Homeಮುಖಪುಟಕೊರೊನಾ ಪ್ರಧಾನವಾಗಿ ಹರಡುವುದು ಗಾಳಿಯ ಮೂಲಕವೇ: 10 ಪುರಾವೆ ನೀಡಿದ ತಜ್ಞರು

ಕೊರೊನಾ ಪ್ರಧಾನವಾಗಿ ಹರಡುವುದು ಗಾಳಿಯ ಮೂಲಕವೇ: 10 ಪುರಾವೆ ನೀಡಿದ ತಜ್ಞರು

- Advertisement -
- Advertisement -

ತಜ್ಞರ ತಂಡವೊಂದು ಲಭ್ಯವಿರುವ ಸಂಶೋಧನೆಗಳನ್ನು ಪರಿಷ್ಕರಣೆ ಮಾಡಿ, SARS-CoV-2 ನ ಪ್ರಾಥಮಿಕ ಪ್ರಸರಣ ಮಾರ್ಗವು ನಿಜಕ್ಕೂ ವಾಯುಗಾಮಿ (airborne) ಎಂಬುದಕ್ಕೆ ಬಲವಾದ, ಸ್ಥಿರವಾದ ಪುರಾವೆಗಳಿವೆ ಎಂದು ಮೌಲ್ಯಮಾಪನವನ್ನು ಪ್ರಕಟಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಳೆದ ವರ್ಷದಿಂದ, ಕೊರೊನಾ ವೈರಸ್ SARS-CoV-2 ಮುಖ್ಯವಾಗಿ ಗಾಳಿಯ ಮೂಲಕ ಹರಡುತ್ತದೆ ಎಂದು ಹಲವಾರು ಅಧ್ಯಯನಗಳು ಕಂಡುಹಿಡಿದವು. ವಿಶ್ವ ಆರೋಗ್ಯ ಸಂಸ್ಥೆಯಿಂದ ಧನಸಹಾಯ ಪಡೆದಿರುವ ಇತರ ಅಧ್ಯಯನಗಳು ಸಹ ನಡೆದಿವೆ, ಅವುಗಳು ಸಾಕ್ಷ್ಯ, ಆಧಾರಗಳನ್ನು ಅನಿರ್ದಿಷ್ಟವೆಂದು ಹೇಳಿದ್ದವು.

ಈಗ, ತಜ್ಞರ ಒಂದು ತಂಡವು ಲಭ್ಯವಿರುವ ಸಂಶೋಧನೆಗಳನ್ನು ಪರೀಕ್ಷಿಸಿ ಅದರ ಮೌಲ್ಯಮಾಪನವನ್ನು ದಿ ಲ್ಯಾನ್ಸೆಟ್‌ನಲ್ಲಿ ಪ್ರಕಟಿಸಿದೆ: SARS-CoV-2 ಪ್ರಾಥಮಿಕ ಪ್ರಸರಣ ಮಾರ್ಗವು ನಿಜಕ್ಕೂ ವಾಯುಗಾಮಿ (ಗಾಳಿಯ ಮೂಲಕ) ಎಂಬುದಕ್ಕೆ ಬಲವಾದ, ಸ್ಥಿರವಾದ ಪುರಾವೆಗಳಿವೆ ಎಂದು ಅದು ಪ್ರತಿಪಾದಿಸಿದೆ.

ತಜ್ಞರು ಈ ತೀರ್ಮಾನಕ್ಕೆ ಹೇಗೆ ಬಂದರು?

ಅಸ್ತಿತ್ವದಲ್ಲಿರುವ ಸಂಶೋಧನೆಗಳನ್ನು ಪರಿಶೀಲಿಸಿರುವ ಯುಕೆ, ಯುಎಸ್ ಮತ್ತು ಕೆನಡಾದ ಆರು ತಜ್ಞರು SARS-CoV-2 ಕೊರೊನಾ ಪ್ರಾಥಮಿಕವಾಗಿ ವಾಯುಗಾಮಿ ಮಾರ್ಗದ ಮೂಲಕ ಹರಡುತ್ತದೆ ಎಂಬ ಪ್ರಮೇಯವನ್ನು ಒಟ್ಟಾಗಿ ಬೆಂಬಲಿಸುವ 10 ಪುರಾವೆಗಳನ್ನು ಗುರುತಿಸಿದ್ದಾರೆ. ಅವುಗಳೆಂದರೆ

1. ಸೂಪರ್-ಸ್ಪ್ರೆಡರ್ ಘಟನೆಗಳು ಗಣನೀಯ SARS-CoV-2 ಪ್ರಸರಣಕ್ಕೆ ಕಾರಣವಾಗಿವೆ. ವಾಸ್ತವವಾಗಿ, ಅಂತಹ ಘಟನೆಗಳು ಸಾಂಕ್ರಾಮಿಕ ರೋಗದ ಪ್ರಾಥಮಿಕ ಚಾಲಕರಾಗಿರಬಹುದು. ಸಂಗೀತ ಕಚೇರಿಗಳು, ಕ್ರೂಸ್ ಹಡಗುಗಳು ಇತ್ಯಾದಿಗಳಲ್ಲಿನ ಮಾನವ ನಡವಳಿಕೆಗಳು ಮತ್ತು ಇತರ ಅಸ್ಥಿರಗಳ ವಿವರವಾದ ವಿಶ್ಲೇಷಣೆಗಳು “SARS-CoV-2 ವಾಯುಗಾಮಿ ಹರಡುವಿಕೆಗೆ ಅನುಗುಣವಾಗಿರುತ್ತವೆ, ಅದನ್ನು ಹನಿಗಳು ಅಥವಾ ಫೋಮೈಟ್‌ಗಳಿಂದ ಸಮರ್ಪಕವಾಗಿ ವಿವರಿಸಲಾಗುವುದಿಲ್ಲ” ಎಂದು ಅವರು ಬರೆದಿದ್ದಾರೆ.

2. ಅಕ್ಕಪಕ್ಕದ ಕೋಣೆಗಳಲ್ಲಿನ ಜನರ ನಡುವೆ SARS-CoV-2 ನ ದೀರ್ಘ-ವ್ಯಾಪ್ತಿಯ ಪ್ರಸರಣವನ್ನು ಕ್ವಾರಂಟೈನ್ ಹೋಟೆಲ್‌ಗಳಲ್ಲಿ ದಾಖಲಿಸಲಾಗಿದೆ. ಆದರೆ ಅವರು ಎಂದಿಗೂ ಪರಸ್ಪರ ಭೇಟಿ ಆಗಿರಲಿಲ್ಲ.

3. ರೋಗ ಲಕ್ಷಣ ಇರದ ಅಥವಾ ಇರುವ ಕೊರೊನಾ ಪೀಡಿತರ ಕೆಮ್ಮು ಅಥವಾ ಸೀನದೇ ಇರುವಾಗಲೂ ಸಂಭವಿಸುವ ಹರಡುವಿಕೆಯು ಜಾಗತಿಕವಾಗಿ ಎಲ್ಲಾ ಪ್ರಸರಣಗಳಲ್ಲಿ ಕನಿಷ್ಠ ಮೂರನೇ ಒಂದು ಭಾಗದಷ್ಟು, ಮತ್ತು ಬಹುಶಃ 59% ವರೆಗೆ ಕಾರಣವಾಗಬಹುದು. ಇದು ಕೂಡ ಗಾಳಿಯ ಮೂಲಕ ಪ್ರಸರಣದ ಸಾಧ್ಯತೆಯನ್ನು ತೋರಿಸುತ್ತದೆಯೇ ಹೊರು ಡ್ರಾಪಲೆಟ್‌ಗಳ ಮೂಲಕ ಅಲ್ಲ.

4. ಕೊರೊನಾ ಪ್ರಸಾರವು ಹೊರಾಂಗಣಕ್ಕಿಂತ ಒಳಾಂಗಣದಲ್ಲಿ ಹೆಚ್ಚಾಗಿದೆ. ಆದರೆ ಒಳಾಂಗಣ ವಾತಾಯನದಿಂದ (ವೆಂಟಿಲೇಷನ್) ಗಣನೀಯವಾಗಿ ಕಡಿಮೆಯಾಗುತ್ತದೆ. ಎರಡೂ ಅವಲೋಕನಗಳು ಪ್ರಧಾನವಾಗಿ ವಾಯುಗಾಮಿ ಪ್ರಸರಣ ಮಾರ್ಗವನ್ನು ಬೆಂಬಲಿಸುತ್ತವೆ ಎಂದು ಲೇಖಕರು ಬರೆದಿದ್ದಾರೆ.

5. ಆರೋಗ್ಯ ಸಂಸ್ಥೆಗಳಲ್ಲಿ ಹೊಸ ಸೋಂಕುಗಳನ್ನು ದಾಖಲಿಸಲಾಗಿದೆ, ಅಲ್ಲಿ ಕಟ್ಟುನಿಟ್ಟಾದ ಸಂಪರ್ಕ ಮತ್ತು ಡ್ರಾಪ್‌ಲೆಟ್ ಮುನ್ನೆಚ್ಚರಿಕೆಗಳ ಜಾರಿ ಮತ್ತು ಪಿಪಿಇ ಬಳಕೆಯನ್ನು ಹನಿಗಳಿಂದ ರಕ್ಷಿಸಲು ವಿನ್ಯಾಸಗೊಳಿಸಲಾಗಿದೆ. ಆದರೆ ಏರೋಸಾಲ್ (ಗಾಳಿ ಪ್ರಸರಣದ) ವ್ಯವಸ್ಥೆ ಇಲ್ಲ.

6. ಸಕ್ರಿಯ ಕೊರೊನಾ ಗಾಳಿಯಲ್ಲಿ ಪತ್ತೆಯಾಗಿದೆ. ಪ್ರಯೋಗಾಲಯದ ಪ್ರಯೋಗಗಳಲ್ಲಿ, ಕೊರೊನಾ 3 ಗಂಟೆಗಳವರೆಗೆ ಗಾಳಿಯಲ್ಲಿ ಸಾಂಕ್ರಾಮಿಕವಾಗಿ ಉಳಿಯಿತು.

7. ಕೋವಿಡ್ -19 ರೋಗಿಗಳಿರುವ ಆಸ್ಪತ್ರೆಗಳಲ್ಲಿ ಏರ್ ಫಿಲ್ಟರ್‌ಗಳು ಮತ್ತು ಕಟ್ಟಡದ ನಾಳಗಳಲ್ಲಿ ಕೊರೋನಾ ಅನ್ನು ಗುರುತಿಸಲಾಗಿದೆ; ಅಂತಹ ಸ್ಥಳಗಳನ್ನು ಏರೋಸಾಲ್ ಅಂದರೆ ಗಾಳಿಯಿಂದ ಮಾತ್ರ ತಲುಪಬಹುದು.

8. ಒಂದು ಪಂಜರದಲ್ಲಿ ಸೋಂಕುಯುಕ್ತ ಪ್ರಾಣಿಗಳು ಮತ್ತು ಇನ್ನೊಂದರಲ್ಲಿ ಸೋಂಕುರಹಿತ ಪ್ರಾಣಿಗಳನ್ನು ಇರಿಸಿ ಎರಡರ ನಡುವೆ ನಾಳದ ಮೂಲಕ ಗಾಳಿ ಸಂಪರ್ಕ ಏರ್ಪಡಿಸಿದಾಗ ಸೋಂಕು ಪ್ರಸಾರವಾಗಿದ್ದನ್ನು ಹಲವು ಅಧ್ಯನಗಳು ತೋರಿಸಿವೆ.

9. ವಾಯುಗಾಮಿ ಪ್ರಸರಣದ ಊಹೆಯನ್ನು ನಿರಾಕರಿಸಲು “ನಮ್ಮ ಜ್ಞಾನಕ್ಕೆ” ಯಾವುದೇ ಅಧ್ಯಯನವು ಬಲವಾದ ಅಥವಾ ಸ್ಥಿರವಾದ ಪುರಾವೆಗಳನ್ನು ಒದಗಿಸಿಲ್ಲ. ಸೋಂಕಿತ ಜನರೊಂದಿಗೆ ಗಾಳಿಯನ್ನು ಹಂಚಿಕೊಂಡಾಗ ಕೆಲವರು ಸೋಂಕನ್ನು ಪಡೆದಿಲ್ಲ, ಆದರೆ ಸಾಂಕ್ರಾಮಿಕ ವ್ಯಕ್ತಿಗಳ ನಡುವಿನ ವೈರಲ್ ಹರಡುವಿಕೆ ಪ್ರಮಾಣದಲ್ಲಿನ ವ್ಯತ್ಯಾಸ ಮತ್ತು ವಿವಿಧ ಪರಿಸರ ಪರಿಸ್ಥಿತಿಗಳು ಸೇರಿದಂತೆ ಹಲವು ಅಂಶಗಳ ಸಂಯೋಜನೆಯಿಂದ ಈ ಪರಿಸ್ಥಿತಿಯನ್ನು ವಿವರಿಸಬಹುದು.

10. ಪ್ರಸರಣದ ಇತರ ಪ್ರಬಲ ಮಾರ್ಗಗಳನ್ನು ಬೆಂಬಲಿಸಲು ಸೀಮಿತ ಪುರಾವೆಗಳಿವೆ. ಅಂದರೆ, ಉಸಿರಾಟದ ಹನಿ ಅಥವಾ ಫೋಮೈಟ್ ಪ್ರಸರಣ ಬೆಂಬಲಿಸಲು ಸಿಮೀತ ಆಧಾರಗಳಿವೆ.


ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...