Homeಮುಖಪುಟಕೊರೊನಾ ತಡೆಯಲು ಪಣ: ಭಾರತೀಯರು ಈಗಲೂ ಪ್ರಜ್ಞಾವಂತರಂತೆ ನಡೆದುಕೊಳ್ಳದಿದ್ದರೆ ಇನ್ಯಾವಾಗ?

ಕೊರೊನಾ ತಡೆಯಲು ಪಣ: ಭಾರತೀಯರು ಈಗಲೂ ಪ್ರಜ್ಞಾವಂತರಂತೆ ನಡೆದುಕೊಳ್ಳದಿದ್ದರೆ ಇನ್ಯಾವಾಗ?

- Advertisement -
- Advertisement -

ದಶಕಗಳ ಹಿಂದೆಯೇ ಭಾರತ ದೇಶ ಪ್ಲೇಗ್, ಕಾಲರಾ, ಕ್ಷಯ, ಮಲೇರಿಯಾದಂತಹ ಮಾರಕ ಖಾಯಿಲೆಗಳ ವಿರುದ್ಧ ಹೋರಾಡಿ ಗೆಲುವು ಸಾಧಿಸಿದೆ. ಮಲೆನಾಡಿನ ಭಾಗದಲ್ಲಿ ಈಗಲೂ ಮಂಗನ ಖಾಯಿಲೆ ವಿರುದ್ಧ ನಿರಂತರ ಹೋರಾಟ ನಡೆಯುತ್ತಲೇ ಇದೆ. ಆದರೆ, ಇದೀಗ ಆವರಿಸಿರುವ ಕೊರೊನಾ ಇದೆಲ್ಲಕ್ಕಿಂತ ಅತ್ಯಂತ ಅಪಾಯಕಾರಿ.

ಎರಡು ತಿಂಗಳ ಹಿಂದೆ ಈ ಮಾರಣಾಂತಿಕ ಸೋಂಕು ಚೀನಾದಲ್ಲಿ ಸಾಲು ಸಾಲು ಬಲಿ ಪಡೆಯುತ್ತಿದ್ದ ಸಂದರ್ಭದಲ್ಲೇ ಭಾರತದಲ್ಲಿ ಅನೇಕ ಪ್ರಜ್ಞಾವಂತರು ಕೇಂದ್ರ ಸರ್ಕಾರವನ್ನು ಎಚ್ಚರಿಸಿದ್ದರು. ಆದರೆ, ಈ ಸೋಂಕು ಭಾರತಕ್ಕೆ ಬಾರದು ಎಂದೇ ಭಾವಿಸಿದ್ದ ಸರ್ಕಾರ ಕುಂಬಕರ್ಣ ನಿದ್ದಿಗೆ ಜಾರಿತ್ತು. ಆದರೆ, ಇದರ ನಿಜವಾದ ಬಿಸಿ ಯಾವಾಗ ತಟ್ಟಿತ್ತೋ ಇದೀಗ ಮೆಲ್ಲನೆ ನಿದ್ದೆಯಿಂದ ಜಾಗೃತರಾಗುತ್ತಿದೆ.

ಈ ಸೋಂಕು ಮನುಕುಲದ ಮುಂದಿಟ್ಟಿರುವ ಭೀತಿ ಅಷ್ಟಿಷ್ಟಲ್ಲ. ಚೀನಾದಲ್ಲಿ 3700 ಬಲಿ ಪಡೆದ ಈ ಮಹಾಮಾರಿ ಇಟಲಿಯಲ್ಲಿ ದಿನನಿತ್ಯ ಮರಣಮೃದಂಗ ಬಾರಿಸುತ್ತಿದೆ. ಈವರೆಗೆ 4,000 ಕ್ಕೂ ಅಧಿಕ ಜೀವಗಳ ಬಲಿ ಪಡೆದಿದೆ. ಭಾರತದಲ್ಲೂ 10 ಜನ ಬಲಿಯಾಗಿದ್ದಾರೆ. ವಿಶ್ವದಾದ್ಯಂತ ಒಟ್ಟಾರೆ ಮೃತಪಟ್ಟವರ ಸಂಖ್ಯೆ 14,000 ದಾಟಿದ್ದು, 2 ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ.

ಇಲ್ಲಿ ಗಮನಿಸಬೇಕಾದ ಅಗತ್ಯ ಅಂಶ ಎಂದರೆ ಸರ್ಕಾರದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಸೋಂಕಿತರ ಸಂಖ್ಯೆ ಕೇವಲ 500 ಎಂದು ಹೇಳಲಾಗುತ್ತಿದೆ. ಅಂದರೆ ಸರ್ಕಾರ ಈವರೆಗೆ ವಿದೇಶದಿಂದ ಆಗಮಿಸಿದವರು ಮತ್ತು ಅವರ ಕುಟುಂಬಸ್ಥರನ್ನು ಮಾತ್ರ ಪರೀಕ್ಷೆಗೆ ಒಳಪಡಿಸಿದೆ. ಆದರೆ, 130 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ ನಮ್ಮ-ನಿಮ್ಮಂತಹ ಸಾಮಾನ್ಯ ಜನ ಈವರೆಗೆ ಯಾವುದೇ ಪರೀಕ್ಷೆಗೆ ಒಳಪಟ್ಟಿಲ್ಲ. ಹೀಗಾಗಿ ಸೋಂಕಿತರ ಸಂಖ್ಯೆ ಇದರ ನೂರು ಪಟ್ಟು ಅಧಿಕ ಇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದು ಕೇವಲ ಇಂದು ಊಹೆಯಾಗಿದ್ದು ಒಂದು ವೇಳೆ ನಿಜವಾದರೆ ಭಾರತದಲ್ಲಿ 50 ರಿಂದ 80 ಮಿಲಿಯನ್ ಜನರಿಗೆ ಈ ಸೋಂಕು ವ್ಯಾಪಿಸುವ ಸಾಧ್ಯತೆ ಇದೆ. ಈ ಪೈಕಿ ಕನಿಷ್ಟ ಶೇ.2 ರಷ್ಟು ಜನ ಸಾವನ್ನಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, ಇಷ್ಟು ಜನರಿಗೆ ವೆಂಟಿಲೇಟರ್ ಸೇರಿದಂತೆ ಆರೋಗ್ಯ ವ್ಯವಸ್ಥೆಯನ್ನು ಅಗತ್ಯ ಸಲಕರಣೆ-ಸೌಲಭ್ಯಗಳನ್ನು ಕಲ್ಪಿಸುವುದು ಯಾವುದೇ ಸರ್ಕಾರಕ್ಕೂ ಸವಾಲಿನ ಕೆಲಸವೇ ಸರಿ. ಇದೇ ಕಾರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾರಣಾಂತಿಕ ಸೋಂಕು ಹರಡದಂತೆ ತಡೆಯುವ ಸಲುವಾಗಿ ಇಡೀ ದೇಶದಾದ್ಯಂತ ಲಾಕ್‌ಡೌನ್‌ ಘೋಷಿಸಿರುವುದು.

ಲಾಕ್‌ಡೌನ್‌ ಎಂದರೆ ಶಂಕ ಜಾಗಟೆ ಬಾರಿಸುವುದಲ್ಲ!

ಕೊರೋನಾ ಸೋಂಕಿಗೆ ಯಾವುದೇ ಔಷಧ ಈವರೆಗೆ ಕಂಡುಹಿಡಿದಿಲ್ಲ. ಹೀಗಾಗಿ ಇಡೀ ರಾಷ್ಟ್ರದಾದ್ಯಂತ ಈ ಸೋಂಕು ವ್ಯಾಪಿಸದಂತೆ ತಡೆಯಲು ನಮ್ಮ ಮುಂದಿರುವ ಏಕೈಕ ಸಾಧನ ಎಂದರೆ ಸುರಕ್ಷಿತವಾಗಿ ಮನೆಯಲ್ಲಿರುವುದು. ಇದರ ಹೊರತಾಗಿ ಬೇರಾವುದೇ ಮಾರ್ಗ ತೋಚುತ್ತಿಲ್ಲ.

ಇದೇ ಕಾರಣಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಬೆಳಗ್ಗೆ 6 ರಿಂದ 9ರ ವರೆಗೆ ಜನಸಾಮಾನ್ಯರು ಮನೆಯಿಂದ ಆಚೆ ಬರದಂತೆ ಕರೆ ನೀಡಿದ್ದರು. ಜನ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಕರೆ ನೀಡಿದ್ದರು. ಪ್ರಾಯೋಗಿಕವಾಗಿ ಇದೊಂದು ಉತ್ತಮ ನಡೆಯೇ ಸರಿ. ಆದರೆ, ಅವರು ಅದೊಂದು ಕರೆ ನೀಡಬಾರದಿತ್ತು.

ರಾತ್ರಿ 8 ಗಂಟೆಯ ಮನ್ ಕಿ ಬಾತ್‌ನ ಮಾತಿನ ನಡುವೆ ಪ್ರಧಾನಿ ಮೋದಿ ಕೊರೋನಾ ಭೀತಿಯ ನಡುವೆಯೂ ನಮಗಾಗಿ ಹಗಲಿರುಳು ದುಡಿಯುವ ವೈದ್ಯರು, ಪೌರ ಕಾರ್ಮಿಕರು, ಸೈನಿಕರು ಮತ್ತು ಪೊಲೀಸರಿಗಾಗಿ ಸಂಜೆ 5 ಗಂಟೆಯ ಮನೆಯ ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ತಟ್ಟಲು ಹೇಳಿದರಷ್ಟೆ.

ಆದರೆ, ಪ್ರಧಾನಿಯ ಮಾತನ್ನು ನಾವು ಶಿರಸಾವಹಿಸಿ ಪಾಲಿಸುತ್ತೇವೆ ಎಂಬ ಭ್ರಮೆಯಲ್ಲೋ? ಭಕ್ತಿಯಲ್ಲೋ? ಒಂದಷ್ಟು ಜನ ದೇಶದಾದ್ಯಂತ ಅಲ್ಲಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸಾಮೂಹಿಕವಾಗಿ ಸೇರಿದ್ದಾರೆ. ಅಲ್ಲದೆ, ಅತಿರೇಕಕ್ಕೆ ಹೋದ ಅಭಿಮಾನದಿಂದಾಗಿ ಶಂಕ ಜಾಗಟೆ ಬಾರಿಸಿ ಪ್ರಧಾನಿಯ ಕರೆಗೆ ಬೆಂಬಲ ಸೂಚಿಸಿದ್ದಾರೆ. ಈ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂಬ ಪ್ರಧಾನಿಯ ಮನವಿಗೆ ಎಳ್ಳುನೀರು ಬಿಟ್ಟಿದ್ದಾರೆ.

ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ವೈರಲ್ಗೆ ಒಳಗಾದವು. ಇದು ನಿಜಕ್ಕೂ ಜವಾಬ್ದಾರಿಯುತ ಜನ ಸಮೂಹ ಮಾಡುವ ಕೆಲಸವಾಗಿರಲಿಲ್ಲ. ಅದರಲ್ಲೂ ಭಾರತ ವಿಶ್ವಗುರು ಎಂದು ಹೇಳಿಕೊಂಡು ಬೀಗುವ ಸಮಾಜದ ನಡುವೆ ಈ ಸನ್ನಿವೇಶ ವಿಶ್ವ ಮಟ್ಟದಲ್ಲಿ ಭಾರತವನ್ನು ನಗೆಪಾಟಲಿಗೆ ಈಡಾಗಿಸಿದ್ದು ಸುಳ್ಳಲ್ಲ.

ಆದರೆ, ನಿನ್ನೆಯವರೆಗೆ ಮನವಿಯಾಗಿದ್ದ ಲಾಕ್‌ಡೌನ್‌ ಇಂದು ಸರ್ಕಾರದ ಅಧಿಕೃತ ಆದೇಶವಾಗಿಯೇ ಹೊರಬಿದ್ದಿದೆ. ಜನ ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಇದೇ ಕಾರಣಕ್ಕೆ ಇಂದು ಸರ್ಕಾರ ವಲಯದಿಂದ ಖಾಸಗಿ ವಲಯದ ವರೆಗೆ ಎಲ್ಲಾ ವಲಯದಲ್ಲೂ work from home ಅಂದರೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಲಾಗಿದೆ. ಐಟಿಬಿಟಿ ಕಂಪೆನಿಗಳೂ ಸಹ ತಿಂಗಳ ಹಿಂದೆಯೇ ತಮ್ಮ ಉದ್ಯೋಗಿಗಳ ಸುರಕ್ಷತೆಯ ದೃಷ್ಟಿಯಿಂದ ಮನೆಯಿಂದಲೇ ಕೆಲಸ ಮಾಡುವ ಅವಕಾಶ ನೀಡಿದೆ.

ಹೀಗಾಗಿ ಜನ ಮನೆಯಲ್ಲೇ ಸುರಕ್ಷಿತವಾಗಿ ಕೆಲಸ ಮಾಡುವುದು ಒಳಿತು. ಅನಗತ್ಯವಾಗಿ ಒಂದೆಡೆ ಸೇರದೆ, ಜನ ಸಮೂಹ ಇರುವ ಸ್ಥಳಗಳಿಂದ ದೂರ ಇದ್ದಷ್ಟು ನಿಮ್ಮ ಮತ್ತು ನಿಮ್ಮ ಕುಟುಂಬದ ಆರೋಗ್ಯ ಕಾಪಾಡಲ್ಪಡುತ್ತದೆ. ಅಲ್ಲದೆ, ಭಾರತೀಯರು ನಿಜಕ್ಕೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವ ಮೂಲಕ ಮಾದರಿಯಾಗುವ ಕಾಲ ಇದಾಗಿದೆ. ಅಂದಹಾಗೆ ಈಗಲೂ ನಾವು ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದರೆ ಮತ್ತೆ ಇನ್ಯಾವಾಗ? ಎಂಬುದು ಪ್ರಶ್ನೆ. ಹೀಗಾಗಿ ಮನೆಯಲ್ಲೇ ಇರಿ ಸುರಕ್ಷಿತವಾಗಿರಿ ಎಂಬುದು ನಾನು ಗೌರಿ ತಂಡದ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...