊನಾ ವೈರಾಣುವನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ನಾಗರೀಕರುಗಳಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆ ದೊರೆಯುವಂತೆ ಕ್ರಮವಹಿಸಬೇಕು. ಇದಕ್ಕಾಗಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇ 3 ರಷ್ಠು ಅಂಶವನ್ನು ವೆಚ್ಚ ಮಾಡಲು ಕ್ರಮವಹಿಸಬೇಕು.
  • ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲಾ ಕುಟುಂಬಗಳಿಗೆ ಕನಿಷ್ಟ ಕೊರೊನಾ ಸಮಸ್ಯೆ ಇತ್ಯರ್ಥವಾಗುವವರೆಗೆ ಮಾಸಿಕ 7,500 ರೂಗಳ ನೆರವು ಘೋಷಿಸಬೇಕು.
  • ಈ ಎಲ್ಲಾ ಕುಟುಂಬಗಳ ಸದಸ್ಯರಿಗೆ, ಮಾಸಿಕ ತಲಾ 10 ಕೆಜಿ ಸಮಗ್ರ ಆಹಾರ ಸಾಮಗ್ರಿಗಳನ್ನು ಒದಗಿಸಬೇಕು ಹಾಗೂ ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಕಿಟ್‌ನ್ನು ಒದಗಿಸಬೇಕು.
  • ನಗರ ಹಾಗೂ ಗ್ರಾಮೀಣ ಪ್ರದೇಶದ ಉದ್ಯೋಗ ಕೇಳುವ ಎಲ್ಲಾ ಜನತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ತಲಾ ಕುಟುಂಬಕ್ಕೆ ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು ಕನಿಷ್ಟ 600 ರೂಗಳಿಗೆ ಹೆಚ್ಚಿಸಬೇಕು.
  • ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂಗಳನ್ನು ಒದಗಿಸಬೇಕು.
  • ಎಲ್ಲ ರೀತಿಯ ಕಾರ್ಮಿಕರುಗಳಿಗೆ ಲಾಕ್‌ಡೌನ್ ಅವಧಿಯ ವೇತನವು ದೊರೆಯುವಂತೆ ಅಗತ್ಯ ಕ್ರಮವಹಿಸಬೇಕು. ಕಾರ್ಮಿಕ ಕಾಯ್ದೆಗಳ ದುರ್ಬಲಗೊಳಿಸುವಿಕೆಯನ್ನು ತಕ್ಷಣ ತಡೆಯಬೇಕು.
  • ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ವಲಯದ ಸಂಸ್ಥೆಗಳ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು.
  • ವ್ಯವಸಾಯವನ್ನು ಕಾರ್ಪೋರೇಟ್ ಕಂಪನಿಗಳಿಗೆ ವಹಿಸುವ ಎಲ್ಲಾ ಭೂ ಹಾಗೂ ವ್ಯವಸಾಯ ಸಂಬಂಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು.
  • ಸಾರ್ವಜನಿಕರನ್ನು ಕಾಳಸಂತೆಯ ಲೂಟಿಕೋರತನಕ್ಕೆ ಒಳಪಡಿಸುವ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ-2020 ನ್ನು ವಾಪಾಸು ಪಡೆಯಬೇಕು.

ಇದನ್ನೂ ಓದಿ: ಮಾಸ್ಕ್ ಧರಿಸದ ಕಾರಣಕ್ಕೆ ಬಂಧನಕ್ಕೊಳಗಾದ ದಲಿತ ಯುವಕ ಪೊಲೀಸ್ ಕಸ್ಟಡಿಯಲ್ಲಿ ಸಾವು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...