Homeಮುಖಪುಟಕೊರೊನಾ ತಡೆಯಲು ಪಣ: ಭಾರತೀಯರು ಈಗಲೂ ಪ್ರಜ್ಞಾವಂತರಂತೆ ನಡೆದುಕೊಳ್ಳದಿದ್ದರೆ ಇನ್ಯಾವಾಗ?

ಕೊರೊನಾ ತಡೆಯಲು ಪಣ: ಭಾರತೀಯರು ಈಗಲೂ ಪ್ರಜ್ಞಾವಂತರಂತೆ ನಡೆದುಕೊಳ್ಳದಿದ್ದರೆ ಇನ್ಯಾವಾಗ?

- Advertisement -
- Advertisement -

ದಶಕಗಳ ಹಿಂದೆಯೇ ಭಾರತ ದೇಶ ಪ್ಲೇಗ್, ಕಾಲರಾ, ಕ್ಷಯ, ಮಲೇರಿಯಾದಂತಹ ಮಾರಕ ಖಾಯಿಲೆಗಳ ವಿರುದ್ಧ ಹೋರಾಡಿ ಗೆಲುವು ಸಾಧಿಸಿದೆ. ಮಲೆನಾಡಿನ ಭಾಗದಲ್ಲಿ ಈಗಲೂ ಮಂಗನ ಖಾಯಿಲೆ ವಿರುದ್ಧ ನಿರಂತರ ಹೋರಾಟ ನಡೆಯುತ್ತಲೇ ಇದೆ. ಆದರೆ, ಇದೀಗ ಆವರಿಸಿರುವ ಕೊರೊನಾ ಇದೆಲ್ಲಕ್ಕಿಂತ ಅತ್ಯಂತ ಅಪಾಯಕಾರಿ.

ಎರಡು ತಿಂಗಳ ಹಿಂದೆ ಈ ಮಾರಣಾಂತಿಕ ಸೋಂಕು ಚೀನಾದಲ್ಲಿ ಸಾಲು ಸಾಲು ಬಲಿ ಪಡೆಯುತ್ತಿದ್ದ ಸಂದರ್ಭದಲ್ಲೇ ಭಾರತದಲ್ಲಿ ಅನೇಕ ಪ್ರಜ್ಞಾವಂತರು ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ, ಈ ಸೋಂಕು ಭಾರತಕ್ಕೆ ಬಾರದು ಎಂದೇ ಭಾವಿಸಿದ್ದ ಸರ್ಕಾರ ಕುಂಬಕರ್ಣ ನಿದ್ದಿಗೆ ಜಾರಿತ್ತು. ಆದರೆ, ಇದರ ನಿಜವಾದ ಬಿಸಿ ಯಾವಾಗ ತಟ್ಟಿತ್ತೋ ಇದೀಗ ಮೆಲ್ಲನೆ ನಿದ್ದೆಯಿಂದ ಜಾಗೃತರಾಗುತ್ತಿದೆ.

ಈ ಸೋಂಕು ಮನುಕುಲದ ಮುಂದಿಟ್ಟಿರುವ ಭೀತಿ ಅಷ್ಟಿಷ್ಟಲ್ಲ. ಚೀನಾದಲ್ಲಿ 3700 ಬಲಿ ಪಡೆದ ಈ ಮಹಾಮಾರಿ ಇಟಲಿಯಲ್ಲಿ ದಿನನಿತ್ಯ ಮರಣಮೃದಂಗ ಬಾರಿಸುತ್ತಿದೆ. ಈವರೆಗೆ 4,000 ಕ್ಕೂ ಅಧಿಕ ಜೀವಗಳ ಬಲಿ ಪಡೆದಿದೆ. ಭಾರತದಲ್ಲೂ 10 ಜನ ಬಲಿಯಾಗಿದ್ದಾರೆ. ವಿಶ್ವದಾದ್ಯಂತ ಒಟ್ಟಾರೆ ಮೃತಪಟ್ಟವರ ಸಂಖ್ಯೆ 14,000 ದಾಟಿದ್ದು, 2 ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ.

ಇಲ್ಲಿ ಗಮನಿಸಬೇಕಾದ ಅಗತ್ಯ ಅಂಶ ಎಂದರೆ ಸರ್ಕಾರದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಸೋಂಕಿತರ ಸಂಖ್ಯೆ ಕೇವಲ 500 ಎಂದು ಹೇಳಲಾಗುತ್ತಿದೆ. ಅಂದರೆ ಸರ್ಕಾರ ಈವರೆಗೆ ವಿದೇಶದಿಂದ ಆಗಮಿಸಿದವರು ಮತ್ತು ಅವರ ಕುಟುಂಬಸ್ಥರನ್ನು ಮಾತ್ರ ಪರೀಕ್ಷೆಗೆ ಒಳಪಡಿಸಿದೆ. ಆದರೆ, 130 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ ನಮ್ಮ-ನಿಮ್ಮಂತಹ ಸಾಮಾನ್ಯ ಜನ ಈವರೆಗೆ ಯಾವುದೇ ಪರೀಕ್ಷೆಗೆ ಒಳಪಟ್ಟಿಲ್ಲ. ಹೀಗಾಗಿ ಸೋಂಕಿತರ ಸಂಖ್ಯೆ ಇದರ ನೂರು ಪಟ್ಟು ಅಧಿಕ ಇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದು ಕೇವಲ ಇಂದು ಊಹೆಯಾಗಿದ್ದು ಒಂದು ವೇಳೆ ನಿಜವಾದರೆ ಭಾರತದಲ್ಲಿ 50 ರಿಂದ 80 ಮಿಲಿಯನ್ ಜನರಿಗೆ ಈ ಸೋಂಕು ವ್ಯಾಪಿಸುವ ಸಾಧ್ಯತೆ ಇದೆ. ಈ ಪೈಕಿ ಕನಿಷ್ಟ ಶೇ.2 ರಷ್ಟು ಜನ ಸಾವನ್ನಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, ಇಷ್ಟು ಜನರಿಗೆ ವೆಂಟಿಲೇಟರ್ ಸೇರಿದಂತೆ ಆರೋಗ್ಯ ವ್ಯವಸ್ಥೆಯನ್ನು ಅಗತ್ಯ ಸಲಕರಣೆ-ಸೌಲಭ್ಯಗಳನ್ನು ಕಲ್ಪಿಸುವುದು ಯಾವುದೇ ಸರ್ಕಾರಕ್ಕೂ ಸವಾಲಿನ ಕೆಲಸವೇ ಸರಿ. ಇದೇ ಕಾರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾರಣಾಂತಿಕ ಸೋಂಕು ಹರಡದಂತೆ ತಡೆಯುವ ಸಲುವಾಗಿ ಇಡೀ ದೇಶದಾದ್ಯಂತ ಲಾಕ್‌ಡೌನ್‌ ಘೋಷಿಸಿರುವುದು.

ಲಾಕ್‌ಡೌನ್‌ ಎಂದರೆ ಶಂಕ ಜಾಗಟೆ ಬಾರಿಸುವುದಲ್ಲ!

ಕೊರೋನಾ ಸೋಂಕಿಗೆ ಯಾವುದೇ ಔಷಧ ಈವರೆಗೆ ಕಂಡುಹಿಡಿದಿಲ್ಲ. ಹೀಗಾಗಿ ಇಡೀ ರಾಷ್ಟ್ರದಾದ್ಯಂತ ಈ ಸೋಂಕು ವ್ಯಾಪಿಸದಂತೆ ತಡೆಯಲು ನಮ್ಮ ಮುಂದಿರುವ ಏಕೈಕ ಸಾಧನ ಎಂದರೆ ಸುರಕ್ಷಿತವಾಗಿ ಮನೆಯಲ್ಲಿರುವುದು. ಇದರ ಹೊರತಾಗಿ ಬೇರಾವುದೇ ಮಾರ್ಗ ತೋಚುತ್ತಿಲ್ಲ.

ಇದೇ ಕಾರಣಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಬೆಳಗ್ಗೆ 6 ರಿಂದ 9ರ ವರೆಗೆ ಜನಸಾಮಾನ್ಯರು ಮನೆಯಿಂದ ಆಚೆ ಬರದಂತೆ ಕರೆ ನೀಡಿದ್ದರು. ಜನ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಕರೆ ನೀಡಿದ್ದರು. ಪ್ರಾಯೋಗಿಕವಾಗಿ ಇದೊಂದು ಉತ್ತಮ ನಡೆಯೇ ಸರಿ. ಆದರೆ, ಅವರು ಅದೊಂದು ಕರೆ ನೀಡಬಾರದಿತ್ತು.

ರಾತ್ರಿ 8 ಗಂಟೆಯ ಮನ್ ಕಿ ಬಾತ್‌ನ ಮಾತಿನ ನಡುವೆ ಪ್ರಧಾನಿ ಮೋದಿ ಕೊರೋನಾ ಭೀತಿಯ ನಡುವೆಯೂ ನಮಗಾಗಿ ಹಗಲಿರುಳು ದುಡಿಯುವ ವೈದ್ಯರು, ಪೌರ ಕಾರ್ಮಿಕರು, ಸೈನಿಕರು ಮತ್ತು ಪೊಲೀಸರಿಗಾಗಿ ಸಂಜೆ 5 ಗಂಟೆಯ ಮನೆಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟಲು ಹೇಳಿದರಷ್ಟೆ.

ಆದರೆ, ಪ್ರಧಾನಿಯ ಮಾತನ್ನು ನಾವು ಶಿರಸಾವಹಿಸಿ ಪಾಲಿಸುತ್ತೇವೆ ಎಂಬ ಭ್ರಮೆಯಲ್ಲೋ? ಭಕ್ತಿಯಲ್ಲೋ? ಒಂದಷ್ಟು ಜನ ದೇಶದಾದ್ಯಂತ ಅಲ್ಲಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾಮೂಹಿಕವಾಗಿ ಸೇರಿದ್ದಾರೆ. ಅಲ್ಲದೆ, ಅತಿರೇಕಕ್ಕೆ ಹೋದ ಅಭಿಮಾನದಿಂದಾಗಿ ಶಂಕ ಜಾಗಟೆ ಬಾರಿಸಿ ಪ್ರಧಾನಿಯ ಕರೆಗೆ ಬೆಂಬಲ ಸೂಚಿಸಿದ್ದಾರೆ. ಈ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಪ್ರಧಾನಿಯ ಮನವಿಗೆ ಎಳ್ಳುನೀರು ಬಿಟ್ಟಿದ್ದಾರೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ವೈರಲ್ಗೆ ಒಳಗಾದವು. ಇದು ನಿಜಕ್ಕೂ ಜವಾಬ್ದಾರಿಯುತ ಜನ ಸಮೂಹ ಮಾಡುವ ಕೆಲಸವಾಗಿರಲಿಲ್ಲ. ಅದರಲ್ಲೂ ಭಾರತ ವಿಶ್ವಗುರು ಎಂದು ಹೇಳಿಕೊಂಡು ಬೀಗುವ ಸಮಾಜದ ನಡುವೆ ಈ ಸನ್ನಿವೇಶ ವಿಶ್ವ ಮಟ್ಟದಲ್ಲಿ ಭಾರತವನ್ನು ನಗೆಪಾಟಲಿಗೆ ಈಡಾಗಿಸಿದ್ದು ಸುಳ್ಳಲ್ಲ.

ಆದರೆ, ನಿನ್ನೆಯವರೆಗೆ ಮನವಿಯಾಗಿದ್ದ ಲಾಕ್‌ಡೌನ್‌ ಇಂದು ಸರ್ಕಾರದ ಅಧಿಕೃತ ಆದೇಶವಾಗಿಯೇ ಹೊರಬಿದ್ದಿದೆ. ಜನ ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಇದೇ ಕಾರಣಕ್ಕೆ ಇಂದು ಸರ್ಕಾರ ವಲಯದಿಂದ ಖಾಸಗಿ ವಲಯದ ವರೆಗೆ ಎಲ್ಲಾ ವಲಯದಲ್ಲೂ work from home ಅಂದರೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಲಾಗಿದೆ. ಐಟಿಬಿಟಿ ಕಂಪೆನಿಗಳೂ ಸಹ ತಿಂಗಳ ಹಿಂದೆಯೇ ತಮ್ಮ ಉದ್ಯೋಗಿಗಳ ಸುರಕ್ಷತೆಯ ದೃಷ್ಟಿಯಿಂದ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಿದೆ.

ಹೀಗಾಗಿ ಜನ ಮನೆಯಲ್ಲೇ ಸುರಕ್ಷಿತವಾಗಿ ಕೆಲಸ ಮಾಡುವುದು ಒಳಿತು. ಅನಗತ್ಯವಾಗಿ ಒಂದೆಡೆ ಸೇರದೆ, ಜನ ಸಮೂಹ ಇರುವ ಸ್ಥಳಗಳಿಂದ ದೂರ ಇದ್ದಷ್ಟು ನಿಮ್ಮ ಮತ್ತು ನಿಮ್ಮ ಕುಟುಂಬದ ಆರೋಗ್ಯ ಕಾಪಾಡಲ್ಪಡುತ್ತದೆ. ಅಲ್ಲದೆ, ಭಾರತೀಯರು ನಿಜಕ್ಕೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ಮೂಲಕ ಮಾದರಿಯಾಗುವ ಕಾಲ ಇದಾಗಿದೆ. ಅಂದಹಾಗೆ ಈಗಲೂ ನಾವು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದರೆ ಮತ್ತೆ ಇನ್ಯಾವಾಗ? ಎಂಬುದು ಪ್ರಶ್ನೆ. ಹೀಗಾಗಿ ಮನೆಯಲ್ಲೇ ಇರಿ ಸುರಕ್ಷಿತವಾಗಿರಿ ಎಂಬುದು ನಾನು ಗೌರಿ ತಂಡದ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....