Homeಮುಖಪುಟಕೊರೊನಾ ತಡೆಯಲು ಪಣ: ಭಾರತೀಯರು ಈಗಲೂ ಪ್ರಜ್ಞಾವಂತರಂತೆ ನಡೆದುಕೊಳ್ಳದಿದ್ದರೆ ಇನ್ಯಾವಾಗ?

ಕೊರೊನಾ ತಡೆಯಲು ಪಣ: ಭಾರತೀಯರು ಈಗಲೂ ಪ್ರಜ್ಞಾವಂತರಂತೆ ನಡೆದುಕೊಳ್ಳದಿದ್ದರೆ ಇನ್ಯಾವಾಗ?

- Advertisement -
- Advertisement -

ದಶಕಗಳ ಹಿಂದೆಯೇ ಭಾರತ ದೇಶ ಪ್ಲೇಗ್, ಕಾಲರಾ, ಕ್ಷಯ, ಮಲೇರಿಯಾದಂತಹ ಮಾರಕ ಖಾಯಿಲೆಗಳ ವಿರುದ್ಧ ಹೋರಾಡಿ ಗೆಲುವು ಸಾಧಿಸಿದೆ. ಮಲೆನಾಡಿನ ಭಾಗದಲ್ಲಿ ಈಗಲೂ ಮಂಗನ ಖಾಯಿಲೆ ವಿರುದ್ಧ ನಿರಂತರ ಹೋರಾಟ ನಡೆಯುತ್ತಲೇ ಇದೆ. ಆದರೆ, ಇದೀಗ ಆವರಿಸಿರುವ ಕೊರೊನಾ ಇದೆಲ್ಲಕ್ಕಿಂತ ಅತ್ಯಂತ ಅಪಾಯಕಾರಿ.

ಎರಡು ತಿಂಗಳ ಹಿಂದೆ ಈ ಮಾರಣಾಂತಿಕ ಸೋಂಕು ಚೀನಾದಲ್ಲಿ ಸಾಲು ಸಾಲು ಬಲಿ ಪಡೆಯುತ್ತಿದ್ದ ಸಂದರ್ಭದಲ್ಲೇ ಭಾರತದಲ್ಲಿ ಅನೇಕ ಪ್ರಜ್ಞಾವಂತರು ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ, ಈ ಸೋಂಕು ಭಾರತಕ್ಕೆ ಬಾರದು ಎಂದೇ ಭಾವಿಸಿದ್ದ ಸರ್ಕಾರ ಕುಂಬಕರ್ಣ ನಿದ್ದಿಗೆ ಜಾರಿತ್ತು. ಆದರೆ, ಇದರ ನಿಜವಾದ ಬಿಸಿ ಯಾವಾಗ ತಟ್ಟಿತ್ತೋ ಇದೀಗ ಮೆಲ್ಲನೆ ನಿದ್ದೆಯಿಂದ ಜಾಗೃತರಾಗುತ್ತಿದೆ.

ಈ ಸೋಂಕು ಮನುಕುಲದ ಮುಂದಿಟ್ಟಿರುವ ಭೀತಿ ಅಷ್ಟಿಷ್ಟಲ್ಲ. ಚೀನಾದಲ್ಲಿ 3700 ಬಲಿ ಪಡೆದ ಈ ಮಹಾಮಾರಿ ಇಟಲಿಯಲ್ಲಿ ದಿನನಿತ್ಯ ಮರಣಮೃದಂಗ ಬಾರಿಸುತ್ತಿದೆ. ಈವರೆಗೆ 4,000 ಕ್ಕೂ ಅಧಿಕ ಜೀವಗಳ ಬಲಿ ಪಡೆದಿದೆ. ಭಾರತದಲ್ಲೂ 10 ಜನ ಬಲಿಯಾಗಿದ್ದಾರೆ. ವಿಶ್ವದಾದ್ಯಂತ ಒಟ್ಟಾರೆ ಮೃತಪಟ್ಟವರ ಸಂಖ್ಯೆ 14,000 ದಾಟಿದ್ದು, 2 ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ.

ಇಲ್ಲಿ ಗಮನಿಸಬೇಕಾದ ಅಗತ್ಯ ಅಂಶ ಎಂದರೆ ಸರ್ಕಾರದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಸೋಂಕಿತರ ಸಂಖ್ಯೆ ಕೇವಲ 500 ಎಂದು ಹೇಳಲಾಗುತ್ತಿದೆ. ಅಂದರೆ ಸರ್ಕಾರ ಈವರೆಗೆ ವಿದೇಶದಿಂದ ಆಗಮಿಸಿದವರು ಮತ್ತು ಅವರ ಕುಟುಂಬಸ್ಥರನ್ನು ಮಾತ್ರ ಪರೀಕ್ಷೆಗೆ ಒಳಪಡಿಸಿದೆ. ಆದರೆ, 130 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ ನಮ್ಮ-ನಿಮ್ಮಂತಹ ಸಾಮಾನ್ಯ ಜನ ಈವರೆಗೆ ಯಾವುದೇ ಪರೀಕ್ಷೆಗೆ ಒಳಪಟ್ಟಿಲ್ಲ. ಹೀಗಾಗಿ ಸೋಂಕಿತರ ಸಂಖ್ಯೆ ಇದರ ನೂರು ಪಟ್ಟು ಅಧಿಕ ಇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದು ಕೇವಲ ಇಂದು ಊಹೆಯಾಗಿದ್ದು ಒಂದು ವೇಳೆ ನಿಜವಾದರೆ ಭಾರತದಲ್ಲಿ 50 ರಿಂದ 80 ಮಿಲಿಯನ್ ಜನರಿಗೆ ಈ ಸೋಂಕು ವ್ಯಾಪಿಸುವ ಸಾಧ್ಯತೆ ಇದೆ. ಈ ಪೈಕಿ ಕನಿಷ್ಟ ಶೇ.2 ರಷ್ಟು ಜನ ಸಾವನ್ನಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, ಇಷ್ಟು ಜನರಿಗೆ ವೆಂಟಿಲೇಟರ್ ಸೇರಿದಂತೆ ಆರೋಗ್ಯ ವ್ಯವಸ್ಥೆಯನ್ನು ಅಗತ್ಯ ಸಲಕರಣೆ-ಸೌಲಭ್ಯಗಳನ್ನು ಕಲ್ಪಿಸುವುದು ಯಾವುದೇ ಸರ್ಕಾರಕ್ಕೂ ಸವಾಲಿನ ಕೆಲಸವೇ ಸರಿ. ಇದೇ ಕಾರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾರಣಾಂತಿಕ ಸೋಂಕು ಹರಡದಂತೆ ತಡೆಯುವ ಸಲುವಾಗಿ ಇಡೀ ದೇಶದಾದ್ಯಂತ ಲಾಕ್‌ಡೌನ್‌ ಘೋಷಿಸಿರುವುದು.

ಲಾಕ್‌ಡೌನ್‌ ಎಂದರೆ ಶಂಕ ಜಾಗಟೆ ಬಾರಿಸುವುದಲ್ಲ!

ಕೊರೋನಾ ಸೋಂಕಿಗೆ ಯಾವುದೇ ಔಷಧ ಈವರೆಗೆ ಕಂಡುಹಿಡಿದಿಲ್ಲ. ಹೀಗಾಗಿ ಇಡೀ ರಾಷ್ಟ್ರದಾದ್ಯಂತ ಈ ಸೋಂಕು ವ್ಯಾಪಿಸದಂತೆ ತಡೆಯಲು ನಮ್ಮ ಮುಂದಿರುವ ಏಕೈಕ ಸಾಧನ ಎಂದರೆ ಸುರಕ್ಷಿತವಾಗಿ ಮನೆಯಲ್ಲಿರುವುದು. ಇದರ ಹೊರತಾಗಿ ಬೇರಾವುದೇ ಮಾರ್ಗ ತೋಚುತ್ತಿಲ್ಲ.

ಇದೇ ಕಾರಣಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಬೆಳಗ್ಗೆ 6 ರಿಂದ 9ರ ವರೆಗೆ ಜನಸಾಮಾನ್ಯರು ಮನೆಯಿಂದ ಆಚೆ ಬರದಂತೆ ಕರೆ ನೀಡಿದ್ದರು. ಜನ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಕರೆ ನೀಡಿದ್ದರು. ಪ್ರಾಯೋಗಿಕವಾಗಿ ಇದೊಂದು ಉತ್ತಮ ನಡೆಯೇ ಸರಿ. ಆದರೆ, ಅವರು ಅದೊಂದು ಕರೆ ನೀಡಬಾರದಿತ್ತು.

ರಾತ್ರಿ 8 ಗಂಟೆಯ ಮನ್ ಕಿ ಬಾತ್‌ನ ಮಾತಿನ ನಡುವೆ ಪ್ರಧಾನಿ ಮೋದಿ ಕೊರೋನಾ ಭೀತಿಯ ನಡುವೆಯೂ ನಮಗಾಗಿ ಹಗಲಿರುಳು ದುಡಿಯುವ ವೈದ್ಯರು, ಪೌರ ಕಾರ್ಮಿಕರು, ಸೈನಿಕರು ಮತ್ತು ಪೊಲೀಸರಿಗಾಗಿ ಸಂಜೆ 5 ಗಂಟೆಯ ಮನೆಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟಲು ಹೇಳಿದರಷ್ಟೆ.

ಆದರೆ, ಪ್ರಧಾನಿಯ ಮಾತನ್ನು ನಾವು ಶಿರಸಾವಹಿಸಿ ಪಾಲಿಸುತ್ತೇವೆ ಎಂಬ ಭ್ರಮೆಯಲ್ಲೋ? ಭಕ್ತಿಯಲ್ಲೋ? ಒಂದಷ್ಟು ಜನ ದೇಶದಾದ್ಯಂತ ಅಲ್ಲಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾಮೂಹಿಕವಾಗಿ ಸೇರಿದ್ದಾರೆ. ಅಲ್ಲದೆ, ಅತಿರೇಕಕ್ಕೆ ಹೋದ ಅಭಿಮಾನದಿಂದಾಗಿ ಶಂಕ ಜಾಗಟೆ ಬಾರಿಸಿ ಪ್ರಧಾನಿಯ ಕರೆಗೆ ಬೆಂಬಲ ಸೂಚಿಸಿದ್ದಾರೆ. ಈ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಪ್ರಧಾನಿಯ ಮನವಿಗೆ ಎಳ್ಳುನೀರು ಬಿಟ್ಟಿದ್ದಾರೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ವೈರಲ್ಗೆ ಒಳಗಾದವು. ಇದು ನಿಜಕ್ಕೂ ಜವಾಬ್ದಾರಿಯುತ ಜನ ಸಮೂಹ ಮಾಡುವ ಕೆಲಸವಾಗಿರಲಿಲ್ಲ. ಅದರಲ್ಲೂ ಭಾರತ ವಿಶ್ವಗುರು ಎಂದು ಹೇಳಿಕೊಂಡು ಬೀಗುವ ಸಮಾಜದ ನಡುವೆ ಈ ಸನ್ನಿವೇಶ ವಿಶ್ವ ಮಟ್ಟದಲ್ಲಿ ಭಾರತವನ್ನು ನಗೆಪಾಟಲಿಗೆ ಈಡಾಗಿಸಿದ್ದು ಸುಳ್ಳಲ್ಲ.

ಆದರೆ, ನಿನ್ನೆಯವರೆಗೆ ಮನವಿಯಾಗಿದ್ದ ಲಾಕ್‌ಡೌನ್‌ ಇಂದು ಸರ್ಕಾರದ ಅಧಿಕೃತ ಆದೇಶವಾಗಿಯೇ ಹೊರಬಿದ್ದಿದೆ. ಜನ ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಇದೇ ಕಾರಣಕ್ಕೆ ಇಂದು ಸರ್ಕಾರ ವಲಯದಿಂದ ಖಾಸಗಿ ವಲಯದ ವರೆಗೆ ಎಲ್ಲಾ ವಲಯದಲ್ಲೂ work from home ಅಂದರೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಲಾಗಿದೆ. ಐಟಿಬಿಟಿ ಕಂಪೆನಿಗಳೂ ಸಹ ತಿಂಗಳ ಹಿಂದೆಯೇ ತಮ್ಮ ಉದ್ಯೋಗಿಗಳ ಸುರಕ್ಷತೆಯ ದೃಷ್ಟಿಯಿಂದ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಿದೆ.

ಹೀಗಾಗಿ ಜನ ಮನೆಯಲ್ಲೇ ಸುರಕ್ಷಿತವಾಗಿ ಕೆಲಸ ಮಾಡುವುದು ಒಳಿತು. ಅನಗತ್ಯವಾಗಿ ಒಂದೆಡೆ ಸೇರದೆ, ಜನ ಸಮೂಹ ಇರುವ ಸ್ಥಳಗಳಿಂದ ದೂರ ಇದ್ದಷ್ಟು ನಿಮ್ಮ ಮತ್ತು ನಿಮ್ಮ ಕುಟುಂಬದ ಆರೋಗ್ಯ ಕಾಪಾಡಲ್ಪಡುತ್ತದೆ. ಅಲ್ಲದೆ, ಭಾರತೀಯರು ನಿಜಕ್ಕೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ಮೂಲಕ ಮಾದರಿಯಾಗುವ ಕಾಲ ಇದಾಗಿದೆ. ಅಂದಹಾಗೆ ಈಗಲೂ ನಾವು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದರೆ ಮತ್ತೆ ಇನ್ಯಾವಾಗ? ಎಂಬುದು ಪ್ರಶ್ನೆ. ಹೀಗಾಗಿ ಮನೆಯಲ್ಲೇ ಇರಿ ಸುರಕ್ಷಿತವಾಗಿರಿ ಎಂಬುದು ನಾನು ಗೌರಿ ತಂಡದ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...