Homeಮುಖಪುಟಕೊರೊನಾ ಪ್ರಧಾನವಾಗಿ ಹರಡುವುದು ಗಾಳಿಯ ಮೂಲಕವೇ: 10 ಪುರಾವೆ ನೀಡಿದ ತಜ್ಞರು

ಕೊರೊನಾ ಪ್ರಧಾನವಾಗಿ ಹರಡುವುದು ಗಾಳಿಯ ಮೂಲಕವೇ: 10 ಪುರಾವೆ ನೀಡಿದ ತಜ್ಞರು

- Advertisement -
- Advertisement -

ತಜ್ಞರ ತಂಡವೊಂದು ಲಭ್ಯವಿರುವ ಸಂಶೋಧನೆಗಳನ್ನು ಪರಿಷ್ಕರಣೆ ಮಾಡಿ, SARS-CoV-2 ನ ಪ್ರಾಥಮಿಕ ಪ್ರಸರಣ ಮಾರ್ಗವು ನಿಜಕ್ಕೂ ವಾಯುಗಾಮಿ (airborne) ಎಂಬುದಕ್ಕೆ ಬಲವಾದ, ಸ್ಥಿರವಾದ ಪುರಾವೆಗಳಿವೆ ಎಂದು ಮೌಲ್ಯಮಾಪನವನ್ನು ಪ್ರಕಟಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಳೆದ ವರ್ಷದಿಂದ, ಕೊರೊನಾ ವೈರಸ್ SARS-CoV-2 ಮುಖ್ಯವಾಗಿ ಗಾಳಿಯ ಮೂಲಕ ಹರಡುತ್ತದೆ ಎಂದು ಹಲವಾರು ಅಧ್ಯಯನಗಳು ಕಂಡುಹಿಡಿದವು. ವಿಶ್ವ ಆರೋಗ್ಯ ಸಂಸ್ಥೆಯಿಂದ ಧನಸಹಾಯ ಪಡೆದಿರುವ ಇತರ ಅಧ್ಯಯನಗಳು ಸಹ ನಡೆದಿವೆ, ಅವುಗಳು ಸಾಕ್ಷ್ಯ, ಆಧಾರಗಳನ್ನು ಅನಿರ್ದಿಷ್ಟವೆಂದು ಹೇಳಿದ್ದವು.

ಈಗ, ತಜ್ಞರ ಒಂದು ತಂಡವು ಲಭ್ಯವಿರುವ ಸಂಶೋಧನೆಗಳನ್ನು ಪರೀಕ್ಷಿಸಿ ಅದರ ಮೌಲ್ಯಮಾಪನವನ್ನು ದಿ ಲ್ಯಾನ್ಸೆಟ್‌ನಲ್ಲಿ ಪ್ರಕಟಿಸಿದೆ: SARS-CoV-2 ಪ್ರಾಥಮಿಕ ಪ್ರಸರಣ ಮಾರ್ಗವು ನಿಜಕ್ಕೂ ವಾಯುಗಾಮಿ (ಗಾಳಿಯ ಮೂಲಕ) ಎಂಬುದಕ್ಕೆ ಬಲವಾದ, ಸ್ಥಿರವಾದ ಪುರಾವೆಗಳಿವೆ ಎಂದು ಅದು ಪ್ರತಿಪಾದಿಸಿದೆ.

ತಜ್ಞರು ಈ ತೀರ್ಮಾನಕ್ಕೆ ಹೇಗೆ ಬಂದರು?

ಅಸ್ತಿತ್ವದಲ್ಲಿರುವ ಸಂಶೋಧನೆಗಳನ್ನು ಪರಿಶೀಲಿಸಿರುವ ಯುಕೆ, ಯುಎಸ್ ಮತ್ತು ಕೆನಡಾದ ಆರು ತಜ್ಞರು SARS-CoV-2 ಕೊರೊನಾ ಪ್ರಾಥಮಿಕವಾಗಿ ವಾಯುಗಾಮಿ ಮಾರ್ಗದ ಮೂಲಕ ಹರಡುತ್ತದೆ ಎಂಬ ಪ್ರಮೇಯವನ್ನು ಒಟ್ಟಾಗಿ ಬೆಂಬಲಿಸುವ 10 ಪುರಾವೆಗಳನ್ನು ಗುರುತಿಸಿದ್ದಾರೆ. ಅವುಗಳೆಂದರೆ

1. ಸೂಪರ್-ಸ್ಪ್ರೆಡರ್ ಘಟನೆಗಳು ಗಣನೀಯ SARS-CoV-2 ಪ್ರಸರಣಕ್ಕೆ ಕಾರಣವಾಗಿವೆ. ವಾಸ್ತವವಾಗಿ, ಅಂತಹ ಘಟನೆಗಳು ಸಾಂಕ್ರಾಮಿಕ ರೋಗದ ಪ್ರಾಥಮಿಕ ಚಾಲಕರಾಗಿರಬಹುದು. ಸಂಗೀತ ಕಚೇರಿಗಳು, ಕ್ರೂಸ್ ಹಡಗುಗಳು ಇತ್ಯಾದಿಗಳಲ್ಲಿನ ಮಾನವ ನಡವಳಿಕೆಗಳು ಮತ್ತು ಇತರ ಅಸ್ಥಿರಗಳ ವಿವರವಾದ ವಿಶ್ಲೇಷಣೆಗಳು “SARS-CoV-2 ವಾಯುಗಾಮಿ ಹರಡುವಿಕೆಗೆ ಅನುಗುಣವಾಗಿರುತ್ತವೆ, ಅದನ್ನು ಹನಿಗಳು ಅಥವಾ ಫೋಮೈಟ್‌ಗಳಿಂದ ಸಮರ್ಪಕವಾಗಿ ವಿವರಿಸಲಾಗುವುದಿಲ್ಲ” ಎಂದು ಅವರು ಬರೆದಿದ್ದಾರೆ.

2. ಅಕ್ಕಪಕ್ಕದ ಕೋಣೆಗಳಲ್ಲಿನ ಜನರ ನಡುವೆ SARS-CoV-2 ನ ದೀರ್ಘ-ವ್ಯಾಪ್ತಿಯ ಪ್ರಸರಣವನ್ನು ಕ್ವಾರಂಟೈನ್ ಹೋಟೆಲ್‌ಗಳಲ್ಲಿ ದಾಖಲಿಸಲಾಗಿದೆ. ಆದರೆ ಅವರು ಎಂದಿಗೂ ಪರಸ್ಪರ ಭೇಟಿ ಆಗಿರಲಿಲ್ಲ.

3. ರೋಗ ಲಕ್ಷಣ ಇರದ ಅಥವಾ ಇರುವ ಕೊರೊನಾ ಪೀಡಿತರ ಕೆಮ್ಮು ಅಥವಾ ಸೀನದೇ ಇರುವಾಗಲೂ ಸಂಭವಿಸುವ ಹರಡುವಿಕೆಯು ಜಾಗತಿಕವಾಗಿ ಎಲ್ಲಾ ಪ್ರಸರಣಗಳಲ್ಲಿ ಕನಿಷ್ಠ ಮೂರನೇ ಒಂದು ಭಾಗದಷ್ಟು, ಮತ್ತು ಬಹುಶಃ 59% ವರೆಗೆ ಕಾರಣವಾಗಬಹುದು. ಇದು ಕೂಡ ಗಾಳಿಯ ಮೂಲಕ ಪ್ರಸರಣದ ಸಾಧ್ಯತೆಯನ್ನು ತೋರಿಸುತ್ತದೆಯೇ ಹೊರು ಡ್ರಾಪಲೆಟ್‌ಗಳ ಮೂಲಕ ಅಲ್ಲ.

4. ಕೊರೊನಾ ಪ್ರಸಾರವು ಹೊರಾಂಗಣಕ್ಕಿಂತ ಒಳಾಂಗಣದಲ್ಲಿ ಹೆಚ್ಚಾಗಿದೆ. ಆದರೆ ಒಳಾಂಗಣ ವಾತಾಯನದಿಂದ (ವೆಂಟಿಲೇಷನ್) ಗಣನೀಯವಾಗಿ ಕಡಿಮೆಯಾಗುತ್ತದೆ. ಎರಡೂ ಅವಲೋಕನಗಳು ಪ್ರಧಾನವಾಗಿ ವಾಯುಗಾಮಿ ಪ್ರಸರಣ ಮಾರ್ಗವನ್ನು ಬೆಂಬಲಿಸುತ್ತವೆ ಎಂದು ಲೇಖಕರು ಬರೆದಿದ್ದಾರೆ.

5. ಆರೋಗ್ಯ ಸಂಸ್ಥೆಗಳಲ್ಲಿ ಹೊಸ ಸೋಂಕುಗಳನ್ನು ದಾಖಲಿಸಲಾಗಿದೆ, ಅಲ್ಲಿ ಕಟ್ಟುನಿಟ್ಟಾದ ಸಂಪರ್ಕ ಮತ್ತು ಡ್ರಾಪ್‌ಲೆಟ್ ಮುನ್ನೆಚ್ಚರಿಕೆಗಳ ಜಾರಿ ಮತ್ತು ಪಿಪಿಇ ಬಳಕೆಯನ್ನು ಹನಿಗಳಿಂದ ರಕ್ಷಿಸಲು ವಿನ್ಯಾಸಗೊಳಿಸಲಾಗಿದೆ. ಆದರೆ ಏರೋಸಾಲ್ (ಗಾಳಿ ಪ್ರಸರಣದ) ವ್ಯವಸ್ಥೆ ಇಲ್ಲ.

6. ಸಕ್ರಿಯ ಕೊರೊನಾ ಗಾಳಿಯಲ್ಲಿ ಪತ್ತೆಯಾಗಿದೆ. ಪ್ರಯೋಗಾಲಯದ ಪ್ರಯೋಗಗಳಲ್ಲಿ, ಕೊರೊನಾ 3 ಗಂಟೆಗಳವರೆಗೆ ಗಾಳಿಯಲ್ಲಿ ಸಾಂಕ್ರಾಮಿಕವಾಗಿ ಉಳಿಯಿತು.

7. ಕೋವಿಡ್ -19 ರೋಗಿಗಳಿರುವ ಆಸ್ಪತ್ರೆಗಳಲ್ಲಿ ಏರ್ ಫಿಲ್ಟರ್‌ಗಳು ಮತ್ತು ಕಟ್ಟಡದ ನಾಳಗಳಲ್ಲಿ ಕೊರೋನಾ ಅನ್ನು ಗುರುತಿಸಲಾಗಿದೆ; ಅಂತಹ ಸ್ಥಳಗಳನ್ನು ಏರೋಸಾಲ್ ಅಂದರೆ ಗಾಳಿಯಿಂದ ಮಾತ್ರ ತಲುಪಬಹುದು.

8. ಒಂದು ಪಂಜರದಲ್ಲಿ ಸೋಂಕುಯುಕ್ತ ಪ್ರಾಣಿಗಳು ಮತ್ತು ಇನ್ನೊಂದರಲ್ಲಿ ಸೋಂಕುರಹಿತ ಪ್ರಾಣಿಗಳನ್ನು ಇರಿಸಿ ಎರಡರ ನಡುವೆ ನಾಳದ ಮೂಲಕ ಗಾಳಿ ಸಂಪರ್ಕ ಏರ್ಪಡಿಸಿದಾಗ ಸೋಂಕು ಪ್ರಸಾರವಾಗಿದ್ದನ್ನು ಹಲವು ಅಧ್ಯನಗಳು ತೋರಿಸಿವೆ.

9. ವಾಯುಗಾಮಿ ಪ್ರಸರಣದ ಊಹೆಯನ್ನು ನಿರಾಕರಿಸಲು “ನಮ್ಮ ಜ್ಞಾನಕ್ಕೆ” ಯಾವುದೇ ಅಧ್ಯಯನವು ಬಲವಾದ ಅಥವಾ ಸ್ಥಿರವಾದ ಪುರಾವೆಗಳನ್ನು ಒದಗಿಸಿಲ್ಲ. ಸೋಂಕಿತ ಜನರೊಂದಿಗೆ ಗಾಳಿಯನ್ನು ಹಂಚಿಕೊಂಡಾಗ ಕೆಲವರು ಸೋಂಕನ್ನು ಪಡೆದಿಲ್ಲ, ಆದರೆ ಸಾಂಕ್ರಾಮಿಕ ವ್ಯಕ್ತಿಗಳ ನಡುವಿನ ವೈರಲ್ ಹರಡುವಿಕೆ ಪ್ರಮಾಣದಲ್ಲಿನ ವ್ಯತ್ಯಾಸ ಮತ್ತು ವಿವಿಧ ಪರಿಸರ ಪರಿಸ್ಥಿತಿಗಳು ಸೇರಿದಂತೆ ಹಲವು ಅಂಶಗಳ ಸಂಯೋಜನೆಯಿಂದ ಈ ಪರಿಸ್ಥಿತಿಯನ್ನು ವಿವರಿಸಬಹುದು.

10. ಪ್ರಸರಣದ ಇತರ ಪ್ರಬಲ ಮಾರ್ಗಗಳನ್ನು ಬೆಂಬಲಿಸಲು ಸೀಮಿತ ಪುರಾವೆಗಳಿವೆ. ಅಂದರೆ, ಉಸಿರಾಟದ ಹನಿ ಅಥವಾ ಫೋಮೈಟ್ ಪ್ರಸರಣ ಬೆಂಬಲಿಸಲು ಸಿಮೀತ ಆಧಾರಗಳಿವೆ.


ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇಂದೆತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...