Homeಮುಖಪುಟಕೊರೊನಾ ತಡೆಯಲು ಪಣ: ಭಾರತೀಯರು ಈಗಲೂ ಪ್ರಜ್ಞಾವಂತರಂತೆ ನಡೆದುಕೊಳ್ಳದಿದ್ದರೆ ಇನ್ಯಾವಾಗ?

ಕೊರೊನಾ ತಡೆಯಲು ಪಣ: ಭಾರತೀಯರು ಈಗಲೂ ಪ್ರಜ್ಞಾವಂತರಂತೆ ನಡೆದುಕೊಳ್ಳದಿದ್ದರೆ ಇನ್ಯಾವಾಗ?

- Advertisement -
- Advertisement -

ದಶಕಗಳ ಹಿಂದೆಯೇ ಭಾರತ ದೇಶ ಪ್ಲೇಗ್, ಕಾಲರಾ, ಕ್ಷಯ, ಮಲೇರಿಯಾದಂತಹ ಮಾರಕ ಖಾಯಿಲೆಗಳ ವಿರುದ್ಧ ಹೋರಾಡಿ ಗೆಲುವು ಸಾಧಿಸಿದೆ. ಮಲೆನಾಡಿನ ಭಾಗದಲ್ಲಿ ಈಗಲೂ ಮಂಗನ ಖಾಯಿಲೆ ವಿರುದ್ಧ ನಿರಂತರ ಹೋರಾಟ ನಡೆಯುತ್ತಲೇ ಇದೆ. ಆದರೆ, ಇದೀಗ ಆವರಿಸಿರುವ ಕೊರೊನಾ ಇದೆಲ್ಲಕ್ಕಿಂತ ಅತ್ಯಂತ ಅಪಾಯಕಾರಿ.

ಎರಡು ತಿಂಗಳ ಹಿಂದೆ ಈ ಮಾರಣಾಂತಿಕ ಸೋಂಕು ಚೀನಾದಲ್ಲಿ ಸಾಲು ಸಾಲು ಬಲಿ ಪಡೆಯುತ್ತಿದ್ದ ಸಂದರ್ಭದಲ್ಲೇ ಭಾರತದಲ್ಲಿ ಅನೇಕ ಪ್ರಜ್ಞಾವಂತರು ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ, ಈ ಸೋಂಕು ಭಾರತಕ್ಕೆ ಬಾರದು ಎಂದೇ ಭಾವಿಸಿದ್ದ ಸರ್ಕಾರ ಕುಂಬಕರ್ಣ ನಿದ್ದಿಗೆ ಜಾರಿತ್ತು. ಆದರೆ, ಇದರ ನಿಜವಾದ ಬಿಸಿ ಯಾವಾಗ ತಟ್ಟಿತ್ತೋ ಇದೀಗ ಮೆಲ್ಲನೆ ನಿದ್ದೆಯಿಂದ ಜಾಗೃತರಾಗುತ್ತಿದೆ.

ಈ ಸೋಂಕು ಮನುಕುಲದ ಮುಂದಿಟ್ಟಿರುವ ಭೀತಿ ಅಷ್ಟಿಷ್ಟಲ್ಲ. ಚೀನಾದಲ್ಲಿ 3700 ಬಲಿ ಪಡೆದ ಈ ಮಹಾಮಾರಿ ಇಟಲಿಯಲ್ಲಿ ದಿನನಿತ್ಯ ಮರಣಮೃದಂಗ ಬಾರಿಸುತ್ತಿದೆ. ಈವರೆಗೆ 4,000 ಕ್ಕೂ ಅಧಿಕ ಜೀವಗಳ ಬಲಿ ಪಡೆದಿದೆ. ಭಾರತದಲ್ಲೂ 10 ಜನ ಬಲಿಯಾಗಿದ್ದಾರೆ. ವಿಶ್ವದಾದ್ಯಂತ ಒಟ್ಟಾರೆ ಮೃತಪಟ್ಟವರ ಸಂಖ್ಯೆ 14,000 ದಾಟಿದ್ದು, 2 ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ.

ಇಲ್ಲಿ ಗಮನಿಸಬೇಕಾದ ಅಗತ್ಯ ಅಂಶ ಎಂದರೆ ಸರ್ಕಾರದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಸೋಂಕಿತರ ಸಂಖ್ಯೆ ಕೇವಲ 500 ಎಂದು ಹೇಳಲಾಗುತ್ತಿದೆ. ಅಂದರೆ ಸರ್ಕಾರ ಈವರೆಗೆ ವಿದೇಶದಿಂದ ಆಗಮಿಸಿದವರು ಮತ್ತು ಅವರ ಕುಟುಂಬಸ್ಥರನ್ನು ಮಾತ್ರ ಪರೀಕ್ಷೆಗೆ ಒಳಪಡಿಸಿದೆ. ಆದರೆ, 130 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ ನಮ್ಮ-ನಿಮ್ಮಂತಹ ಸಾಮಾನ್ಯ ಜನ ಈವರೆಗೆ ಯಾವುದೇ ಪರೀಕ್ಷೆಗೆ ಒಳಪಟ್ಟಿಲ್ಲ. ಹೀಗಾಗಿ ಸೋಂಕಿತರ ಸಂಖ್ಯೆ ಇದರ ನೂರು ಪಟ್ಟು ಅಧಿಕ ಇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದು ಕೇವಲ ಇಂದು ಊಹೆಯಾಗಿದ್ದು ಒಂದು ವೇಳೆ ನಿಜವಾದರೆ ಭಾರತದಲ್ಲಿ 50 ರಿಂದ 80 ಮಿಲಿಯನ್ ಜನರಿಗೆ ಈ ಸೋಂಕು ವ್ಯಾಪಿಸುವ ಸಾಧ್ಯತೆ ಇದೆ. ಈ ಪೈಕಿ ಕನಿಷ್ಟ ಶೇ.2 ರಷ್ಟು ಜನ ಸಾವನ್ನಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, ಇಷ್ಟು ಜನರಿಗೆ ವೆಂಟಿಲೇಟರ್ ಸೇರಿದಂತೆ ಆರೋಗ್ಯ ವ್ಯವಸ್ಥೆಯನ್ನು ಅಗತ್ಯ ಸಲಕರಣೆ-ಸೌಲಭ್ಯಗಳನ್ನು ಕಲ್ಪಿಸುವುದು ಯಾವುದೇ ಸರ್ಕಾರಕ್ಕೂ ಸವಾಲಿನ ಕೆಲಸವೇ ಸರಿ. ಇದೇ ಕಾರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾರಣಾಂತಿಕ ಸೋಂಕು ಹರಡದಂತೆ ತಡೆಯುವ ಸಲುವಾಗಿ ಇಡೀ ದೇಶದಾದ್ಯಂತ ಲಾಕ್‌ಡೌನ್‌ ಘೋಷಿಸಿರುವುದು.

ಲಾಕ್‌ಡೌನ್‌ ಎಂದರೆ ಶಂಕ ಜಾಗಟೆ ಬಾರಿಸುವುದಲ್ಲ!

ಕೊರೋನಾ ಸೋಂಕಿಗೆ ಯಾವುದೇ ಔಷಧ ಈವರೆಗೆ ಕಂಡುಹಿಡಿದಿಲ್ಲ. ಹೀಗಾಗಿ ಇಡೀ ರಾಷ್ಟ್ರದಾದ್ಯಂತ ಈ ಸೋಂಕು ವ್ಯಾಪಿಸದಂತೆ ತಡೆಯಲು ನಮ್ಮ ಮುಂದಿರುವ ಏಕೈಕ ಸಾಧನ ಎಂದರೆ ಸುರಕ್ಷಿತವಾಗಿ ಮನೆಯಲ್ಲಿರುವುದು. ಇದರ ಹೊರತಾಗಿ ಬೇರಾವುದೇ ಮಾರ್ಗ ತೋಚುತ್ತಿಲ್ಲ.

ಇದೇ ಕಾರಣಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಬೆಳಗ್ಗೆ 6 ರಿಂದ 9ರ ವರೆಗೆ ಜನಸಾಮಾನ್ಯರು ಮನೆಯಿಂದ ಆಚೆ ಬರದಂತೆ ಕರೆ ನೀಡಿದ್ದರು. ಜನ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಕರೆ ನೀಡಿದ್ದರು. ಪ್ರಾಯೋಗಿಕವಾಗಿ ಇದೊಂದು ಉತ್ತಮ ನಡೆಯೇ ಸರಿ. ಆದರೆ, ಅವರು ಅದೊಂದು ಕರೆ ನೀಡಬಾರದಿತ್ತು.

ರಾತ್ರಿ 8 ಗಂಟೆಯ ಮನ್ ಕಿ ಬಾತ್‌ನ ಮಾತಿನ ನಡುವೆ ಪ್ರಧಾನಿ ಮೋದಿ ಕೊರೋನಾ ಭೀತಿಯ ನಡುವೆಯೂ ನಮಗಾಗಿ ಹಗಲಿರುಳು ದುಡಿಯುವ ವೈದ್ಯರು, ಪೌರ ಕಾರ್ಮಿಕರು, ಸೈನಿಕರು ಮತ್ತು ಪೊಲೀಸರಿಗಾಗಿ ಸಂಜೆ 5 ಗಂಟೆಯ ಮನೆಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟಲು ಹೇಳಿದರಷ್ಟೆ.

ಆದರೆ, ಪ್ರಧಾನಿಯ ಮಾತನ್ನು ನಾವು ಶಿರಸಾವಹಿಸಿ ಪಾಲಿಸುತ್ತೇವೆ ಎಂಬ ಭ್ರಮೆಯಲ್ಲೋ? ಭಕ್ತಿಯಲ್ಲೋ? ಒಂದಷ್ಟು ಜನ ದೇಶದಾದ್ಯಂತ ಅಲ್ಲಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾಮೂಹಿಕವಾಗಿ ಸೇರಿದ್ದಾರೆ. ಅಲ್ಲದೆ, ಅತಿರೇಕಕ್ಕೆ ಹೋದ ಅಭಿಮಾನದಿಂದಾಗಿ ಶಂಕ ಜಾಗಟೆ ಬಾರಿಸಿ ಪ್ರಧಾನಿಯ ಕರೆಗೆ ಬೆಂಬಲ ಸೂಚಿಸಿದ್ದಾರೆ. ಈ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಪ್ರಧಾನಿಯ ಮನವಿಗೆ ಎಳ್ಳುನೀರು ಬಿಟ್ಟಿದ್ದಾರೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ವೈರಲ್ಗೆ ಒಳಗಾದವು. ಇದು ನಿಜಕ್ಕೂ ಜವಾಬ್ದಾರಿಯುತ ಜನ ಸಮೂಹ ಮಾಡುವ ಕೆಲಸವಾಗಿರಲಿಲ್ಲ. ಅದರಲ್ಲೂ ಭಾರತ ವಿಶ್ವಗುರು ಎಂದು ಹೇಳಿಕೊಂಡು ಬೀಗುವ ಸಮಾಜದ ನಡುವೆ ಈ ಸನ್ನಿವೇಶ ವಿಶ್ವ ಮಟ್ಟದಲ್ಲಿ ಭಾರತವನ್ನು ನಗೆಪಾಟಲಿಗೆ ಈಡಾಗಿಸಿದ್ದು ಸುಳ್ಳಲ್ಲ.

ಆದರೆ, ನಿನ್ನೆಯವರೆಗೆ ಮನವಿಯಾಗಿದ್ದ ಲಾಕ್‌ಡೌನ್‌ ಇಂದು ಸರ್ಕಾರದ ಅಧಿಕೃತ ಆದೇಶವಾಗಿಯೇ ಹೊರಬಿದ್ದಿದೆ. ಜನ ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಇದೇ ಕಾರಣಕ್ಕೆ ಇಂದು ಸರ್ಕಾರ ವಲಯದಿಂದ ಖಾಸಗಿ ವಲಯದ ವರೆಗೆ ಎಲ್ಲಾ ವಲಯದಲ್ಲೂ work from home ಅಂದರೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಲಾಗಿದೆ. ಐಟಿಬಿಟಿ ಕಂಪೆನಿಗಳೂ ಸಹ ತಿಂಗಳ ಹಿಂದೆಯೇ ತಮ್ಮ ಉದ್ಯೋಗಿಗಳ ಸುರಕ್ಷತೆಯ ದೃಷ್ಟಿಯಿಂದ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಿದೆ.

ಹೀಗಾಗಿ ಜನ ಮನೆಯಲ್ಲೇ ಸುರಕ್ಷಿತವಾಗಿ ಕೆಲಸ ಮಾಡುವುದು ಒಳಿತು. ಅನಗತ್ಯವಾಗಿ ಒಂದೆಡೆ ಸೇರದೆ, ಜನ ಸಮೂಹ ಇರುವ ಸ್ಥಳಗಳಿಂದ ದೂರ ಇದ್ದಷ್ಟು ನಿಮ್ಮ ಮತ್ತು ನಿಮ್ಮ ಕುಟುಂಬದ ಆರೋಗ್ಯ ಕಾಪಾಡಲ್ಪಡುತ್ತದೆ. ಅಲ್ಲದೆ, ಭಾರತೀಯರು ನಿಜಕ್ಕೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ಮೂಲಕ ಮಾದರಿಯಾಗುವ ಕಾಲ ಇದಾಗಿದೆ. ಅಂದಹಾಗೆ ಈಗಲೂ ನಾವು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದರೆ ಮತ್ತೆ ಇನ್ಯಾವಾಗ? ಎಂಬುದು ಪ್ರಶ್ನೆ. ಹೀಗಾಗಿ ಮನೆಯಲ್ಲೇ ಇರಿ ಸುರಕ್ಷಿತವಾಗಿರಿ ಎಂಬುದು ನಾನು ಗೌರಿ ತಂಡದ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...