Homeಮುಖಪುಟಕೊರೊನಾ ಪ್ರಧಾನವಾಗಿ ಹರಡುವುದು ಗಾಳಿಯ ಮೂಲಕವೇ: 10 ಪುರಾವೆ ನೀಡಿದ ತಜ್ಞರು

ಕೊರೊನಾ ಪ್ರಧಾನವಾಗಿ ಹರಡುವುದು ಗಾಳಿಯ ಮೂಲಕವೇ: 10 ಪುರಾವೆ ನೀಡಿದ ತಜ್ಞರು

- Advertisement -
- Advertisement -

ತಜ್ಞರ ತಂಡವೊಂದು ಲಭ್ಯವಿರುವ ಸಂಶೋಧನೆಗಳನ್ನು ಪರಿಷ್ಕರಣೆ ಮಾಡಿ, SARS-CoV-2 ನ ಪ್ರಾಥಮಿಕ ಪ್ರಸರಣ ಮಾರ್ಗವು ನಿಜಕ್ಕೂ ವಾಯುಗಾಮಿ (airborne) ಎಂಬುದಕ್ಕೆ ಬಲವಾದ, ಸ್ಥಿರವಾದ ಪುರಾವೆಗಳಿವೆ ಎಂದು ಮೌಲ್ಯಮಾಪನವನ್ನು ಪ್ರಕಟಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಳೆದ ವರ್ಷದಿಂದ, ಕೊರೊನಾ ವೈರಸ್ SARS-CoV-2 ಮುಖ್ಯವಾಗಿ ಗಾಳಿಯ ಮೂಲಕ ಹರಡುತ್ತದೆ ಎಂದು ಹಲವಾರು ಅಧ್ಯಯನಗಳು ಕಂಡುಹಿಡಿದವು. ವಿಶ್ವ ಆರೋಗ್ಯ ಸಂಸ್ಥೆಯಿಂದ ಧನಸಹಾಯ ಪಡೆದಿರುವ ಇತರ ಅಧ್ಯಯನಗಳು ಸಹ ನಡೆದಿವೆ, ಅವುಗಳು ಸಾಕ್ಷ್ಯ, ಆಧಾರಗಳನ್ನು ಅನಿರ್ದಿಷ್ಟವೆಂದು ಹೇಳಿದ್ದವು.

ಈಗ, ತಜ್ಞರ ಒಂದು ತಂಡವು ಲಭ್ಯವಿರುವ ಸಂಶೋಧನೆಗಳನ್ನು ಪರೀಕ್ಷಿಸಿ ಅದರ ಮೌಲ್ಯಮಾಪನವನ್ನು ದಿ ಲ್ಯಾನ್ಸೆಟ್‌ನಲ್ಲಿ ಪ್ರಕಟಿಸಿದೆ: SARS-CoV-2 ಪ್ರಾಥಮಿಕ ಪ್ರಸರಣ ಮಾರ್ಗವು ನಿಜಕ್ಕೂ ವಾಯುಗಾಮಿ (ಗಾಳಿಯ ಮೂಲಕ) ಎಂಬುದಕ್ಕೆ ಬಲವಾದ, ಸ್ಥಿರವಾದ ಪುರಾವೆಗಳಿವೆ ಎಂದು ಅದು ಪ್ರತಿಪಾದಿಸಿದೆ.

ತಜ್ಞರು ಈ ತೀರ್ಮಾನಕ್ಕೆ ಹೇಗೆ ಬಂದರು?

ಅಸ್ತಿತ್ವದಲ್ಲಿರುವ ಸಂಶೋಧನೆಗಳನ್ನು ಪರಿಶೀಲಿಸಿರುವ ಯುಕೆ, ಯುಎಸ್ ಮತ್ತು ಕೆನಡಾದ ಆರು ತಜ್ಞರು SARS-CoV-2 ಕೊರೊನಾ ಪ್ರಾಥಮಿಕವಾಗಿ ವಾಯುಗಾಮಿ ಮಾರ್ಗದ ಮೂಲಕ ಹರಡುತ್ತದೆ ಎಂಬ ಪ್ರಮೇಯವನ್ನು ಒಟ್ಟಾಗಿ ಬೆಂಬಲಿಸುವ 10 ಪುರಾವೆಗಳನ್ನು ಗುರುತಿಸಿದ್ದಾರೆ. ಅವುಗಳೆಂದರೆ

1. ಸೂಪರ್-ಸ್ಪ್ರೆಡರ್ ಘಟನೆಗಳು ಗಣನೀಯ SARS-CoV-2 ಪ್ರಸರಣಕ್ಕೆ ಕಾರಣವಾಗಿವೆ. ವಾಸ್ತವವಾಗಿ, ಅಂತಹ ಘಟನೆಗಳು ಸಾಂಕ್ರಾಮಿಕ ರೋಗದ ಪ್ರಾಥಮಿಕ ಚಾಲಕರಾಗಿರಬಹುದು. ಸಂಗೀತ ಕಚೇರಿಗಳು, ಕ್ರೂಸ್ ಹಡಗುಗಳು ಇತ್ಯಾದಿಗಳಲ್ಲಿನ ಮಾನವ ನಡವಳಿಕೆಗಳು ಮತ್ತು ಇತರ ಅಸ್ಥಿರಗಳ ವಿವರವಾದ ವಿಶ್ಲೇಷಣೆಗಳು “SARS-CoV-2 ವಾಯುಗಾಮಿ ಹರಡುವಿಕೆಗೆ ಅನುಗುಣವಾಗಿರುತ್ತವೆ, ಅದನ್ನು ಹನಿಗಳು ಅಥವಾ ಫೋಮೈಟ್‌ಗಳಿಂದ ಸಮರ್ಪಕವಾಗಿ ವಿವರಿಸಲಾಗುವುದಿಲ್ಲ” ಎಂದು ಅವರು ಬರೆದಿದ್ದಾರೆ.

2. ಅಕ್ಕಪಕ್ಕದ ಕೋಣೆಗಳಲ್ಲಿನ ಜನರ ನಡುವೆ SARS-CoV-2 ನ ದೀರ್ಘ-ವ್ಯಾಪ್ತಿಯ ಪ್ರಸರಣವನ್ನು ಕ್ವಾರಂಟೈನ್ ಹೋಟೆಲ್‌ಗಳಲ್ಲಿ ದಾಖಲಿಸಲಾಗಿದೆ. ಆದರೆ ಅವರು ಎಂದಿಗೂ ಪರಸ್ಪರ ಭೇಟಿ ಆಗಿರಲಿಲ್ಲ.

3. ರೋಗ ಲಕ್ಷಣ ಇರದ ಅಥವಾ ಇರುವ ಕೊರೊನಾ ಪೀಡಿತರ ಕೆಮ್ಮು ಅಥವಾ ಸೀನದೇ ಇರುವಾಗಲೂ ಸಂಭವಿಸುವ ಹರಡುವಿಕೆಯು ಜಾಗತಿಕವಾಗಿ ಎಲ್ಲಾ ಪ್ರಸರಣಗಳಲ್ಲಿ ಕನಿಷ್ಠ ಮೂರನೇ ಒಂದು ಭಾಗದಷ್ಟು, ಮತ್ತು ಬಹುಶಃ 59% ವರೆಗೆ ಕಾರಣವಾಗಬಹುದು. ಇದು ಕೂಡ ಗಾಳಿಯ ಮೂಲಕ ಪ್ರಸರಣದ ಸಾಧ್ಯತೆಯನ್ನು ತೋರಿಸುತ್ತದೆಯೇ ಹೊರು ಡ್ರಾಪಲೆಟ್‌ಗಳ ಮೂಲಕ ಅಲ್ಲ.

4. ಕೊರೊನಾ ಪ್ರಸಾರವು ಹೊರಾಂಗಣಕ್ಕಿಂತ ಒಳಾಂಗಣದಲ್ಲಿ ಹೆಚ್ಚಾಗಿದೆ. ಆದರೆ ಒಳಾಂಗಣ ವಾತಾಯನದಿಂದ (ವೆಂಟಿಲೇಷನ್) ಗಣನೀಯವಾಗಿ ಕಡಿಮೆಯಾಗುತ್ತದೆ. ಎರಡೂ ಅವಲೋಕನಗಳು ಪ್ರಧಾನವಾಗಿ ವಾಯುಗಾಮಿ ಪ್ರಸರಣ ಮಾರ್ಗವನ್ನು ಬೆಂಬಲಿಸುತ್ತವೆ ಎಂದು ಲೇಖಕರು ಬರೆದಿದ್ದಾರೆ.

5. ಆರೋಗ್ಯ ಸಂಸ್ಥೆಗಳಲ್ಲಿ ಹೊಸ ಸೋಂಕುಗಳನ್ನು ದಾಖಲಿಸಲಾಗಿದೆ, ಅಲ್ಲಿ ಕಟ್ಟುನಿಟ್ಟಾದ ಸಂಪರ್ಕ ಮತ್ತು ಡ್ರಾಪ್‌ಲೆಟ್ ಮುನ್ನೆಚ್ಚರಿಕೆಗಳ ಜಾರಿ ಮತ್ತು ಪಿಪಿಇ ಬಳಕೆಯನ್ನು ಹನಿಗಳಿಂದ ರಕ್ಷಿಸಲು ವಿನ್ಯಾಸಗೊಳಿಸಲಾಗಿದೆ. ಆದರೆ ಏರೋಸಾಲ್ (ಗಾಳಿ ಪ್ರಸರಣದ) ವ್ಯವಸ್ಥೆ ಇಲ್ಲ.

6. ಸಕ್ರಿಯ ಕೊರೊನಾ ಗಾಳಿಯಲ್ಲಿ ಪತ್ತೆಯಾಗಿದೆ. ಪ್ರಯೋಗಾಲಯದ ಪ್ರಯೋಗಗಳಲ್ಲಿ, ಕೊರೊನಾ 3 ಗಂಟೆಗಳವರೆಗೆ ಗಾಳಿಯಲ್ಲಿ ಸಾಂಕ್ರಾಮಿಕವಾಗಿ ಉಳಿಯಿತು.

7. ಕೋವಿಡ್ -19 ರೋಗಿಗಳಿರುವ ಆಸ್ಪತ್ರೆಗಳಲ್ಲಿ ಏರ್ ಫಿಲ್ಟರ್‌ಗಳು ಮತ್ತು ಕಟ್ಟಡದ ನಾಳಗಳಲ್ಲಿ ಕೊರೋನಾ ಅನ್ನು ಗುರುತಿಸಲಾಗಿದೆ; ಅಂತಹ ಸ್ಥಳಗಳನ್ನು ಏರೋಸಾಲ್ ಅಂದರೆ ಗಾಳಿಯಿಂದ ಮಾತ್ರ ತಲುಪಬಹುದು.

8. ಒಂದು ಪಂಜರದಲ್ಲಿ ಸೋಂಕುಯುಕ್ತ ಪ್ರಾಣಿಗಳು ಮತ್ತು ಇನ್ನೊಂದರಲ್ಲಿ ಸೋಂಕುರಹಿತ ಪ್ರಾಣಿಗಳನ್ನು ಇರಿಸಿ ಎರಡರ ನಡುವೆ ನಾಳದ ಮೂಲಕ ಗಾಳಿ ಸಂಪರ್ಕ ಏರ್ಪಡಿಸಿದಾಗ ಸೋಂಕು ಪ್ರಸಾರವಾಗಿದ್ದನ್ನು ಹಲವು ಅಧ್ಯನಗಳು ತೋರಿಸಿವೆ.

9. ವಾಯುಗಾಮಿ ಪ್ರಸರಣದ ಊಹೆಯನ್ನು ನಿರಾಕರಿಸಲು “ನಮ್ಮ ಜ್ಞಾನಕ್ಕೆ” ಯಾವುದೇ ಅಧ್ಯಯನವು ಬಲವಾದ ಅಥವಾ ಸ್ಥಿರವಾದ ಪುರಾವೆಗಳನ್ನು ಒದಗಿಸಿಲ್ಲ. ಸೋಂಕಿತ ಜನರೊಂದಿಗೆ ಗಾಳಿಯನ್ನು ಹಂಚಿಕೊಂಡಾಗ ಕೆಲವರು ಸೋಂಕನ್ನು ಪಡೆದಿಲ್ಲ, ಆದರೆ ಸಾಂಕ್ರಾಮಿಕ ವ್ಯಕ್ತಿಗಳ ನಡುವಿನ ವೈರಲ್ ಹರಡುವಿಕೆ ಪ್ರಮಾಣದಲ್ಲಿನ ವ್ಯತ್ಯಾಸ ಮತ್ತು ವಿವಿಧ ಪರಿಸರ ಪರಿಸ್ಥಿತಿಗಳು ಸೇರಿದಂತೆ ಹಲವು ಅಂಶಗಳ ಸಂಯೋಜನೆಯಿಂದ ಈ ಪರಿಸ್ಥಿತಿಯನ್ನು ವಿವರಿಸಬಹುದು.

10. ಪ್ರಸರಣದ ಇತರ ಪ್ರಬಲ ಮಾರ್ಗಗಳನ್ನು ಬೆಂಬಲಿಸಲು ಸೀಮಿತ ಪುರಾವೆಗಳಿವೆ. ಅಂದರೆ, ಉಸಿರಾಟದ ಹನಿ ಅಥವಾ ಫೋಮೈಟ್ ಪ್ರಸರಣ ಬೆಂಬಲಿಸಲು ಸಿಮೀತ ಆಧಾರಗಳಿವೆ.


ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...